Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:33 - ಕನ್ನಡ ಸಮಕಾಲಿಕ ಅನುವಾದ

33 ಮಹಾಶಕ್ತಿಯಿಂದ ಅಪೊಸ್ತಲರು ಕರ್ತ ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಕೊಟ್ಟರು. ಅವರೆಲ್ಲರ ಮೇಲೆ ದೇವರ ಮಹಾಕೃಪೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಪ್ರೇಷಿತರು ಪ್ರಭು ಯೇಸುವಿನ ಪುನರುತ್ಥಾನಕ್ಕೆ ಬಹುಸಾಮರ್ಥ್ಯದಿಂದ ಸಾಕ್ಷಿಕೊಡುತ್ತಿದ್ದರು. ಜನರು ಅವರೆಲ್ಲರನ್ನು ಗೌರವದಿಂದ ಕಾಣುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮತ್ತು ಕರ್ತನಾದ ಯೇಸು ಜೀವಂತನಾಗಿ ಎದ್ದುಬಂದನೆಂಬದಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು. ಬಹಳ ದಯವು ಅವರೆಲ್ಲರ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಪ್ರಭುವಾದ ಯೇಸು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ಅಪೊಸ್ತಲರು ಬಹುಬಲವಾಗಿ ಜನರಿಗೆ ಹೇಳುತ್ತಿದ್ದರು. ದೇವರು ವಿಶ್ವಾಸಿಗಳೆಲ್ಲರನ್ನು ಬಹಳವಾಗಿ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಧನಿಯಾ ಜೆಜು ಮರಲ್ಲ್ಯಾ ಕನ್ನಾ ಝಿತ್ತೊ ಹೊಲ್ಲೊ ಖರೆಚ್ ಮನ್ತಲೆ ಅಪೊಸ್ತಲಾನಿ ಲೊಕಾಕ್ನಿ ಸಾಂಗಿತ್ ದೆವಾನ್ ಅಪ್ಲ್ಯಾ ಲೊಕಾಕ್ನಿ ಮೊಟೊ ಆಶಿರ್ವಾದ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:33
14 ತಿಳಿವುಗಳ ಹೋಲಿಕೆ  

ಅವರ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಪಡೆದೆವು.


ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಅಂದರೆ, ಯೋಹಾನನಿಂದ ದೀಕ್ಷಾಸ್ನಾನ ಪಡೆದ ದಿನದಿಂದ, ಯೇಸು ಸ್ವರ್ಗಕ್ಕೆ ಏರಿಹೋದ ಕಾಲದವರೆಗೆ ನಮ್ಮ ಸಂಗಡ ಇದ್ದವನಾಗಿರಬೇಕು.” ಅವನು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಂದಿಗೆ ಸಾಕ್ಷಿಯಾಗಿರಬೇಕು.


ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.


ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”


ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.


ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆದು, ದೇವರ ಮೆಚ್ಚುಗೆ ಮತ್ತು ಮನುಷ್ಯರ ಮೆಚ್ಚುಗೆ ಹೆಚ್ಚಾಗಿ ಅವರಿಗೆ ದೊರೆಯಿತು.


ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.


ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು