Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:30 - ಕನ್ನಡ ಸಮಕಾಲಿಕ ಅನುವಾದ

30 ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನೀವು ಶಿಲುಬೆಗೇರಿಸಿ ಕೊಂದುಹಾಕಿದ ಯೇಸುಸ್ವಾಮಿಯನ್ನು ನಮ್ಮ ಪಿತೃಗಳ ದೇವರು ಜೀವಕ್ಕೆ ಎಬ್ಬಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೀವು ಯೇಸುವನ್ನು ಕೊಂದಿರಿ. ನೀವು ಆತನನ್ನು ಶಿಲುಬೆಯ ಮೇಲೆ ನೇತುಹಾಕಿದಿರಿ. ಆದರೆ ದೇವರು, ಅಂದರೆ ನಮ್ಮ ಪಿತೃಗಳ ದೇವರೇ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತುಮಿ ಜೆಜುಕ್ ಜಿವಾನಿ ಮಾರ್ಲ್ಯಾಸಿ ತುಮಿ ತೆಕಾ ಕುರ್ಸಾರ್ ಮಾರುನ್ ಜಿಂವ್ ಕಾಡ್ಲ್ಯಾಸಿ , ಖರೆ ದೆವಾನ್ ಮಟ್ಲ್ಯಾರ್ ಅಮ್ಚ್ಯಾ, ವಾಡ್ ವಡ್ಲಾಂಚ್ಯಾ ದೆವಾನುಚ್ ಜೆಜುಕ್ ಮರಲ್ಯಾಕ್ನಾ ಝಿತ್ತೊ ಹೊವ್ನ್ ಉಟ್ವುಲ್ಯಾನ್!,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:30
16 ತಿಳಿವುಗಳ ಹೋಲಿಕೆ  

ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


“ಯೆಹೂದ್ಯರ ನಾಡಿನಲ್ಲಿ ಮತ್ತು ಯೆರೂಸಲೇಮ ಪಟ್ಟಣದಲ್ಲಿಯೂ ಯೇಸು ಮಾಡಿದ ಪ್ರತಿಯೊಂದಕ್ಕೂ ನಾವು ಸಾಕ್ಷಿಗಳು. ಮರದ ಕಂಬಕ್ಕೆ ತೂಗುಹಾಕಿ ಯೇಸುವನ್ನು ನಾಯಕರು ಕೊಂದುಹಾಕಿದರು,


“ಆಗ ಅವನು, ‘ನಮ್ಮ ಪಿತೃಗಳ ದೇವರು ತಮ್ಮ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕಾಗಿಯೂ ನೀತಿವಂತ ಆಗಿರುವ ಒಬ್ಬರನ್ನು ಕಾಣುವುದಕ್ಕಾಗಿಯೂ ಅವರ ಬಾಯಿಂದ ಒಂದು ಮಾತನ್ನು ಕೇಳುವುದಕ್ಕಾಗಿಯೂ ನಿನ್ನನ್ನು ಮುಂದಾಗಿಯೇ ನೇಮಿಸಿದ್ದಾರೆ.


ದೇವರು ಯೇಸುವನ್ನು ಎಬ್ಬಿಸುವುದರ ಮೂಲಕ ಅವರ ಸಂತತಿಯಾದ ನಮಗಿಂದು ಆ ವಾಗ್ದಾನವನ್ನು ನೆರವೇರಿಸಿದ್ದಾರೆ; ಮಾತ್ರವಲ್ಲದೆ ಎರಡನೆಯ ಕೀರ್ತನೆಯಲ್ಲಿ ಹೀಗೆ ಬರೆಯಲಾಗಿದೆ: “ ‘ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ.’


ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”


ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು.


ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ


ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ.


ನಮ್ಮ ಪಿತೃಗಳಾದ ಅಬ್ರಹಾಮನ, ಇಸಾಕನ, ಇಸ್ರಾಯೇಲನ ದೇವರಾದ ಯೆಹೋವ ದೇವರೇ, ನಿಮ್ಮ ಜನರ ಹೃದಯದ ಮನೋಭಾವನೆಯಲ್ಲಿ ಭಕ್ತಿಯನ್ನು ನಿರಂತರವಾಗಿ ಕಾಪಾಡಿ, ಅವರ ಹೃದಯವನ್ನು ನಿಮಗೆ ಸಿದ್ಧಮಾಡಿ.


ಆಗ ದಾವೀದನು ಅವರನ್ನು ಎದುರುಗೊಳ್ಳಲು ಹೊರಟುಹೋಗಿ ಅವರಿಗೆ ಉತ್ತರವಾಗಿ, “ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ, ನನ್ನ ಹೃದಯವು ನಿಮ್ಮ ಸಂಗಡ ಒಂದಾಗಿರುವುದು. ಆದರೆ ದೋಷವು ನನ್ನ ಕೈಯಲ್ಲಿ ಇಲ್ಲದಿರುವಾಗ, ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ, ನಮ್ಮ ಪಿತೃಗಳ ದೇವರು ನೋಡಿ ನ್ಯಾಯತೀರಿಸಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು