Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:15 - ಕನ್ನಡ ಸಮಕಾಲಿಕ ಅನುವಾದ

15 ಅಲ್ಲಿದ್ದ ಸಹೋದರರು ನಾವು ಬರುತ್ತೇವೆಂಬ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ಅಪ್ಪಿಯ ಪೇಟೆಗೂ ತ್ರಿಛತ್ರದ ಬಳಿಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತುತಿ ಮಾಡಿ ಧೈರ್ಯ ತಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಲ್ಲಿದ್ದ ಕ್ರೈಸ್ತಭಕ್ತಾದಿಗಳು ನಾವು ಬಂದ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ‘ಅಪ್ಪಿಯಾ’ ಮಾರುಕಟ್ಟೆಗೂ ತ್ರಿಛತ್ರದ ಬಳಿಗೂ ಬಂದರು. ಅವರನ್ನು ಕಂಡದ್ದೇ ಪೌಲನಿಗೆ ಪ್ರೋತ್ಸಾಹ ಉಂಟಾಯಿತು. ಅವನು ದೇವರಿಗೆ ಸ್ತೋತ್ರ ಸಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ ನಮ್ಮನ್ನು ಎದುರುಗೊಳ್ಳುವದಕ್ಕಾಗಿ ಕೆಲವರು ಅಪ್ಪಿಯಪೇಟೆಯವರೆಗೂ ಕೆಲವರು ತ್ರಿಛತ್ರವೆಂಬ ಸ್ಥಳದವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತೋತ್ರವನ್ನು ಮಾಡಿ ಧೈರ್ಯಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾವು ಇಲ್ಲಿರುವುದು ರೋಮಿನಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. ಅವರು ನಮ್ಮನ್ನು ಭೇಟಿಯಾಗುವುದಕ್ಕಾಗಿ “ಅಪ್ಪಿಯ” ಮಾರುಕಟ್ಟೆಗೂ ಮತ್ತು “ತ್ರಿಛತ್ರ” ಎಂಬ ಸ್ಥಳಕ್ಕೂ ಬಂದರು. ಈ ವಿಶ್ವಾಸಿಗಳನ್ನು ಕಂಡಾಗ ಪೌಲನು ಧೈರ್ಯಗೊಂಡು ದೇವರಿಗೆ ಸ್ತೋತ್ರ ಸಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಮಿ ಹಿತ್ತೆ ಹಾತ್ ಮನ್ತಲೆ ರೊಮಾತ್ಲ್ಯಾ ದೆವಾಚ್ಯಾ ಲೊಕಾಕ್ನಿ ಗೊತ್ತ್ ಹೊಲೆ , ತೆನಿ ಅಮ್ಕಾ ಭೆಟುಕ್ ಮನುನ್ ಅಪ್ಪಿಯ್ ಬಾಜಾರಾಕ್ನಾ , ಅನಿ ತ್ರಿಛತ್ರ್ ಮನ್ತಲ್ಯಾ ಜಾಗ್ಯಾಕ್ ಯೆಲ್ಯಾನಿ ಹ್ಯಾ ದೆವಾಚ್ಯಾ ಲೊಕಾಕ್ನಿ ಬಗ್ತಾನಾ ಪಾವ್ಲುಕ್ ಧೈರ್ಯ್ ಹೊಲೊ ಅನಿ ತೆನಿ ದೆವಾಕ್ ಧನ್ಯಾವಾದ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:15
22 ತಿಳಿವುಗಳ ಹೋಲಿಕೆ  

ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.


ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನಿಮ್ಮನ್ನು ಸಂದರ್ಶಿಸುವ ನಿರೀಕ್ಷೆಯಲ್ಲಿದ್ದೇನೆ. ಸ್ವಲ್ಪಕಾಲ ನಿಮ್ಮ ಅನ್ಯೋನ್ಯತೆಯ ಆನಂದವನ್ನು ಪಡೆದ ಬಳಿಕ ಅಲ್ಲಿಗೆ ಹೋಗುವ ನನ್ನ ಪ್ರಯಾಣದಲ್ಲಿ ನಿಮ್ಮ ಸಹಕಾರವನ್ನು ಬಯಸುತ್ತೇನೆ.


ನನ್ನ ದೇಹಸ್ಥಿತಿ ನಿಮಗೆ ಬೇಸರಗೊಳಿಸುವುದಾಗಿದ್ದರೂ ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸುವಿನಂತೆಯೂ ಸೇರಿಸಿಕೊಂಡಿರಿ.


ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ಆಗ ಪೇತ್ರನು ಮನೆಯಲ್ಲಿ ಪ್ರವೇಶಿಸುತ್ತಿದ್ದಂತೆ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಮುಂದೆ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಮಾಡಿದನು.


ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!” ಎಂದು ಕೂಗಿದರು.


ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.


ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.


ಯೆಹೋವ ದೇವರು ಮೋಶೆಯ ಮೇಲೆ ಬೇಸರಗೊಂಡು, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲನೆಂದು ನನಗೆ ಗೊತ್ತಿದೆ. ಅವನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ಕಂಡು, ತನ್ನ ಹೃದಯದಲ್ಲಿ ಆನಂದಿಸುವನು.


ಈ ಕಾರಣದಿಂದ ಪ್ರಿಯರೇ, ನಮ್ಮ ಎಲ್ಲಾ ಇಕ್ಕಟ್ಟು ಹಾಗೂ ಹಿಂಸೆಗಳಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.


ಕ್ರಿಸ್ತ ಯೇಸುವಿನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ, ಅವರ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ಪ್ರಸಾರಗೊಳಿಸುವ ದೇವರಿಗೆ ಕೃತಜ್ಞತೆಗಳು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ಪೇತ್ರನು ಅವರನ್ನು ತನ್ನ ಅತಿಥಿಗಳಾಗಿರಲು ಮನೆಯೊಳಗೆ ಕರೆದನು. ಮರುದಿನ ಪೇತ್ರನು ಅವರೊಂದಿಗೆ ಪ್ರಯಾಣ ಬೆಳೆಸಿದನು. ಯೊಪ್ಪದಲ್ಲಿಯ ಕೆಲವು ಸಹೋದರರು ಅವನೊಂದಿಗೆ ಹೊರಟರು.


ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿದರೆಂಬ ವಾರ್ತೆಯನ್ನು ಅಪೊಸ್ತಲರೂ ಯೂದಾಯದಲ್ಲೆಲ್ಲಾ ಇದ್ದ ಸಹೋದರರೂ ಕೇಳಿದರು.


ಏನೂ ಸಂಶಯಪಡದೇ ಅವರ ಜೊತೆಯಲ್ಲಿ ಹೋಗಬೇಕೆಂದು ಪವಿತ್ರಾತ್ಮ ದೇವರು ನನಗೆ ಅಪ್ಪಣೆಕೊಟ್ಟರು. ಇದಲ್ಲದೆ ಈ ಆರು ಜನ ಸಹೋದರರೂ ನನ್ನೊಂದಿಗೆ ಹೊರಟರು. ನಾವು ಆ ಮನುಷ್ಯನ ಮನೆಯೊಳಗೆ ಪ್ರವೇಶಿಸಿದೆವು.


ಸುಮ್ಮನಿರಬೇಕೆಂದು ಪೇತ್ರನು ಅವರಿಗೆ ಕೈಸನ್ನೆ ಮಾಡಿ ಕರ್ತದೇವರು ಹೇಗೆ ತನ್ನನ್ನು ಸೆರೆಮನೆಯಿಂದ ಬಿಡಿಸಿ ಹೊರಗೆ ಕರೆದುಕೊಂಡು ಬಂದರು ಎಂಬುದನ್ನು ವಿವರಿಸಿದನು. “ಇದನ್ನು ಯಾಕೋಬನಿಗೆ ಹಾಗೂ ಸಹೋದರರಿಗೆ ತಿಳಿಸಿರಿ,” ಎಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ಅಲ್ಲಿ ಕೆಲವು ಸಹೋದರರು ನಮ್ಮನ್ನು ಕಂಡು ಒಂದು ವಾರ ತಮ್ಮೊಂದಿಗೆ ಕಳೆಯಬೇಕೆಂದು ಆಮಂತ್ರಿಸಿದರು. ಕೊನೆಗೆ ನಾವು ರೋಮ್ ಸೇರಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು