Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:2 - ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ಭ್ರಾತೃಗಳೇ, ಪಿತೃಗಳೇ, ಕಿವಿಗೊಡಿ. ನಮ್ಮ ಪಿತಾಮಹ ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪಟೋಮಿಯದಲ್ಲಿ ಇದ್ದನು. ಆಗ ಮಹಿಮಾ ಸ್ವರೂಪರಾದ ದೇವರು ಅವನಿಗೆ ದರ್ಶನವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಸ್ತಪೆನಾಕ್ ಮಾಜ್ಯಾ ಭಾವಾನು ಅನಿ ಬಾಬಾನು, ಮಿಯಾ ಸಾಂಗ್ತಲೆ ಆಯ್ಕಾ, ಅಮ್ಚೊ ಪುರ್ವಜ್ಯಾಂಚೊ ಬಾಬಾ ಅಬ್ರಾಹಾಮ್ ಹಾರಾನಿತ್ ರ್‍ಹಾವ್ಚ್ಯಾ ಅದ್ದಿ ಮೆಸೆಪೊತಾಮ್ಯಾತ್ ಹೊತ್ತೊ, ದೆವಾನ್ ತೆಕಾ ಅಪ್ಲ್ಯಾ ಮಹಿಮಾನ್ ದಾಕ್ವುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:2
29 ತಿಳಿವುಗಳ ಹೋಲಿಕೆ  

ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗುವುದಕ್ಕಾಗಿ ಕಸ್ದೀಯರ ಊರ್ ಪಟ್ಟಣವನ್ನು ಬಿಟ್ಟು, ಹಾರಾನ್ ಎಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸವಾಗಿದ್ದನು.


“ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದಕ್ಕೆ ಕಿವಿಗೊಡಿರಿ,” ಎಂದು ಪ್ರಾರಂಭಿಸಿದನು.


ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ; ಮಹಿಮೆಯ ದೇವರು ಇದ್ದಾರೆ; ಯೆಹೋವ ದೇವರು ಮಹಾಸಾಗರಗಳ ಮೇಲೆ ಇದ್ದಾರೆ.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


“ನೀವು ಅಬ್ರಾಮನನ್ನು ಆಯ್ದುಕೊಂಡಿರುವ ಯೆಹೋವ ದೇವರು. ನೀವು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ, ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟಿರಿ.


ದೇವರು ಅವನಿಗೆ, “ಈ ದೇಶವನ್ನು ಸೊತ್ತಾಗಿ ನಿನಗೆ ಕೊಡಲು, ಕಸ್ದೀಯರ ಊರ್ ಎಂಬ ಪ್ರದೇಶದಿಂದ ನಿನ್ನನ್ನು ಹೊರಗೆ ತಂದ ಯೆಹೋವ ದೇವರು ನಾನೇ,” ಎಂದು ಹೇಳಿದರು.


“ನಮ್ಮ ಕರ್ತ ಆಗಿರುವ ದೇವರೇ, ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ. ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು, ನಿಮ್ಮ ಚಿತ್ತದಿಂದಲೇ ಇದ್ದವು,” ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು.


ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ.


ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ.


ಪೌಲನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದ ಉಂಟಾಯಿತು. ಇದರಿಂದ ಸಮೂಹವು ವಿಭಾಗವಾಯಿತು.


ಯೆಶಾಯನು ಯೇಸುವಿನ ಮಹಿಮೆಯನ್ನು ಕಂಡಿದ್ದರಿಂದ ಅವರ ವಿಷಯವಾಗಿ ಇವುಗಳನ್ನು ಹೇಳಿದನು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ನಾನು ಅವನನ್ನು ಕರೆದಾಗ ಅವನು ಒಬ್ಬನೇ ಮನುಷ್ಯ, ನಾನು ಅವನನ್ನು ಆಶೀರ್ವದಿಸಿ, ವೃದ್ಧಿಗೊಳಿಸಿದೆನು.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.


ಮಹಿಮೆಯ ಅರಸ ಯಾರು? ಸೇನಾಧೀಶ್ವರ ಯೆಹೋವ ದೇವರೇ ಆಗಿರುತ್ತಾರೆ. ಇವರೇ ಮಹಿಮೆಯ ಅರಸರು.


ದ್ವಾರಗಳೇ ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.


ಯೆಹೋಶುವನು ಅವರೆಲ್ಲರಿಗೂ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ‘ಪೂರ್ವದಲ್ಲಿ ನಿಮ್ಮ ಮೂಲ ಪುರುಷರಾದ ಅಬ್ರಹಾಮನಿಗೂ ನಾಹೋರನಿಗೂ ತಂದೆಯಾದ ತೆರಹನು ಯೂಫ್ರೇಟೀಸ್ ನದಿಯ ಆಚೆ ವಾಸವಾಗಿದ್ದಾಗ ಅವರೆಲ್ಲರೂ ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.


ಯಾಕೋಬನು ಅವರಿಗೆ, “ನನ್ನ ಸಹೋದರರೇ, ನೀವು ಎಲ್ಲಿಯವರು?” ಎಂದಾಗ. ಅವರು, “ನಾವು ಹಾರಾನಿನವರು,” ಎಂದರು.


ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ಸಹೋದರನ ಮಗ ಲೋಟನನ್ನೂ, ತಾವು ಕೂಡಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಹಾರಾನಿನಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಜನರನ್ನೂ ತಮ್ಮ ಸಂಗಡ ಕರೆದುಕೊಂಡು ಕಾನಾನ್ ದೇಶಕ್ಕೆ ಸೇರಿದನು.


ಯೆಹೋವ ದೇವರು ಅಬ್ರಾಮನಿಗೆ ಹೀಗೆ ಹೇಳಿದರು, “ನೀನು ನಿನ್ನ ಸ್ವದೇಶದಿಂದಲೂ ಬಂಧುಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರಬಂದು, ನಾನು ನಿನಗೆ ತೋರಿಸುವ ನಾಡಿಗೆ ಹೋಗು.


ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?


ಆಗ ಮಹಾಯಾಜಕನು, “ಈ ಸಂಗತಿಗಳು ನಿಜವೋ?” ಎಂದು ಸ್ತೆಫನನನ್ನು ಪ್ರಶ್ನಿಸಿದನು.


ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.


ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ನನ್ನ ಪ್ರಿಯರೇ, ಮಹಿಮೆಯುಳ್ಳ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ವಿಶ್ವಾಸಿಗಳಾಗಿರುವ ನೀವು ಪಕ್ಷಪಾತಿಗಳಾಗಿರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು