Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:4 - ಕನ್ನಡ ಸಮಕಾಲಿಕ ಅನುವಾದ

4 ಮಾರುವುದಕ್ಕಿಂತ ಮೊದಲು ಅದು ನಿನ್ನ ಅಧೀನದಲ್ಲಿತ್ತಲ್ಲವೇ? ಮಾರಿದ ನಂತರವೂ ಆ ಹಣ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ಇಂಥ ಕಾರ್ಯ ಮಾಡಲು ನಿನ್ನ ಹೃದಯದಲ್ಲಿ ಯೋಚನೆ ಬಂದದ್ದು ಏಕೆ? ನೀನು ಸುಳ್ಳು ಹೇಳಿದ್ದು ಮನುಷ್ಯರಿಗಲ್ಲ, ದೇವರಿಗೇ,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಾರುವುದಕ್ಕೆ ಮೊದಲು ಆಸ್ತಿ ನಿನಗೇ ಸೇರಿತ್ತು; ಮಾರಿದ ನಂತರವೂ ಅದರ ಹಣ ನಿನ್ನದೇ ಆಗಿತ್ತು. ಹೀಗಿರುವಲ್ಲಿ ಇಂಥಾ ದುಷ್ಟಯೋಚನೆ ಮಾಡಲು ನೀನೇಕೆ ಮನಸ್ಸುಮಾಡಿದೆ? ನೀನು ಸುಳ್ಳಾಡಿರುವುದು ಮನುಷ್ಯರಿಗಲ್ಲ, ದೇವರಿಗೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಆಸ್ತಿ ಇದ್ದಾಗ ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆಯೂ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ. ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಯಾಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ ಆಡಿದಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ಜಮೀನನ್ನು ಮಾರುವುದಕ್ಕಿಂತ ಮೊದಲು ಅದು ನಿನ್ನದೇ ಆಗಿತ್ತು. ನೀನು ಮಾರಿದ ಮೇಲೆಯೂ ಬಂದ ಹಣ ನಿನ್ನದೇ ಆಗಿತ್ತು. ಈ ಕೆಟ್ಟಕಾರ್ಯವನ್ನು ಮಾಡಲು ನೀನು ಯಾಕೆ ಯೋಚಿಸಿಕೊಂಡೆ? ನೀನು ಸುಳ್ಳು ಹೇಳಿದ್ದು ದೇವರಿಗೆ, ಮನುಷ್ಯರಿಗಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅದ್ದಿ ಹಿ ಆಸ್ತಿ ತುಜ್ಯಾ ನಾವಾರ್ ಹೊತ್ತೆ ನ್ಹಯ್?, ಅನಿ ತಿ ಆಸ್ತಿ ಅಶೆ ಇಕುನ್ ಗಾವಲ್ಲೆ ಪೈಸೆ ತುಜೆಚ್ ಹೊಲ್ಲೆ ಹೊತ್ತೆ ತುಜ್ಯಾ ಮನಾತ್ ಅಶೆ ಕಶ್ಯಾಕ್ ಯೆವ್ಜಲೈ? ತಿಯಾ ಮಾನ್ಸಾಕ್ ಝುಟೆ ಸಾಂಗುಕ್ ನ್ಹಯ್ ದೆವಾಕುಚ್ ಝುಟೆ ಸಾಂಗ್ಲಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:4
26 ತಿಳಿವುಗಳ ಹೋಲಿಕೆ  

ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?


ಇದಲ್ಲದೆ ನಾನು ನನ್ನ ದೇವರ ಮನೆಯ ಮೇಲೆ ನನಗೆ ಭಕ್ತಿ ಇರುವುದರಿಂದ, ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು, ನನ್ನ ಸ್ವಂತ ಸ್ವತ್ತಿನಿಂದ ಬಂಗಾರವನ್ನೂ, ಬೆಳ್ಳಿಯನ್ನೂ ನನ್ನ ಪವಿತ್ರ ದೇವರ ಮನೆಗೆ ಕೊಟ್ಟಿದ್ದೇನೆ.


ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.


“ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.


“ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಆ ದಿನದಲ್ಲಿ ನಿನ್ನ ಮನಸ್ಸಿಗೆ ಕೆಲವು ಆಲೋಚನೆಗಳು ಬರುವುವು ಮತ್ತು ನೀನು ಒಂದು ಕುತಂತ್ರವನ್ನು ಮಾಡುವೆ.


ನೀತಿಗೋಸ್ಕರ ಕರೆಯುವವನು ಯಾವನೂ ಇಲ್ಲ, ಸತ್ಯಕ್ಕೋಸ್ಕರ ನ್ಯಾಯ ವಿಚಾರಿಸುವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡುತ್ತಾರೆ. ಸುಳ್ಳನ್ನು ಮಾತನಾಡುತ್ತಾರೆ. ಕೇಡನ್ನು ಗರ್ಭಧರಿಸಿ, ಅಕ್ರಮವನ್ನು ಹೆರುತ್ತಾರೆ.


ನನ್ನ ನಾಲಿಗೆಯಲ್ಲಿ ಒಂದು ಮಾತು ಆರಂಭಿಸುವುದಕ್ಕಿಂತ ಮುಂಚೆಯೇ ಯೆಹೋವ ದೇವರೇ, ಅದು ನಿಮಗೆ ಪೂರ್ಣವಾಗಿ ತಿಳಿದಿರುತ್ತದೆ.


ಅಂಥವರು ದುಷ್ಟತನವನ್ನು ಗರ್ಭಧರಿಸಿ, ಸೇಡನ್ನು ಗರ್ಭದಲ್ಲಿಟ್ಟುಕೊಂಡು ಸುಳ್ಳನ್ನು ಹೆರುವರು.


ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.


ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ, ಜನರು ಸಂತೋಷಪಟ್ಟರು. ಏಕೆಂದರೆ ಅವರು ಪೂರ್ಣಮನಸ್ಸಿನಿಂದ ಮನಃಪೂರ್ವಕವಾಗಿ ಯೆಹೋವ ದೇವರಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷಪಟ್ಟನು.


ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ದಿನ ತನ್ನನ್ನೇ ಯೆಹೋವ ದೇವರಿಗೆ ಇಷ್ಟಪೂರ್ವಕವಾಗಿ ಸಮರ್ಪಿಸಿಕೊಳ್ಳುವವರು ಯಾರು?” ಎಂದನು.


ಆಗ ಯೆಹೋವ ದೇವರು ಸಮುಯೇಲನಿಗೆ, “ಜನರು ನಿನಗೆ ಹೇಳಿದ್ದೆಲ್ಲದರಲ್ಲಿ ಅವರ ಮಾತು ಕೇಳು. ಏಕೆಂದರೆ ಅವರು ನಿನ್ನನ್ನು ತಿರಸ್ಕಾರ ಮಾಡಿಲ್ಲ. ನಾನು ಅವರನ್ನು ಆಳದ ಹಾಗೆ ನನ್ನನ್ನೇ ತಿರಸ್ಕಾರಮಾಡಿದ್ದಾರೆ.


ಹೀಗೆ ಮಾಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ಬೇಕಾದವುಗಳನ್ನು ಇಸ್ರಾಯೇಲಿನ ಸ್ತ್ರೀಪುರುಷರೆಲ್ಲರು ಮನಃಪೂರ್ವಕವಾಗಿಯೇ ಯೆಹೋವ ದೇವರಿಗೆ ಕಾಣಿಕೆಯನ್ನು ತಂದರು.


ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.


ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.


ಆದರೆ ನಿನ್ನ ಉಪಚಾರವು ಬಲಾತ್ಕಾರದಿಂದಾಗದೆ, ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ, ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.


ಆದರೆ ಆಹಾರವು ನಮ್ಮನ್ನು ದೇವರ ಸಮೀಪಕ್ಕೆ ಸೇರಿಸಲಾರದು. ಅದನ್ನು ತಿನ್ನದಿದ್ದರೆ ನಮಗೆ ನಷ್ಟವಿಲ್ಲ, ತಿಂದರೆ ನಮಗೆ ಲಾಭವಿಲ್ಲ.


ಅವರು ಹಿಂಸೆಯನ್ನು ಗರ್ಭಧರಿಸಿ, ಕೆಟ್ಟದ್ದನ್ನು ಹೆರುವರು; ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”


ಈ ಕಾರಣದಿಂದ ನೀನೂ, ನಿನ್ನ ಸಮಸ್ತ ಗುಂಪು ಯೆಹೋವ ದೇವರಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ. ನೀವು ಆರೋನನಿಗೆ ವಿರೋಧವಾಗಿ ಗೊಣಗುಟ್ಟುವುದು ಯಾಕೆ?” ಎಂದು ಹೇಳಿದನು.


ಹರಕೆಮಾಡಿ ತೀರಿಸದೆ ಇರುವುದಕ್ಕಿಂತ, ಹರಕೆ ಮಾಡದೆ ಇರುವುದು ಒಳ್ಳೆಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು