Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:23 - ಕನ್ನಡ ಸಮಕಾಲಿಕ ಅನುವಾದ

23 ಕ್ರಿಸ್ತ ಯೇಸು ಶ್ರಮೆಹೊಂದಿ, ಸತ್ತವರೊಳಗಿಂದ ಜೀವಂತರಾಗಿ ಮೊದಲು ಎದ್ದು ತಮ್ಮ ಜನರಿಗೂ ಯೆಹೂದ್ಯರಲ್ಲದವರಿಗೂ ಬೆಳಕಿನ ಸಂದೇಶವನ್ನು ತರುವರು ಎಂದು ಪ್ರವಾದಿಗಳು ಮತ್ತು ಮೋಶೆಯು ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದೇನೆಂದರೆ, ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕು; ಸತ್ತು ಪುನರುತ್ಥಾನವಾದವರಲ್ಲಿ ಮೊತ್ತಮೊದಲಿಗನಾಗಿ ಯೆಹೂದ್ಯರಿಗೂ ಅನ್ಯಧರ್ಮೀಯರಿಗೂ ಪರಂಜ್ಯೋತಿಯನ್ನು ಪ್ರಕಟಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಸಂಗತಿಗಳು ಏನಂದರೆ - ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕ್ರಿಸ್ತನು ಬಾಧೆಪಟ್ಟು ಸತ್ತು, ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದುಬಂದು, ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಬೆಳಕನ್ನು ತರುತ್ತಾನೆಂದು ಮೋಶೆ ಮತ್ತು ಪ್ರವಾದಿಗಳು ಹೇಳಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕ್ರಿಸ್ತ್ ಮರುನ್ ಮರ್‍ನಾತ್ನಾ ಅದ್ದಿಚೊ ಹೊವ್ನ್ ಉಟುನ್ ಯೆವ್ನ್, ಜುದೆವಾಕ್ನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಉಜ್ವೊಡ್ ಹಾನ್ತಾ ಮನುನ್ ಮೊಯ್ಜೆನ್ ಅನಿ ಪ್ರವಾದಿಯಾನಿ ಸಾಂಗ್ಲಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:23
29 ತಿಳಿವುಗಳ ಹೋಲಿಕೆ  

ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ.


ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,


ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಯಾರೂ ನನ್ನ ಪ್ರಾಣವನ್ನು ನನ್ನಿಂದ ತೆಗೆಯುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುವೆನು. ನಾನು ಅದನ್ನು ಕೊಡುವುದಕ್ಕೆ ನನಗೆ ಅಧಿಕಾರವಿದೆ. ಅದನ್ನು ಪುನಃ ತೆಗೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಪಡೆದಿದ್ದೇನೆ,” ಎಂದರು.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ನೀವು ಪರಿಗಣಿಸುವುದು ಏಕೆ?


ಹೀಗೆ ಯೇಸುವನ್ನು ಸಮಾಧಿಯಲ್ಲಿ ಕೊಳೆಯಲು ಬಿಡದೇ ದೇವರು ಅವರನ್ನು ಜೀವಂತವಾಗಿ ಎಬ್ಬಿಸಿದ ಸತ್ಯವು ಈ ಮಾತುಗಳಲ್ಲಿ ಬಂದಿದೆ: “ ‘ನಾನು ದಾವೀದನಿಗೆ ವಾಗ್ದಾನ ಮಾಡಿದ ಪವಿತ್ರ ಹಾಗೂ ನಿಶ್ಚಯವಾದ ಆಶೀರ್ವಾದಗಳನ್ನು ನಿಮಗೆ ಕೊಡುವೆನು’


ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು.


ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.


ಯೇಸು ಅವರಿಗೆ, “ಕ್ರಿಸ್ತನು ಹೀಗೆ ಬಾಧೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವುದು ಅಗತ್ಯವಾಗಿತ್ತೆಂತಲೂ


ಯೇಸು ಪುನರುತ್ಥಾನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪವಿತ್ರ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.


“ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಸೆರೆಯವರನ್ನು ಸೆರೆಯಿಂದಲೂ, ಕತ್ತಲೆಯಲ್ಲಿ ವಾಸಿಸುವವರನ್ನು ಕಾರಾಗೃಹದಿಂದಲೂ ಹೊರತರಬೇಕು,” ಎಂದು ಯೆಹೋವ ದೇವರಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ, ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಇತರ ಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.


“ಸಮುಯೇಲನು ಮೊದಲುಗೊಂಡು, ಮಾತನಾಡಿದ ಎಲ್ಲಾ ಪ್ರವಾದಿಗಳು ಕ್ರಮವಾಗಿ ಈ ದಿನಗಳನ್ನು ಕುರಿತು ಮುಂತಿಳಿಸಿದ್ದಾರೆ.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು