Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:10 - ಕನ್ನಡ ಸಮಕಾಲಿಕ ಅನುವಾದ

10 ಆದರೆ ಅವನು ಜ್ಞಾನದಿಂದಲೂ ಪವಿತ್ರಾತ್ಮ ದೇವರಿಂದಲೂ ಮಾತನಾಡಿದ್ದರಿಂದ ಅವರಿಗೆ ಅವನನ್ನು ಎದುರಿಸಲು ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ವಿವೇಕದಿಂದ ಮಾತಾಡಲು ಪವಿತ್ರಾತ್ಮನು ಅವನಿಗೆ ಸಹಾಯಮಾಡಿದನು. ಸ್ತೆಫನನ ಮಾತುಗಳು ಬಹು ಶಕ್ತಿಯುತವಾಗಿದ್ದ ಕಾರಣ ಅವನೊಂದಿಗೆ ವಾದಿಸಲು ಅವರಿಗೆ ಸಾಧ್ಯವಾಗದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಪವಿತ್ರ್ ಆತ್ಮ್ಯಾನ್ ಸ್ತೆಪನಾಕ್ ಶಾನೆಪಾನಾನ್ ಬೊಲುಕ್ ಮಜತ್ ಕರ್‍ಲ್ಯಾನ್, ಸ್ತೆಪನಾಚಿ ಬೊಲ್ನಿ ಲೈ ಬಳಾಚಿ ಹೊವ್ನ್ ಹೊತ್ತ್ಯಾ ಸಾಟ್ನಿ ತೆಚ್ಯಾ ವಾಂಗ್ಡಾ ತೆಂಕಾ ವಾದ್ ಕರುಕ್ ಹೊಯ್ನಸ್ತಾನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:10
18 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.


ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಜ್ಞಾನ ಹಾಗೂ ಮನವೊಲಿಸುವ ವಾಕ್ಯಗಳನ್ನು ಪ್ರಯೋಗಿಸದೆ, ದೇವರಾತ್ಮನ ಶಕ್ತಿಯನ್ನೇ ಪ್ರಯೋಗಿಸಿದೆನು.


ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು.


ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು; ಸರ್ವಶಕ್ತರ ಶ್ವಾಸವು ಅವನಿಗೆ ತಿಳುವಳಿಕೆಯನ್ನು ಕೊಡುತ್ತದೆ.


ಹಾಗಾದರೆ ಈಗ ಹೋಗು, ನಾನೇ ನಿನ್ನ ಸಂಗಡವಿದ್ದು, ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು,” ಎಂದರು.


ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆಯುವೆನು. ಆಗ ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ.’ ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಏಕೆಂದರೆ ಅವರು ತಿರುಗಿಬೀಳುವ ಜನರಾಗಿದ್ದಾರೆಂದು ಹೇಳಬೇಕು.


ಏಕೆಂದರೆ ಅನೇಕ ವಿಷಯಗಳಿಂದ ನಾನು ತುಂಬಿದ್ದೇನೆ; ನನ್ನೊಳಗಿನ ಆತ್ಮವು ನನ್ನನ್ನು ಒತ್ತಾಯಪಡಿಸುತ್ತಿದೆ.


ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.


ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.


ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ. ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಜಯಿಸಲಾರರು. ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ, ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ.


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ, “ಬಿಡುಗಡೆ ಹೊಂದಿದವರು” ಎಂಬ ಯೆಹೂದ್ಯ ಸಭಾಮಂದಿರಕ್ಕೆ ಸೇರಿದವರಿಂದ ವಿರೋಧ ಉಂಟಾಯಿತು. ಅವರು ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಮತ್ತು ಏಷ್ಯಾ ಪ್ರಾಂತಗಳಿಂದ ಬಂದ ಯೆಹೂದ್ಯರಾಗಿದ್ದರು. ಅವರು ಸ್ತೆಫನನೊಂದಿಗೆ ತರ್ಕಿಸುವುದಕ್ಕೆ ಪ್ರಾರಂಭಿಸಿದರು.


ಆಗ ಅವರು, “ಇವನು ಮೋಶೆಗೂ ದೇವರಿಗೂ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುವುದನ್ನು ನಾವು ಕೇಳಿದ್ದೇವೆ,” ಎಂದು ಕೆಲವರಿಗೆ ಲಂಚಕೊಟ್ಟು ಹೇಳುವಂತೆ ರಹಸ್ಯವಾಗಿ ಮನವೊಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು