Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:10 - ಕನ್ನಡ ಸಮಕಾಲಿಕ ಅನುವಾದ

10 ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆಕಾ ಯೆಲ್ಲ್ಯಾ ತರಾಸಾಂತ್ನಾ ದೆವಾನ್ ಸೊಡ್ವುಲ್ಯಾನ್, ಇಜಿಪ್ತ್ ದೆಶಾತ್ ಫೆರೊಹ್ ರಾಜಾಕ್ನಾ ದಯಾ ಗಾಯ್ ಸಾರ್ಕೊ ಹೊಲೆ, ಅನಿ ತೆಕಾ ರಾಜಾನ್ ಇಜಿಪ್ತ್ ,ಅನಿ ಅಪ್ಲ್ಯಾ ಸಗ್ಳ್ಯಾ ಲೊಕಾಕ್ನಿ ಅದಿಪತಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:10
19 ತಿಳಿವುಗಳ ಹೋಲಿಕೆ  

ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ, ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.


ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.


ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ಏಕೆಂದರೆ ಸಂಕಟಪಡುವವನ ಸಂಕಟವನ್ನು ಅವರು ತಿರಸ್ಕರಿಸಲಿಲ್ಲ, ಅಸಹ್ಯಪಡಲಿಲ್ಲ; ತಮ್ಮ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಆತನು ಮೊರೆ ಇಡಲು, ಅವರು ಕೇಳಿದರು.


ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು. ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು. ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.


ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.


ಇಗೋ, ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ, ಕರ್ತದೇವರು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ತಿಳಿದು, ಕರ್ತದೇವರು ಬಹಳ ಒಳ್ಳೆಯವರೂ ದಯಾಳುವೂ ಆಗಿದ್ದಾರೆಂದು ತಿಳಿದಿದ್ದೀರಷ್ಟೆ.


ಯೆಹೂದನು ಅವನ ಸಮೀಪಕ್ಕೆ ಬಂದು, “ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಏಕೆಂದರೆ ನೀನು ಫರೋಹನಿಗೆ ಸಮಾನನು.


ಆದರೆ ಯೆಹೋವ ದೇವರು ಯೋಸೇಫನ ಸಂಗಡ ಇದ್ದು, ಅವನ ಮೇಲೆ ಕರುಣೆಯಿಟ್ಟು, ಸೆರೆಮನೆಯ ಯಜಮಾನನು ಅವನ ಮೇಲೆ ದಯೆ ತೋರಿಸುವಂತೆ ಮಾಡಿದರು.


ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನೂ, ಅವರ ಸಮಸ್ತ ದ್ರೋಹಗಳನ್ನೂ ಕ್ಷಮಿಸಿರಿ; ಅವರನ್ನು ಸೆರೆಯಾಗಿ ಒಯ್ಯುವವರು ಅವರನ್ನು ಕರುಣಿಸುವಂತೆ ನೀವು ಸಹ ಅವರನ್ನು ಕರುಣಿಸಿರಿ.


“ಅವನನ್ನು ಚೆನ್ನಾಗಿ ನೋಡಿಕೋ, ಅವನಿಗೆ ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಹೇಗೆ ಹೇಳುವನೋ, ಹಾಗೆಯೇ ಅವನಿಗೆ ಮಾಡು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು