Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:1 - ಕನ್ನಡ ಸಮಕಾಲಿಕ ಅನುವಾದ

1 ನಾವು ಇಟಲಿಗೆ ಸಮುದ್ರ ಪ್ರಯಾಣ ಮಾಡಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಇತರ ಕೈದಿಗಳನ್ನೂ ಯೂಲ್ಯನೆಂಬ ಹೆಸರಿನ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅವನು ಚಕ್ರವರ್ತಿಯ ದಳಕ್ಕೆ ಸೇರಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಬೇರೆ ಕೆಲವು ಸೆರೆಯವರನ್ನೂ ಚಕ್ರವರ್ತಿಯ ಪಟಾಲವಿುಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾಯಿತು. ಪೌಲನಿಗೂ ಇತರ ಕೆಲವು ಕೈದಿಗಳಿಗೂ ಜೂಲಿಯಸ್ ಎಂಬ ಸೇನಾಧಿಕಾರಿಯು ಕಾವಲಾಗಿದ್ದನು. ಜೂಲಿಯಸನು ಚಕ್ರವರ್ತಿಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಮಿ ಇಟಲಿಕ್ ಢೊನಿತ್ನಾ ಜಾವ್ಚೆ ಮನುನ್ ನಿರ್ದಾರ್ ಕರ್ಲಾಂವ್ ಪಾವ್ಲುಕ್‍ ಅನಿ ಹುರಲ್ಯಾ ಚೊರಾಕ್ನಿ ಜುಲಿಯಸ್ ಮನ್ತಲೊ ಚಕ್ರವರ್ತಿಚ್ಯಾ ಸೈನ್ಯ ರೊಮಾಚೊ ಶತಾದಿಪತಿ ರಾಕ್ವಲಿ ಹೊವ್ನ್ ಹೊತ್ತೊ, ಜುಲಿಯಸ್ ಮನ್ತಲೊ ಚಕ್ರವರ್ತಿಚ್ಯಾ ಸೈನಿಕಾತ್ನಿ ಸೆವಾ ಕರಿತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:1
29 ತಿಳಿವುಗಳ ಹೋಲಿಕೆ  

ಇವನು ಮರಣದಂಡನೆಗೆ ಯೋಗ್ಯವಾದ ಯಾವುದೇ ಅಪರಾಧ ಮಾಡಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಆದರೆ ಇವನು ನೇರವಾಗಿ ಚಕ್ರವರ್ತಿಗೇ ತನ್ನ ಬೇಡಿಕೆ ಸಲ್ಲಿಸಿದ್ದರಿಂದ ಇವನನ್ನು ರೋಮ್ ನಗರಕ್ಕೆ ಕಳುಹಿಸಲು ತೀರ್ಮಾನಿಸಿದ್ದೇನೆ.


ಆಗ ಫೆಸ್ತನು ತನ್ನ ನ್ಯಾಯಸಭೆಯೊಂದಿಗೆ ಸಮಾಲೋಚನೆ ಮಾಡಿ, “ನೀನು ಕೈಸರನಿಗೆ ಮನವಿ ಮಾಡಿಕೊಂಡಿರುವೆ, ಕೈಸರನ ಬಳಿಗೇ ಹೋಗು!” ಎಂದು ಉತ್ತರಿಸಿದನು.


ಕೈಸರೈಯದಲ್ಲಿ ಕೊರ್ನೇಲ್ಯ ಎಂಬುವನಿದ್ದನು. “ಇಟಲಿಯ ದಳ” ಎಂದು ಹೆಸರಿನ ದಳಕ್ಕೆ ಅವನು ಶತಾಧಿಪತಿ.


ಆದರೆ ಶತಾಧಿಪತಿಯು ಪೌಲನು ಹೇಳಿದ್ದಕ್ಕೆ ಕಿವಿಗೊಡದೆ ನೌಕೆಯ ನಾವಿಕನು ಹಾಗೂ ಯಜಮಾನನು ಹೇಳಿದ ಮಾತುಗಳಿಗೆ ಕಿವಿಗೊಟ್ಟನು.


ಅಲ್ಲಿ ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅವನು ಪೊಂತ ಎಂಬ ಊರಿನ ನಿವಾಸಿ. ಎಲ್ಲಾ ಯೆಹೂದ್ಯರು ರೋಮ್ ಪಟ್ಟಣ ಬಿಟ್ಟು ಹೊರಟುಹೋಗಬೇಕೆಂದು ಚಕ್ರವರ್ತಿ ಕ್ಲೌದ್ಯನು ಆಜ್ಞೆ ಹೊರಡಿಸಿದ್ದರಿಂದ, ಅವನು ತನ್ನ ಹೆಂಡತಿ ಪ್ರಿಸ್ಕಿಲ್ಲಳೊಂದಿಗೆ ಇತ್ತೀಚೆಗೆ ಇಟಲಿಯನ್ನು ಬಿಟ್ಟು ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.


ನಿಮ್ಮ ಎಲ್ಲಾ ನಾಯಕರಿಗೆ, ದೇವಜನರಿಗೆ ವಂದನೆಗಳು. ಇಟಲಿಯವರು ನಿಮ್ಮನ್ನು ವಂದಿಸುತ್ತಾರೆ.


ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು.


ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಬಯಸಿ, ಸೈನಿಕರು ಹಾಗೆ ಮಾಡದಂತೆ ನೋಡಿಕೊಂಡು, ಈಜಲು ಬಲ್ಲವರು ಮೊದಲು ಸಮುದ್ರದಲ್ಲಿ ಜಿಗಿದು ಭೂಮಿಯನ್ನು ತಲುಪಬೇಕೆಂದು ಆಜ್ಞಾಪಿಸಿದನು.


ಅಲ್ಲಿ ಇಟಲಿಗೆ ಪ್ರಯಾಣಮಾಡುತ್ತಿದ್ದ ಅಲೆಕ್ಸಾಂದ್ರಿಯದ ನೌಕೆಯನ್ನು ಶತಾಧಿಪತಿಯು ಕಂಡು ನಮ್ಮನ್ನು ಆ ನೌಕೆಯಲ್ಲಿ ಹತ್ತಿಸಿದನು.


ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು.


ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿರಿ. ಏಕೆಂದರೆ ಇವನಿಗೆ ತಿಳಿಸಲು ಏನೋ ವಿಷಯವಿದೆಯಂತೆ,” ಎಂದನು.


ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು.


ಶತಾಧಿಪತಿ ಈ ಮಾತುಗಳನ್ನು ಕೇಳಿದಾಗ, ಸಹಸ್ರಾಧಿಪತಿಯ ಬಳಿಗೆ ಹೋಗಿ ಇದನ್ನು ವರದಿ ಮಾಡಿ, “ಇವನು ರೋಮ್ ಪೌರನು. ಈಗ ನೀನೇನು ಮಾಡಬೇಕೆಂದಿದ್ದೀ?” ಎಂದು ಅವನನ್ನು ಪ್ರಶ್ನಿಸಿದನು.


ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ಕರೆದುಕೊಂಡು ಜನಸಮೂಹದ ಬಳಿಗೆ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ ಅವನ ಸೈನಿಕರನ್ನೂ ಕಂಡಾಗ ಪೌಲನನ್ನು ಹೊಡೆಯುವುದನ್ನು ನಿಲ್ಲಿಸಿದರು.


ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.


ಪೌಲನಿಗೆ ಈ ದರ್ಶನವಾದಾಗ ಆ ಜನರಿಗೆ ಸುವಾರ್ತೆ ಸಾರಲು ದೇವರು ನಮ್ಮನ್ನು ಕರೆಯುತ್ತಿದ್ದಾರೆಂದು ತಿಳಿದುಕೊಂಡು ಕೂಡಲೇ ಮಕೆದೋನ್ಯಕ್ಕೆ ಹೊರಡಲು ಸಿದ್ಧರಾದೆವು.


ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು.


ಆಗ ಶತಾಧಿಪತಿಯು, ನಡೆದದ್ದನ್ನು ಕಂಡು, “ಈತನು ನೀತಿವಂತನೇ ಸರಿ,” ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.


ಆಗ ಒಬ್ಬ ಶತಾಧಿಪತಿಗೆ, ಪ್ರಿಯನಾಗಿದ್ದ ಸೇವಕ, ಅಸ್ವಸ್ಥನಾಗಿ ಸಾಯುವುದರಲ್ಲಿದ್ದನು.


ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ತನ್ನ ಯೌವನದಲ್ಲಿ ನೊಗವನ್ನು ಹೊಂದಿರುವುದು ಮಾನವನಿಗೆ ಒಳ್ಳೆಯದು.


ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ಆದರೆ ಯೆಹೋವ ದೇವರ ಆಲೋಚನೆಗಳು ಎಂದೆಂದಿಗೂ ಅವರ ಹೃದಯದ ಉದ್ದೇಶಗಳು ತಲತಲಾಂತರಕ್ಕೂ ನಿಲ್ಲುತ್ತವೆ.


ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.


ನಾವು ಸುರಕ್ಷಿತವಾಗಿ ದಡ ಸೇರಿದ ಮೇಲೆ, ಆ ದ್ವೀಪವು ಮಾಲ್ಟ ದ್ವೀಪವೆಂದು ಕಂಡುಕೊಂಡೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು