Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:20 - ಕನ್ನಡ ಸಮಕಾಲಿಕ ಅನುವಾದ

20 ಈ ಕಾರಣದಿಂದಲೇ ನಾನು ನಿಮ್ಮನ್ನು ಭೇಟಿಯಾಗಿ ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲರ ನಿರೀಕ್ಷೆಯ ನಿಮಿತ್ತವಾಗಿಯೇ ನಾನು ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಈ ಕಾರಣದಿಂದಲೇ ನಿಮ್ಮನ್ನು ನೋಡಿ ಮಾತನಾಡಲು ಬಯಸಿದೆ. ಇಸ್ರಯೇಲ್ ಜನತೆ ಯಾರ ನಿರೀಕ್ಷೆಯಲ್ಲಿ ಇದೆಯೋ, ಅವರ ನಿಮಿತ್ತವೇ ನಾನು ಹೀಗೆ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿವಿುತ್ತವಾಗಿ ಈ ಬೇಡಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತಸೆ ಹೊವ್ನ್, ಮಿಯಾ ತುಮ್ಕಾ ಬಗುಚೆ, ಅನಿ ತುಮ್ಚ್ಯಾಕ್ಡೆ ಬೊಲುಚೆ ಮನುನ್ ಆಶ್ಯಾ ಕರ್‍ಲೊ, ಇಸ್ರಾಯೆಲಾಂಚ್ಯಾ ಬರೊಸ್ಯಾತ್ ಮಿಯಾ ವಿಶ್ವಾಸ್ ಥವಲ್ಲ್ಯಾ ಸಾಟ್ನಿ ಹ್ಯಾ ಸರ್ಪೊಳಿಯಾನಿ ಭಾಂದುನ್ ಥವಲ್ಲಿ ಹಾತ್, ಘೆಟಲೊ ಹೊಲಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:20
18 ತಿಳಿವುಗಳ ಹೋಲಿಕೆ  

ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಏಕೆಂದರೆ ಆ ಸುವಾರ್ತೆಗಾಗಿಯೇ ಸೆರೆಯಲ್ಲಿರುವ ರಾಯಭಾರಿಯಾದ ನಾನು ಅದನ್ನು ಸಾರುವುದರಲ್ಲಿ ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.


ಹೇಗೆಂದರೆ, ನಾನು ಸೆರೆಯಲ್ಲಿರುವುದು ಕ್ರಿಸ್ತನ ನಿಮಿತ್ತವೇ ಎಂದು ಇಡೀ ರಾಜಭವನದಲ್ಲಿಯೂ ಮಿಕ್ಕಾದವರೆಲ್ಲರಿಗೂ ಚೆನ್ನಾಗಿ ತಿಳಿದಿದೆ.


ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು.


ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಿದೆಯೆಂದು ಈ ಜನರು ಎದುರುನೋಡುವಂತೆಯೇ ದೇವರಲ್ಲಿ ನನಗೂ ನಿರೀಕ್ಷೆಯಿದೆ.


ಅಲ್ಲಿ ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯರು, ಇನ್ನು ಕೆಲವರು ಫರಿಸಾಯರು ಎಂಬುದನ್ನು ಪೌಲನು ತಿಳಿದುಕೊಂಡು ನ್ಯಾಯಸಭೆಯಲ್ಲಿ, “ನನ್ನ ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು. ಸತ್ತವರ ಪುನರುತ್ಥಾನದ ನಿರೀಕ್ಷೆಯ ವಿಷಯದಲ್ಲಿ ನಾನು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಕೂಗಿ ಹೇಳಿದನು.


ಸಹಸ್ರಾಧಿಪತಿ ಅಲ್ಲಿಗೆ ಬಂದು ಪೌಲನನ್ನು ಬಂಧಿಸಿ, ಅವನನ್ನು ಎರಡು ಸರಪಣಿಗಳಿಂದ ಕಟ್ಟಬೇಕೆಂದು ಆಜ್ಞಾಪಿಸಿದನು. ಅನಂತರ “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.


ನಾನು ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ಏಕೆಂದರೆ ನಾನು ಸೆರೆಯಲ್ಲಿದ್ದಾಗ ಅವನು ನನಗೆ ಆತ್ಮಿಕ ಮಗನಾದನು.


ಆದ್ದರಿಂದ ನಾನು ನಿನ್ನನ್ನು ಕೂಡಲೇ ಕರೆದುಕೊಂಡು ಬರಲು ಕೆಲವರನ್ನು ಕಳುಹಿಸಿದೆ. ನೀನು ಬಂದಿರುವುದು ಒಳ್ಳೆಯದೇ ಆಯಿತು. ಕರ್ತ ಯೇಸು ನಮಗೆ ಏನು ಹೇಳಬೇಕೆಂದು ನಿನಗೆ ಆಜ್ಞಾಪಿಸಿರುವರೋ ಅದೆಲ್ಲವನ್ನು ಕೇಳಲು ಈಗ ನಾವು ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಸುವಾರ್ತೆಯ ನಿಮಿತ್ತ ಸೆರೆಯಲ್ಲಿರುವ ನನಗೆ ಉಪಚಾರ ಮಾಡುವಂತೆ ನಿನಗೆ ಬದಲಾಗಿ ಓನೇಸಿಮನನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಲು ಅಪೇಕ್ಷಿಸಿದ್ದೆನು.


ಆದರೆ ಈಗ ನಮಗೆ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಕೃಪೆ ಪ್ರಕಟವಾಯಿತು. ಕ್ರಿಸ್ತ ಯೇಸು ಮರಣವನ್ನು ನಾಶಮಾಡಿ, ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದರು.


ಇದು ಪೌಲನಾದ ನಾನೇ ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ನಾಯಕರನ್ನು ಕರೆಯಿಸಿದನು. ಅವರೆಲ್ಲರೂ ಬಂದಾಗ ಅವರಿಗೆ, “ನನ್ನ ಸಹೋದರರೇ, ನಮ್ಮ ಜನರಿಗೂ ನಮ್ಮ ಪೂರ್ವಜರಿಗೂ ವಿರೋಧವಾಗಿ ನಾನು ಏನನ್ನೂ ಮಾಡಲಿಲ್ಲ. ಆದರೂ ನನ್ನನ್ನು ಯೆರೂಸಲೇಮಿನಲ್ಲಿ ಬಂಧಿಸಿ ರೋಮನ್ನರ ವಶಕ್ಕೆ ಒಪ್ಪಿಸಲಾಯಿತು.


ಆದ್ದರಿಂದ ನನ್ನನ್ನು ಕರೆಕಳುಹಿಸಿದಾಗ ಯಾವ ಆಕ್ಷೇಪಣೆ ಮಾಡದೆ ಇಲ್ಲಿಗೆ ಬಂದಿದ್ದೇನೆ. ನನ್ನನ್ನು ಕರೆಕಳುಹಿಸಿದ ಕಾರಣವನ್ನು ಈಗ ನಾನು ತಿಳಿಯಬಹುದೋ?” ಎಂದನು.


ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು