Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:20 - ಕನ್ನಡ ಸಮಕಾಲಿಕ ಅನುವಾದ

20 ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ, ನಕ್ಷತ್ರಗಳನ್ನಾಗಲಿ ಕಾಣದೆ ಚಂಡಮಾರುತ ಬೀಸುತ್ತಲೇ ಇದ್ದುದರಿಂದ ನಾವು ತಪ್ಪಿಸಿಕೊಳ್ಳುವ ಎಲ್ಲಾ ನಿರೀಕ್ಷೆಯನ್ನು ಕಳೆದುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಗಾಳಿ ತೀವ್ರವಾಗಿತ್ತು. ಕಟ್ಟಕಡೆಗೆ ನಾವು ಬದುಕುವ ಆಶೆಯನ್ನೇ ತೊರೆಯಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅನೇಕ ದಿವಸಗಳ ತನಕ ಸೂರ್ಯನಾಗಲಿ ನಕ್ಷತ್ರಗಳಾಗಲಿ ನಮಗೆ ಕಾಣಿಸದೆ ದೊಡ್ಡ ಬಿರುಗಾಳಿ ನಮ್ಮ ಮೇಲೆ ಹೊಡೆದದ್ದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ಅಂದಿನಿಂದ ಕಳೆದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅನೇಕ ದಿನಗಳವರೆಗೆ ನಾವು ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಬಿರುಗಾಳಿಯು ಭೀಕರವಾಗಿತ್ತು. ನಾವು ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆ ಕಳೆದುಹೋಯಿತು. ನಾವು ಸಾಯುತ್ತೇವೆ ಎಂದು ಭಾವಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಮಿ ಲೈ ದಿಸಾಂಚ್ಯಾ ಪತರ್ ದಿಸ್ ಹೊಂವ್ದಿ ನಾಹೊಲ್ಯಾರ್ ಚಿಕ್ಕಿಯಾ ಹೊಂವ್ದಿ ಬುಗುಕ್ ಹೊವ್ಕ್ ನಾ ಮೊಟೊ ವಾರೊ ಭಯಾನಕ್ ಹೊತ್ತೊ ,ಅಮಿ ಜಿವಾನಿ ರಾತಾಂವ್, ಮನ್ತಲೊ ಬರೊಸೊ ಕಳ್ದುನ್ ಘೆಟ್ಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:20
15 ತಿಳಿವುಗಳ ಹೋಲಿಕೆ  

“ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’


ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.


ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ.


ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ. ಇಗೋ, ‘ನಮ್ಮ ಎಲುಬುಗಳು ಒಣಗಿಹೋದವು. ನಮ್ಮ ನಿರೀಕ್ಷೆಯು ಸಹ ಕಳೆದು ಹೋಗಿದೆ. ಸಂಪೂರ್ಣವಾಗಿ ನಾಶವಾದೆವು ಎಂದು ಅವರು ಹೇಳುವರು.’


ಆದರೆ ನಾನು, ‘ನಿನ್ನ ಕಾಲು ಸವೆಯದಂತೆಯೂ, ನಿನ್ನ ಗಂಟಲು ಆರದಂತೆಯೂ ತಡೆದುಕೋ,’ ಎಂದೆನು. ಆದರೆ ನೀನು, ‘ಇಲ್ಲ, ನಿರೀಕ್ಷೆ ಇಲ್ಲ, ನಾನು ಅನ್ಯದೇವರುಗಳನ್ನು ಪ್ರೀತಿಸುತ್ತೇನೆ, ಅವುಗಳ ಹಿಂದೆ ನಾನು ಹೋಗುತ್ತೇನೆ,’ ಎಂದು ಹೇಳಿದೆ.


ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ, ‘ಏನೂ ಪ್ರಯೋಜನವಿಲ್ಲ,’ ಎಂದುಕೊಳ್ಳಲಿಲ್ಲ. ನೀನು ಹೊಸ ಬಲವನ್ನು ತಂದುಕೊಂಡು, ಬೇಸರಗೊಳ್ಳದೆ ಮುಂದುವರೆದಿರುವೆ.


ಮೂರು ಸಾರಿ ದೊಣ್ಣೆಯಿಂದ ಬಡಿಸಿಕೊಂಡಿದ್ದೇನೆ. ಒಂದು ಸಾರಿ ಕಲ್ಲೆಸೆದು ನನ್ನನ್ನು ಕೊಲ್ಲಲು ನೋಡಿದರು. ಮೂರು ಬಾರಿ ನಾನು ಪ್ರಯಾಣಿಸುತ್ತಿದ್ದ ಹಡಗು ಒಡೆದು ನೀರು ಪಾಲಾಯಿತು. ಒಂದು ಇಡೀ ಹಗಲುರಾತ್ರಿ ನಾನು ಸಮುದ್ರದ ಮೇಲೆ ತೇಲಿದೆನು.


ಆದರೆ ಯೆಹೋವ ದೇವರು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದರು. ಸಮುದ್ರದಲ್ಲಿ ಮಹಾ ಬಿರುಗಾಳಿ ಉಂಟಾಗಿ, ಹಡಗು ಒಡೆಯುವುದರಲ್ಲಿತ್ತು.


ದೇವರು ಕತ್ತಲೆಯನ್ನು ಕಳುಹಿಸಿ, ದೇಶವನ್ನೆಲ್ಲಾ ಕತ್ತಲು ಮಾಡಿದರು. ದೇವರ ಮಾತಿಗೆ ಈಜಿಪ್ಟನವರು ವಿರೋಧವಾಗಿ ತಿರುಗಿ ಬಿದ್ದರಲ್ಲವೇ?


ಮೂರನೆಯ ದಿನ ನೌಕೆಯ ಅಡ್ಡ ಮರವನ್ನು ತಮ್ಮ ಕೈಗಳಿಂದಲೇ ಎತ್ತಿ ಹೊರಗೆ ಎಸೆದರು.


ಬಹಳ ದಿನಗಳವರೆಗೆ ಜನರು ಊಟ ಮಾಡದೇ ಇದ್ದಾಗ, ಪೌಲನು ಅವರ ಮುಂದೆ ಎದ್ದು ನಿಂತುಕೊಂಡು ಹೀಗೆ ಹೇಳಿದನು: “ಸ್ನೇಹಿತರೇ, ನೀವು ಕ್ರೇತದಿಂದ ಮುಂದೆ ಪ್ರಯಾಣ ಮಾಡಬಾರದೆಂದು ಹೇಳಿದ ನನ್ನ ಮಾತಿಗೆ ವಿಧೇಯರಾಗಿದ್ದರೆ ಈ ಕಷ್ಟನಷ್ಟವನ್ನು ತಡೆಯಬಹುದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು