Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:21 - ಕನ್ನಡ ಸಮಕಾಲಿಕ ಅನುವಾದ

21 ಪ್ರಾತಃಕಾಲದಲ್ಲಿ ಅವರು ತಮಗೆ ಹೇಳಿದಂತೆಯೇ ದೇವಾಲಯವನ್ನು ಪ್ರವೇಶಿಸಿ ಜನರಿಗೆ ಬೋಧಿಸಲು ಪ್ರಾರಂಭಿಸಿದರು. ಮಹಾಯಾಜಕನು ಮತ್ತು ಅವನೊಂದಿಗಿದ್ದವರು ಕೂಡಿಬಂದಾಗ, ನ್ಯಾಯಸಭೆಯನ್ನೂ ಇಸ್ರಾಯೇಲರ ಹಿರಿಯರ ಪೂರ್ಣಮಂಡಳಿಯನ್ನೂ ಕೂಡಿಸಿ, ಸೆರೆಮನೆಯಿಂದ ಅಪೊಸ್ತಲರನ್ನು ಕರೆಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದರಂತೆ ಪ್ರೇಷಿತರು ಮುಂಜಾವದಲ್ಲೇ ದೇವಾಲಯವನ್ನು ಪ್ರವೇಶಿಸಿ ಬೋಧಿಸಲಾರಂಭಿಸಿದರು. ಇತ್ತ ಪ್ರಧಾನಯಾಜಕನೂ ಅವನ ಸಂಗಡಿಗರೂ ಜೊತೆಗೂಡಿ ಯೆಹೂದ್ಯ ಪ್ರಮುಖರನ್ನೊಳಗೊಂಡ ಶ್ರೇಷ್ಠ ನ್ಯಾಯಸಭೆಯನ್ನು ಕರೆದರು. ಅನಂತರ ಪ್ರೇಷಿತರನ್ನು ಆ ಸಭೆಯ ಮುಂದೆ ಕರೆತರುವಂತೆ ಸೆರೆಮನೆಯ ಅಧಿಕಾರಿಗಳಿಗೆ ಆಜ್ಞೆಯಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಈ ಆಜ್ಞೆಯನ್ನು ಹೊಂದಿ ಬೆಳಕುಹರಿಯುವಾಗಲೇ ದೇವಾಲಯದೊಳಗೆ ಹೋಗಿ ಉಪದೇಶ ಮಾಡಿದರು. ಇತ್ತಲಾಗಿ ಮಹಾಯಾಜಕನೂ ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ ಇಸ್ರಾಯೇಲ್ಯರ ಯಜಮಾನರ ಸಭೆಯೆಲ್ಲವನ್ನೂ ಕೂಡಿಸಿ ಅವರನ್ನು ಕರತರುವದಕ್ಕೆ ಸೆರೆಮನೆಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ಅವರು ಮರುದಿನ ಮುಂಜಾನೆ ದೇವಾಲಯಕ್ಕೆ ಹೋಗಿ ಉಪದೇಶ ಮಾಡತೊಡಗಿದರು. ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರು ದೇವಾಲಯಕ್ಕೆ ಬಂದರು. ಅವರು ಯೆಹೂದ್ಯನಾಯಕರ ಮತ್ತು ಇಸ್ರೇಲರಲ್ಲಿ ಪ್ರಮುಖರಾಗಿದ್ದವರ ಸಭೆಯನ್ನು ಸೇರಿಸಿದರು. ಬಳಿಕ ಅಪೊಸ್ತಲರನ್ನು ತಮ್ಮ ಬಳಿಗೆ ಕರೆದುಕೊಂಡು ಬರಲು ಕೆಲವರನ್ನು ಸೆರೆಮನೆಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತಸೆ ಹೊವ್ನ್ ತೆನಿ ದುಸ್ರ್ಯಾಂದಿಸಿ ಸಕ್ಕಾಳಿ ದೆವಾಚ್ಯಾ ಗುಡಿತ್ ಜಾವ್ನ್ ಶಿಕಾಪ್ ಕರುಕ್ ಲಾಗ್ಲೆ. ತೆನಿ ಜುದೆವಾಂಚಿ ಮುಖಂಡಾ ಅನಿ ಇಸ್ರಾಯೆಲಾತ್ಲ್ಯಾ ಪ್ರಮುಖ್ ಹೊತ್ತ್ಯಾ ಲೊಕಾಕ್ನಿ ಘೆವ್ನ್ ನ್ಯಾಯ್ ಕರ್‍ತಲೊ ತಾಂಡೊ ಮಿಳ್ವುಲ್ಯಾನಿ ತೆಚ್ಯಾ ಮಾನಾ ಅಪೊಸ್ತಲಾಕ್ನಿ ಅಪ್ಲ್ಯಾ ಜಗ್ಗೊಳ್ ಬಲ್ವುನ್ ಹಾನುಕ್ ಮನುನ್ ಥೊಡ್ಯಾ ಲೊಕಾಕ್ನಿ ಬಂಧಿಖಾನ್ಯಾಕ್ಡೆ ಧಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:21
16 ತಿಳಿವುಗಳ ಹೋಲಿಕೆ  

ಬೆಳಿಗ್ಗೆ ಯೇಸು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಅವರ ಬಳಿಗೆ ಬಂದರು. ಯೇಸು ಕುಳಿತುಕೊಂಡು ಅವರಿಗೆ ಬೋಧಿಸಿದರು.


ಏಕೆಂದರೆ ನೀನು ಕಂಡದ್ದಕ್ಕೂ ಕೇಳಿದ್ದಕ್ಕೂ ಎಲ್ಲಾ ಜನರಿಗೆ ಅವರ ಸಾಕ್ಷಿಯಾಗಿರುವೆ.


ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.


ಆದರೆ ಗಮಲಿಯೇಲ್ ಎಂಬ ಹೆಸರಿನ ಒಬ್ಬ ಫರಿಸಾಯನಿದ್ದನು. ಅವನು ನಿಯಮ ಬೋಧಕನೂ ಎಲ್ಲಾ ಜನರ ಗೌರವಕ್ಕೆ ಪಾತ್ರನೂ ಆಗಿದ್ದನು. ಅವನು ನ್ಯಾಯಸಭೆಯಲ್ಲಿ ಎದ್ದು ನಿಂತುಕೊಂಡು, ಸ್ವಲ್ಪ ಸಮಯ ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಆಜ್ಞಾಪಿಸಿದನು.


ಅಪೊಸ್ತಲರನ್ನು ಕರೆತಂದು, ಮಹಾಯಾಜಕನು ಪ್ರಶ್ನಿಸಲೆಂದು ಅವರನ್ನು ನ್ಯಾಯಸಭೆಯ ಎದುರಿನಲ್ಲಿ ನಿಲ್ಲಿಸಿದರು.


ಹೀಗಿರಲು ಮಹಾಯಾಜಕನೂ ಅವನ ಬಳಿಯಲ್ಲಿದ್ದ ಸದ್ದುಕಾಯರೆಲ್ಲರೂ ಬಹಳ ಅಸೂಯೆಪಟ್ಟರು.


ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಜನಾಂಗವೂ ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದನು.


ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ತನ್ನ ಪ್ರಧಾನರಿಗೆ ತನ್ನ ಇಷ್ಟ ಪ್ರಕಾರ ಶಿಕ್ಷಣ ಕೊಡುವುದಕ್ಕೂ, ತನ್ನ ಜ್ಞಾನವನ್ನು ಮಂತ್ರಿಗಳಿಗೆ ಬೋಧಿಸುವುದಕ್ಕೂ ಯೋಸೇಫನನ್ನು ನೇಮಿಸಿದನು.


ಮಹಾಯಾಜಕನೂ ಹಿರಿಸಭೆಯವರೆಲ್ಲರೂ ಇದಕ್ಕೆ ಸಾಕ್ಷಿ. ಅವರಿಂದಲೇ ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ದಂಡಿಸುವುದಕ್ಕಾಗಿಯೂ ಸೆರೆಹಿಡಿದು ಯೆರೂಸಲೇಮಿಗೆ ತರುವುದಕ್ಕಾಗಿಯೂ ದಮಸ್ಕಕ್ಕೆ ಪ್ರಯಾಣಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು