Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:4 - ಕನ್ನಡ ಸಮಕಾಲಿಕ ಅನುವಾದ

4 ಅಲ್ಲಿಂದ ಹೊರಟು, ಎದುರುಗಾಳಿ ಬೀಸುತ್ತಿದ್ದದರಿಂದ ನಾವು ಸಮುದ್ರ ಪ್ರಯಾಣಮಾಡಿ ಸೈಪ್ರಸ್ ದ್ವೀಪ ಸಮೀಪವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾವು ಅಲ್ಲಿಂದ ಹೊರಟೆವು. ಎದುರುಗಾಳಿ ಬೀಸುತ್ತಿತ್ತು. ಆದುದರಿಂದ ಸೈಪ್ರಸ್ ದ್ವೀಪದ ಮರೆಗೆ ಸಾಗಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಲ್ಲಿಂದ ಹೊರಟು ಎದುರು ಗಾಳಿ ಬೀಸುತ್ತಿದ್ದದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ಸಿದೋನ್ ಪಟ್ಟಣದಿಂದ ಹೊರಟೆವು. ಎದುರುಗಾಳಿ ಬೀಸುತ್ತಿದ್ದ ಕಾರಣ ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಮಿ ಸಿದೊನ್ ಶಾರಾಕ್ನಾ ಜಾವ್ಕ್ ಲಾಗ್ಲಾಂವ್, ಇದ್ರಾಕ್ ವಾರೊ ಮಾರುಲಾಗಲ್ಯಾ ಸಾಟ್ನಿ ಅಮಿ ಸೈಪ್ರಸ್ ಮನ್ತಲ್ಯಾ ದ್ಪಿಪಾಚ್ಯಾ ಜಗ್ಗೊಳ್ನಾ ಗೆಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:4
10 ತಿಳಿವುಗಳ ಹೋಲಿಕೆ  

ಸೈಪ್ರಸ್ ಎಂಬಲ್ಲಿ ಹುಟ್ಟಿದ ಒಬ್ಬ ಲೇವಿಯನು ಇದ್ದನು, ಅವನ ಹೆಸರು ಯೋಸೇಫ, ಅಪೊಸ್ತಲರು ಅವನನ್ನು “ಬಾರ್ನಬ” ಎಂದು ಕರೆದರು. ಬಾರ್ನಬ ಅಂದರೆ “ಆದರಣೆಯ ಪುತ್ರನು” ಎಂದು ಅರ್ಥ.


ಅನೇಕ ದಿನಗಳವರೆಗೆ ನಮ್ಮ ಪ್ರಯಾಣ ನಿಧಾನವಾಗಿ ಸಾಗಿತು. ಕ್ನೀದ ಪಟ್ಟಣ ಎಂಬಲ್ಲಿಗೆ ತಲುಪುವವರೆಗೆ ಬಹಳ ಪ್ರಯಾಸ ಪಡಬೇಕಾಯಿತು. ಎದುರುಗಾಳಿಯು ಅಡ್ಡಿಯಾದದ್ದರಿಂದ, ಸಲ್ಮೋನೆ ಭೂಶಿರವನ್ನು ದಾಟಿ, ಅದರ ಎದುರಾಗಿರುವ ಕ್ರೇತದ್ವೀಪವನ್ನು ತಲುಪಿದೆವು.


ಕೈಸರೈಯದಿಂದ ಕೆಲವು ಶಿಷ್ಯರು ನಮ್ಮೊಂದಿಗೆ ಬಂದು, ಮ್ನಾಸೋನ ಎಂಬುವನ ಮನೆಗೆ ನಾವು ಇಳಿದುಕೊಳ್ಳುವಂತೆ ಕರೆದುಕೊಂಡು ಹೋದರು. ಅವನು ಸೈಪ್ರಸ್ ದಿಂದ ಬಂದ ಪ್ರಥಮ ಶಿಷ್ಯರಲ್ಲಿ ಒಬ್ಬನಾಗಿದ್ದನು.


ಸೈಪ್ರಸ್ ಹತ್ತಿರ ಬಂದು ಅದರ ದಕ್ಷಿಣಕ್ಕೆ ಪ್ರಯಾಣಮಾಡಿ ಸಿರಿಯಕ್ಕೆ ಹೋದೆವು. ನಮ್ಮ ನೌಕೆಯಲ್ಲಿದ್ದ ಸರಕುಗಳನ್ನು ಇಳಿಸಬೇಕಾಗಿದ್ದ ಟೈರ್ ಎಂಬಲ್ಲಿ ಬಂದು ಇಳಿದೆವು.


ಇದರಿಂದ ಅವರಲ್ಲಿ ತೀವ್ರ ಭಿನ್ನಾಭಿಪ್ರಾಯ ಉಂಟಾಗಿ ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾಗಿ ಹೋಗಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ಪ್ರಯಾಣಮಾಡಿದನು,


ಪವಿತ್ರಾತ್ಮ ದೇವರಿಂದ ಕಳುಹಿಸಲಾದ ಅವರಿಬ್ಬರೂ ಸೆಲ್ಯೂಕ್ಯಕ್ಕೆ ಹೋಗಿ ಅಲ್ಲಿಂದ ನೌಕೆಯಲ್ಲಿ ಪ್ರಯಾಣಮಾಡಿ ಸೈಪ್ರಸಿಗೆ ತಲುಪಿದರು.


ಎದುರುಗಾಳಿ ಬಲವಾಗಿ ಬೀಸುತ್ತಿದ್ದುದರಿಂದ ಶಿಷ್ಯರು ದೋಣಿಯನ್ನು ನಿಯಂತ್ರಿಸಲು ದಣಿದು ಹೋದದ್ದನ್ನು ಯೇಸು ಕಂಡು, ಮುಂಜಾನೆ ಸುಮಾರು ಮೂರು ಗಂಟೆಯಲ್ಲಿ ಅವರ ಬಳಿಗೆ ಸರೋವರದ ಮೇಲೆ ನಡೆಯುತ್ತಾ ಬಂದರು. ಯೇಸು ಅವರನ್ನು ದಾಟಿ ಹೋಗುವುದರಲ್ಲಿದ್ದರು.


ಅಷ್ಟರಲ್ಲಿ ದೋಣಿಯು ತೀರದಿಂದ ಬಹುದೂರ ಹೋಗಿತ್ತು, ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.


ಒಂದು ದಿನ ಯೇಸು ತಮ್ಮ ಶಿಷ್ಯರಿಗೆ, “ನಾವು ಕೆರೆಯ ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು, ಆಗ ಅವರು ದೋಣಿಯನ್ನು ಹತ್ತಿ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು