Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:13 - ಕನ್ನಡ ಸಮಕಾಲಿಕ ಅನುವಾದ

13 ದಕ್ಷಿಣ ಸುಳಿಗಾಳಿ ಬೀಸಲು ಪ್ರಾರಂಭಿಸಿದಾಗ, ಅವರು ತಾವು ಬಯಸಿದ್ದು ದೊರೆಯಿತೆಂದು ಭಾವಿಸಿದರು; ಆದ್ದರಿಂದ ಅವರು ಲಂಗರು ಎತ್ತಿಕಟ್ಟಿ ಕ್ರೇತದ್ವೀಪದ ತೀರದ ಸಮೀಪವಾಗಿಯೇ ಸಮುದ್ರ ಪ್ರಯಾಣ ಬೆಳೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಕ್ಷಿಣದಿಂದ ತೆಳುಗಾಳಿ ಬೀಸಲಾರಂಭಿಸಿತು. ಪ್ರಯಾಣಿಕರು ತಮ್ಮ ಉದ್ದೇಶ ಕೈಗೂಡಿತೆಂದು ಭಾವಿಸಿದರು. ಅವರು ಹಡಗಿನ ಲಂಗರುಗಳನ್ನು ಎತ್ತಿ, ಕ್ರೇಟ್ ದ್ವೀಪವನ್ನು ಅನುಸರಿಸುತ್ತಾ, ತೀರದ ಮಗ್ಗುಲಲ್ಲೇ ಪ್ರಯಾಣ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರ ಎತ್ತಿ ಕ್ರೇತದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಒಳ್ಳೆಯ ಗಾಳಿಯು ದಕ್ಷಿಣದ ಕಡೆಯಿಂದ ಬೀಸತೊಡಗಿತು. ಹಡಗಿನಲ್ಲಿದ್ದ ಜನರು, “ನಮಗೆ ಬೇಕಾಗಿದ್ದು ಈ ಗಾಳಿಯೇ, ಈಗ ಅದು ನಮಗೆ ದೊರಕಿತು!” ಎಂದು ಭಾವಿಸಿಕೊಂಡರು. ಆದ್ದರಿಂದ ಅವರು ಹಡಗಿನ ಲಂಗರನ್ನು ಮೇಲಕ್ಕೆ ಎಳೆದರು. ನಾವು ಕ್ರೇಟ್ ದ್ವೀಪದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾನಾ ಅಮಿ ಜಾವ್ಕ್ ಆಸ್ಯಾ ಕರಲ್ಯಾ ದಿಕ್ಕಾಕ್ನಾ ಬರೊ ವಾರೊ ಯೆವ್ಕ್ ಲಾಗ್ಲೊ, ತನ್ನಾ ಢೊನಿತ್ನಿ ಸಗ್ಳ್ಯಿಲೊಕಾಬಿ, ಆಮ್ಕಾ ಪಾಜೆ ಹೊಲ್ಲೊ ಅಸ್ಲೊಚ್ ವಾರೊ ಅತ್ತಾ ತೊ ಅಮ್ಕಾ ಗಾವ್ಲೊ! ಮನುನ್ ಕಳ್ವುನ್ ಘೆವ್ಕ್ ಲಾಗ್ಲೆ, ಅನಿ ತೆನಿ ಢೊನಾಕ್ ಭಾಂದುನ್ ಥವಲ್ಲೊ ಗೊಕ್ಕೊ ವೈರ್ ಪರ್ತುನ್ ಘೆಟ್ಲ್ಯಾನಿ, ಅಮಿ ಕ್ರೆಟ್ ಮನ್ತಲ್ಯಾ ದ್ವಿಪಾಚ್ಯಾ ಕರಾವಳಿಕ್ನಾ ಗೆಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:13
10 ತಿಳಿವುಗಳ ಹೋಲಿಕೆ  

ದಕ್ಷಿಣ ದಿಕ್ಕಿನ ಗಾಳಿ ಬೀಸುವುದನ್ನು ನೀವು ನೋಡಿ, ‘ಸೆಕೆಯಾಗುತ್ತದೆ,’ ಎನ್ನುತ್ತೀರಿ, ಅದು ಹಾಗೆ ಆಗುತ್ತದೆ.


ಉತ್ತರಗಾಳಿಯೇ, ಬೀಸು, ದಕ್ಷಿಣ ಗಾಳಿಯೇ ಬಾ ನನ್ನ ತೋಟದ ಮೇಲೆ ಬೀಸು. ಸುಗಂಧ ಸುವಾಸನೆ ಹರಡಲಿ. ನನ್ನ ಪ್ರಿಯನು ತನ್ನ ತೋಟಕ್ಕೆ ಬಂದು ಉತ್ತಮ ಫಲಗಳನ್ನು ರುಚಿಸಲಿ.


ಮೂಡಣ ಗಾಳಿಯನ್ನು ಆಕಾಶದಲ್ಲಿ ಹುಟ್ಟಿಸಿ, ತಮ್ಮ ಶಕ್ತಿಯಿಂದ ದಕ್ಷಿಣ ಗಾಳಿಯನ್ನು ಬರಮಾಡಿದರು.


ಭೂಮಿಯು ದಕ್ಷಿಣ ಗಾಳಿಯಿಂದ ಸ್ತಬ್ಧವಾಗಿರುವಾಗ, ನಿನ್ನ ವಸ್ತ್ರ ಹೇಗೆ ಬಿಸಿಯಾಗಿರುತ್ತವೆ?


ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.


ಆ ದ್ವೀಪದ ಕರಾವಳಿಯಲ್ಲಿಯೇ ಕಷ್ಟದಿಂದ ಮುಂದೆ ಸಾಗುತ್ತಾ, “ಚಂದರೇವುಗಳು” ಎಂದು ಕರೆಯಲಾಗುವ ಸ್ಥಳಕ್ಕೆ ಬಂದೆವು. ಅದು ಲಸಾಯ ಪಟ್ಟಣಕ್ಕೆ ಸಮೀಪದಲ್ಲಿತ್ತು.


ಆದರೆ ಚಳಿಗಾಲ ಕಳೆಯಲು ಆ ಬಂದರು ಅನುಕೂಲವಾಗಿರಲಿಲ್ಲ. ಆದ್ದರಿಂದ ಹೆಚ್ಚು ಮಂದಿ ಪ್ರಯಾಣ ಮುಂದುವರಿಸಬೇಕೆಂದು ತೀರ್ಮಾನಿಸಿದರು. ಸಾಧ್ಯವಾದರೆ ಫೊಯಿನಿಕ್ಸನ್ನು ತಲುಪಿ ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂಬುದು ಅವರ ಯೋಚನೆಯಾಗಿತ್ತು. ಫೊಯಿನಿಕ್ಸ, ಕ್ರೇತದ್ವೀಪದ ಒಂದು ಬಂದರು. ಇದು ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿತ್ತು.


ಬಹಳ ದಿನಗಳವರೆಗೆ ಜನರು ಊಟ ಮಾಡದೇ ಇದ್ದಾಗ, ಪೌಲನು ಅವರ ಮುಂದೆ ಎದ್ದು ನಿಂತುಕೊಂಡು ಹೀಗೆ ಹೇಳಿದನು: “ಸ್ನೇಹಿತರೇ, ನೀವು ಕ್ರೇತದಿಂದ ಮುಂದೆ ಪ್ರಯಾಣ ಮಾಡಬಾರದೆಂದು ಹೇಳಿದ ನನ್ನ ಮಾತಿಗೆ ವಿಧೇಯರಾಗಿದ್ದರೆ ಈ ಕಷ್ಟನಷ್ಟವನ್ನು ತಡೆಯಬಹುದಿತ್ತು.


ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.


“ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳಂಥವರೂ ಸೋಮಾರಿಗಳಾದ ಹೊಟ್ಟೆಬಾಕರೂ ಆಗಿದ್ದಾರೆ!” ಎಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು