Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:31 - ಕನ್ನಡ ಸಮಕಾಲಿಕ ಅನುವಾದ

31 ಅವರು ಅಲ್ಲಿಂದ ಹೊರಗೆ ಬಂದು, ಒಬ್ಬರೊಂದಿಗೊಬ್ಬರು ಮಾತನಾಡುತ್ತಾ, “ಮರಣದಂಡನೆಗಾಗಲಿ, ಸೆರೆಮನೆ ವಾಸಕ್ಕಾಗಲಿ ಯೋಗ್ಯವಾದ ಏನನ್ನೂ ಈ ಮನುಷ್ಯನು ಮಾಡಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಲ್ಲಿಂದ ಹೊರಕ್ಕೆ ಹೋಗಿ, “ಮರಣದಂಡನೆಗಾಗಲಿ ಅಥವಾ ಸೆರೆಮನೆವಾಸಕ್ಕಾಗಲಿ ಗುರಿಮಾಡುವಂಥ ಯಾವ ತಪ್ಪನ್ನೂ ಈ ಮನುಷ್ಯ ಮಾಡಿಲ್ಲ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಈ ಮನುಷ್ಯನು ಮರಣದಂಡನೆಗಾಗಲಿ ಬೇಡಿಗಾಗಲಿ ಆಧಾರವಾದದ್ದೇನೂ ಮಾಡುವವನಲ್ಲ ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅಲ್ಲಿಂದ ಹೊರಗೆ ಹೋದರು. ಅವರು ಒಬ್ಬರಿಗೊಬ್ಬರು, “ಈ ಮನುಷ್ಯನನ್ನು ಕೊಲ್ಲಬಾರದು ಅಥವಾ ಸೆರೆಮನೆಗೆ ಹಾಕಬಾರದು. ಇವನು ನಿಜವಾಗಿಯೂ ಕೆಟ್ಟದ್ದೇನೂ ಮಾಡಿಲ್ಲ!” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಥೈತ್ನಾ ತೆನಿ ಭಾಯ್ರ್ ಜಾವ್ನ್ ಸೊಡ್ಲೆ, ತೆನಿ ಸಗ್ಳ್ಯಾನಿ ಎಕಾಮೆಕಾಕ್ ಹ್ಯಾ ಮಾನಸ್ಸಾಕ್ ಜಿವಾನಿ ಮಾರುಚೆ ನಾಹೊಲ್ಲ್ಯಾರ್ ಬಂಧಿಖಾನ್ಯಾತ್‍ ಬಿ ಘಾಲುನೈಯ್, ಹೆನಿ ಬುರ್ಶೆ ಕಾಯ್ ಕರುಕ್ ನಾ! ಮನುನ್ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:31
10 ತಿಳಿವುಗಳ ಹೋಲಿಕೆ  

ಇವನ ಮೇಲಿನ ದೋಷಾರೋಪಣೆ ಅವರ ನಿಯಮದ ಪ್ರಶ್ನೆಗಳಿಗೆ ಸಂಬಂಧಪಟ್ಟದ್ದು. ಇವನಲ್ಲಿ ಮರಣದಂಡನೆಗಾಗಲಿ, ಸೆರೆಮನೆಗಾಗಲಿ ಯೋಗ್ಯವಾದ ಯಾವ ಅಪರಾಧಗಳೂ ಇಲ್ಲವೆಂದು ನಾನು ಕಂಡುಕೊಂಡಿದ್ದೇನೆ.


ಆಗ ದೊಡ್ಡ ಗಲಭೆಯೇ ಉಂಟಾಯಿತು. ಫರಿಸಾಯರ ಪಕ್ಷದ ನಿಯಮ ಬೋಧಕರಲ್ಲಿ ಕೆಲವರು ಎದ್ದು, “ನಾವು ಈ ಮನುಷ್ಯನಲ್ಲಿ ಯಾವುದೇ ತಪ್ಪನ್ನು ಕಾಣುವುದಿಲ್ಲ. ಆತ್ಮವಾಗಲಿ, ದೇವದೂತನಾಗಲಿ ಇವನೊಂದಿಗೆ ಮಾತನಾಡಿರಬಹುದು,” ಎಂದು ವಾದಿಸಿದರು.


ಅವರು ನನ್ನನ್ನು ವಿಚಾರಣೆ ಮಾಡಿ, ನಾನು ಮರಣಶಿಕ್ಷೆ ಹೊಂದಲು ಯಾವ ಅಪರಾಧವೂ ಇಲ್ಲದಿರುವುದನ್ನು ಕಂಡು ನನ್ನನ್ನು ಬಿಡುಗಡೆ ಮಾಡಲಿದ್ದರು.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.


ಇವನು ಮರಣದಂಡನೆಗೆ ಯೋಗ್ಯವಾದ ಯಾವುದೇ ಅಪರಾಧ ಮಾಡಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಆದರೆ ಇವನು ನೇರವಾಗಿ ಚಕ್ರವರ್ತಿಗೇ ತನ್ನ ಬೇಡಿಕೆ ಸಲ್ಲಿಸಿದ್ದರಿಂದ ಇವನನ್ನು ರೋಮ್ ನಗರಕ್ಕೆ ಕಳುಹಿಸಲು ತೀರ್ಮಾನಿಸಿದ್ದೇನೆ.


ತರುವಾಯ ಪಿಲಾತನು, ಮುಖ್ಯಯಾಜಕರಿಗೂ ಜನರಿಗೂ, “ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ,” ಎಂದನು.


ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.


ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು