Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:11 - ಕನ್ನಡ ಸಮಕಾಲಿಕ ಅನುವಾದ

11 “ಆ ಕಾಲದಲ್ಲಿ ಈಜಿಪ್ಟ್ ಮತ್ತು ಕಾನಾನ್ ದೇಶಗಳ ಎಲ್ಲಾ ಕಡೆಗಳಲ್ಲಿಯೂ ಕ್ಷಾಮ ಬಂದು ಜನರು ಬಹಳ ಬಾಧೆಪಟ್ಟರು, ನಮ್ಮ ಪಿತೃಗಳಿಗೆ ಆಹಾರ ದೊರೆಯದೇ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈಜಿಪ್ಟ್ ಹಾಗೂ ಕಾನಾನ್ ದೇಶಗಳಲ್ಲಿ ಕ್ಷಾಮ ತಲೆದೋರಿದಾಗ ಜನರು ಕಷ್ಟಸಂಕಟಗಳಿಗೆ ಒಳಗಾದರು. ನಮ್ಮ ಪೂರ್ವಜರು ಆಹಾರವಿಲ್ಲದೆ ಅವಸ್ಥೆಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಐಗುಪ್ತ ಕಾನಾನ್‍ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ನಮ್ಮ ಪಿತೃಗಳಿಗೆ ಕಾಳುಕಡ್ಡಿ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಈಜಿಪ್ಟಿನಲ್ಲಿ ಮತ್ತು ಕಾನಾನಿನಲ್ಲಿ ಬರಗಾಲ ಉಂಟಾಯಿತು. ಆಹಾರವಿಲ್ಲದೆ ನಮ್ಮ ಪಿತೃಗಳಿಗೆ ಬಹಳ ಕಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ತ್ಯಾ ಇಜಿಪ್ತ್ ಅನಿ ಕಾನಾನ್ ದೆಶಾತಾತ್ನಿ, ಲೈ ಬರ್ಗಾಲ್ ಯೆವ್ನ್ ಅಮ್ಚ್ಯಾ ಪುರ್ವಜಾಕ್ನಿಬಿ ಜೆವಾನ್ ಖಾನ್ ಗಾವ್ಕ್ ನಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:11
8 ತಿಳಿವುಗಳ ಹೋಲಿಕೆ  

ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.


ಅಲ್ಲಿ ನಿನ್ನನ್ನು ಪೋಷಿಸುವೆನು. ಏಕೆಂದರೆ ಇನ್ನೂ ಕ್ಷಾಮದ ಐದು ವರ್ಷಗಳಿವೆ. ನಿನಗೂ, ನಿನ್ನ ಮನೆಗೂ, ನಿನಗಿರುವುದೆಲ್ಲದಕ್ಕೂ ಬಡತನವಾಗಬಾರದು’ ಎಂದು ಹೇಳಿರಿ.


ದೇಶದಲ್ಲಿ ಬರವು ಘೋರವಾಗಿತ್ತು.


ಕಾನಾನ್ ದೇಶದಲ್ಲಿ ಬರವಿದ್ದುದರಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಬರುವವರೊಂದಿಗೆ ಇಸ್ರಾಯೇಲನ ಪುತ್ರರೂ ಬಂದರು.


ದೇಶದಲ್ಲಿ ಪ್ರವಾಸಮಾಡುವುದಕ್ಕಾಗಿ ಬಂದಿದ್ದೇವೆ. ಏಕೆಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವುದರಿಂದ, ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವುದರಿಂದ ನಿನ್ನ ದಾಸರು ಗೋಷೆನ್ ಪ್ರಾಂತದ ನಿವಾಸಿಗಳಾಗುವಂತೆ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು