Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:31 - ಕನ್ನಡ ಸಮಕಾಲಿಕ ಅನುವಾದ

31 ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಭಯಭೀತಿಯಿಲ್ಲದೆ ಹಾಗೂ ಅಡ್ಡಿಆತಂಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಬೋಧಿಸುತ್ತಿದ್ದನು; ಸ್ವಾಮಿ ಯೇಸುಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯಾವ ಅಡ್ಡಿಯೂ ಇಲ್ಲದೆ ತುಂಬಾ ಧೈರ್ಯದಿಂದ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ದೆವಾಚ್ಯಾ ರಾಜಾಚ್ಯಾ ವಿಶಯಾತ್ ಶಿಕಾಪ್ ಕರಿ, ಅನಿ ಧನಿಯಾ ಜೆಜು ಕ್ರಿಸ್ತಾಚ್ಯಾ ವಿಶಯಾತ್ ಸಾಂಗಿತ್ ಹೊತ್ತೊ, ಅನಿ ತೊ ಉಲ್ಲೆಬಿ ಭಿಂಯ್‍ನಸ್ತಾನಾ ಹೆ ಕಾಮ್ ಕರಿತ್ ಹೊತ್ತೊ , ತೆಕಾ ಅಡ್ಡಿ ಕರುಕ್ ಕೊನಾಚೆನ್ಬಿ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:31
17 ತಿಳಿವುಗಳ ಹೋಲಿಕೆ  

ಕರ್ತದೇವರೇ, ಈಗ ಅವರ ಬೆದರಿಕೆಯನ್ನು ನೋಡಿರಿ; ಬಹುಧೈರ್ಯದಿಂದ ನಿಮ್ಮ ವಾಕ್ಯವನ್ನು ಹೇಳಲು ನಿಮ್ಮ ಸೇವಕರನ್ನು ಬಲಪಡಿಸಿರಿ.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ನಾನು ಸೆರೆಯಲ್ಲಿರುವುದರಿಂದಲೇ ಕರ್ತ ದೇವರಲ್ಲಿರುವ ಅನೇಕ ಸಹೋದರರು ಭಯವಿಲ್ಲದೆಯೂ ಭರವಸೆಯಿಂದಲೂ ಸುವಾರ್ತೆಯ ವಾಕ್ಯವನ್ನು ಮಾತನಾಡುವುದಕ್ಕೆ ಪ್ರೋತ್ಸಾಹ ಹೊಂದಿದ್ದಾರೆ.


“ನಿಮ್ಮ ಮಧ್ಯದಲ್ಲಿ ನಾನು ದೇವರ ರಾಜ್ಯದ ಬಗ್ಗೆ ಬೋಧಿಸುತ್ತಾ ಇದ್ದೆನು. ನಿಮ್ಮಲ್ಲಿ ಯಾರೂ ನನ್ನ ಮುಖವನ್ನು ಇನ್ನೊಮ್ಮೆ ಕಾಣಲಾರಿರಿ ಎಂದು ನಾನು ಬಲ್ಲೆನು.


ಆದರೆ ಫಿಲಿಪ್ಪನು ದೇವರ ರಾಜ್ಯದ ಶುಭವರ್ತಮಾನವನ್ನೂ ಕ್ರಿಸ್ತ ಯೇಸುವಿನ ಹೆಸರನ್ನೂ ಪ್ರಕಟಿಸಿದಾಗ ಅಲ್ಲಿಯ ಸ್ತ್ರೀ ಪುರುಷರು ಅದನ್ನು ನಂಬಿ ದೀಕ್ಷಾಸ್ನಾನವನ್ನು ಹೊಂದಿದರು.


ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.


ದಿನದಿನವೂ ಅವರು ದೇವಾಲಯಗಳಲ್ಲಿ ಮತ್ತು ಮನೆಯಿಂದ ಮನೆಗೆ ಹೋಗಿ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದನ್ನೂ ಬೋಧಿಸುವುದನ್ನೂ ನಿಲ್ಲಿಸಲೇ ಇಲ್ಲ.


ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು.


ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು.


ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು:


ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.


ಪೌಲನು ತಾನು ಬಾಡಿಗೆಗೆ ತೆಗೆದುಕೊಂಡ ಮನೆಯಲ್ಲಿ ಎರಡು ವರ್ಷಗಳ ಕಾಲವಿದ್ದು ತನ್ನ ಬಳಿಗೆ ಬಂದವರನ್ನೆಲ್ಲಾ ಸ್ವಾಗತಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು