Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:3 - ಕನ್ನಡ ಸಮಕಾಲಿಕ ಅನುವಾದ

3 ಯೆಹೂದ್ಯರ ಎಲ್ಲಾ ಆಚಾರ ವಿಚಾರಗಳನ್ನು, ವಾದವಿವಾದಗಳನ್ನು ತಾವು ಚೆನ್ನಾಗಿ ತಿಳಿದಿದ್ದೀರಿ. ಆದ್ದರಿಂದ, ತಾವು ತಾಳ್ಮೆಯಿಂದ ಆಲಿಸಬೇಕೆಂದು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಕೆಂದರೆ, ತಾವು ಯೆಹೂದ್ಯರ ಆಚಾರವಿಚಾರಗಳನ್ನೂ ವಾದವಿವಾದಗಳನ್ನೂ ಚೆನ್ನಾಗಿ ಬಲ್ಲಿರಿ. ಆದುದರಿಂದ ನನ್ನ ಮಾತನ್ನು ತಾಳ್ಮೆಯಿಂದ ಆಲಿಸಬೇಕೆಂದು ವಿನಂತಿಸುತ್ತೇನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಕಂದರೆ ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನದಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನಿನ್ನೊಂದಿಗೆ ಮಾತಾಡಲು ಬಹು ಸಂತೋಷಪಡುತ್ತೇನೆ. ಯಾಕೆಂದರೆ, ಯೆಹೂದ್ಯರ ಎಲ್ಲಾ ಸಂಪ್ರದಾಯಗಳ ಬಗ್ಗೆ ಮತ್ತು ಯೆಹೂದ್ಯರು ವಾದಿಸುತ್ತಿರುವ ಸಂಗತಿಗಳ ಬಗ್ಗೆ ನಿನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ದಯವಿಟ್ಟು ನನ್ನ ಮಾತುಗಳನ್ನು ತಾಳ್ಮೆಯಿಂದ ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಿಯಾ ತುಮ್ಚ್ಯಾ ವಾಂಗ್ಡಾ ಬೊಲುಕ್ ಲೈ ಕುಶಿ ಹೊತಾ, ಕಶ್ಯಾಕ್ ಮಟ್ಲ್ಯಾರ್, ಜುದೆವಾಂಚ್ಯಾ ಸಗ್ಳ್ಯಾ ಪದ್ದತಿಯಾ ಅನಿ ಜುದೆವಾಂಚಿ ಲೊಕಾ ವಾದ್ ಕರ್ತಲ್ಯಾಚ್ಯಾ ವಿಶಯಾತ್ ತುಕಾ ಬರೆ ಕರುನ್ ಗೊತ್ತ್ ಹಾಯ್, ತೆಚೆಸಾಟ್ನಿ ಮಾಜ್ಯಾ ಗೊಸ್ಟಿಯಾ ಸಗ್ಳಿ ತಾಳ್ಮೆನ್ ಆಯ್ಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:3
13 ತಿಳಿವುಗಳ ಹೋಲಿಕೆ  

ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿಬಿಡುತ್ತಾರೆಂದೂ ನಮಗೆ ಒಪ್ಪಿಸಿದ ಮೋಶೆಯ ಪದ್ಧತಿಗಳನ್ನು ಬದಲಾಯಿಸುತ್ತಾರೆಂದೂ ಇವನು ಹೇಳುವುದನ್ನು ನಾವು ಕೇಳಿದ್ದೇವೆ,” ಎಂದು ಅವನ ವಿರುದ್ಧ ಸಾಕ್ಷಿ ಹೇಳಿಸಿದರು.


ಏಕೆಂದರೆ ರಾಜರಿಗೆ ಈ ಎಲ್ಲಾ ಸಂಗತಿಗಳ ಪರಿಚಯವಿದೆ. ರಾಜರೊಂದಿಗೆ ನಾನು ಸಹ ಭರವಸೆಯಿಂದ ಮಾತನಾಡುತ್ತಿರುವೆನು. ಇವುಗಳಲ್ಲಿ ಯಾವುದೂ ರಾಜರ ಗಮನಕ್ಕೆ ಬಾರದೆ ಹೋಗಿಲ್ಲ ಎಂಬುದು ನನ್ನ ದೃಢ ನಂಬಿಕೆ. ಏಕೆಂದರೆ ಇದು ಮೂಲೆಯಲ್ಲಿ ನಡೆದ ಸಂಗತಿಯಲ್ಲ.


ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ನಾಯಕರನ್ನು ಕರೆಯಿಸಿದನು. ಅವರೆಲ್ಲರೂ ಬಂದಾಗ ಅವರಿಗೆ, “ನನ್ನ ಸಹೋದರರೇ, ನಮ್ಮ ಜನರಿಗೂ ನಮ್ಮ ಪೂರ್ವಜರಿಗೂ ವಿರೋಧವಾಗಿ ನಾನು ಏನನ್ನೂ ಮಾಡಲಿಲ್ಲ. ಆದರೂ ನನ್ನನ್ನು ಯೆರೂಸಲೇಮಿನಲ್ಲಿ ಬಂಧಿಸಿ ರೋಮನ್ನರ ವಶಕ್ಕೆ ಒಪ್ಪಿಸಲಾಯಿತು.


ರಾಜರೇ, ನಮ್ಮ ಹನ್ನೆರಡು ಗೋತ್ರಗಳವರು ಅತ್ಯಾಸಕ್ತಿಯಿಂದ ಹಗಲಿರುಳು ದೇವರ ಸೇವೆಮಾಡುತ್ತಾ, ಆ ವಾಗ್ದಾನವು ನೆರವೇರುವುದೆಂದು ನಿರೀಕ್ಷಿಸುತ್ತಾ ಇದ್ದಾರೆ. ರಾಜರೇ, ಈ ನಿರೀಕ್ಷೆಯ ನಿಮಿತ್ತವಾಗಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ.


ಆದರೂ ಇವನ ಬಗ್ಗೆ ಖಚಿತವಾಗಿ ತಮಗೆ ಬರೆಯಲು ನನಗೇನು ಇಲ್ಲದಿರುವುದರಿಂದ, ಅಗ್ರಿಪ್ಪ ರಾಜನೇ, ಇವನನ್ನು ತಮ್ಮ ಮುಂದೆ ತಂದಿದ್ದೇನೆ. ಹೀಗೆ ಈ ವಿಚಾರಣೆಯ ಮೂಲಕ ಬರೆಯಲು ನನಗೇನಾದರೂ ಸಿಕ್ಕಬಹುದು.


ರಾಜ್ಯಪಾಲನು ಪೌಲನಿಗೆ ಮಾತನಾಡಬೇಕೆಂದು ಸನ್ನೆಮಾಡಿದಾಗ, ಪೌಲನು ಕೊಟ್ಟ ಉತ್ತರವಿದು: “ಅನೇಕ ವರ್ಷಗಳಿಂದ ತಾವು ಈ ದೇಶದ ಮೇಲೆ ನ್ಯಾಯಾಧೀಶರಾಗಿರುವುದನ್ನು ನಾನು ಬಲ್ಲೆ. ಆದ್ದರಿಂದ ನಾನು ಸಂತೋಷದಿಂದ ನನ್ನ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.


ಆದರೆ ನಿಮಗೆ ಹೆಚ್ಚು ತೊಂದರೆಕೊಟ್ಟು ಬೇಸರಪಡಿಸದೇ ನಾನು ಸಂಕ್ಷೇಪವಾಗಿ ಹೇಳುವ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.


ನೀನು ಯೆಹೂದ್ಯರಲ್ಲದವರ ಮಧ್ಯದಲ್ಲಿ ವಾಸಿಸುತ್ತಿರುವ ಯೆಹೂದ್ಯರಿಗೆ, ‘ನೀವು ಮೋಶೆಯ ನಿಯಮವನ್ನು ಅನುಸರಿಸಬೇಡಿರಿ, ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಬೇಡಿರಿ,’ ಎಂದು ಬೋಧಿಸುವುದಾಗಿ ನಿನ್ನ ವಿಷಯದಲ್ಲಿ ಅವರಿಗೆ ತಿಳಿದು ಬಂದಿದೆ.


ಅರಸನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆ ಮಾಡುವ ಲೇವಿಯರ ವಶದಲ್ಲಿ ಇರುವ ಈ ದೇವರ ನಿಯಮ ಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕ ರೂಪವಾಗಿ ಬರೆಯಿಸಿಕೊಳ್ಳಬೇಕು.


“ಅಗ್ರಿಪ್ಪ ರಾಜರೇ, ಯೆಹೂದ್ಯರು ಮಾಡಿದ ಎಲ್ಲಾ ಆಪಾದನೆಗಳಿಗೆ ವಿರುದ್ಧವಾಗಿ ಇಂದು ನನ್ನ ಪ್ರತಿವಾದ ಮಾಡಲು ತಮ್ಮ ಎದುರಿನಲ್ಲಿರುವುದು ನನ್ನ ಭಾಗ್ಯವೆಂದೇ ತಿಳಿಯುತ್ತೇನೆ.


ಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕು ಬಂದಿ ಷರತ್ತುಗಳಿಂದ ಕೂಡಿ ಮುದ್ರಿತವಾದ ಪತ್ರವನ್ನೂ, ಮುಚ್ಚಿದ್ದ ಪತ್ರವನ್ನೂ ತೆಗೆದುಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು