Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:25 - ಕನ್ನಡ ಸಮಕಾಲಿಕ ಅನುವಾದ

25 ದೇವರು ಸ್ವಜನರಿಗೆ ತನ್ನ ಮೂಲಕವಾಗಿ ಬಿಡುಗಡೆಯನ್ನು ಕೊಡುವನೆಂದು ಅವರು ಅರ್ಥ ಮಾಡಿಕೊಳ್ಳುವರೆಂದು ಮೋಶೆ ಭಾವಿಸಿದ್ದನು. ಸ್ವಜನರೋ, ಇದನ್ನು ಅರ್ಥಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸ್ವಜನರ ಬಿಡುಗಡೆಗೆ ದೇವರು ತನ್ನನ್ನು ನೇಮಿಸಿರುವರು; ತನ್ನ ಸ್ವಂತಜನರು ಇದನ್ನು ಅರ್ಥಮಾಡಿಕೊಳ್ಳುವರು ಎಂದು ಮೋಶೆ ಭಾವಿಸಿದ್ದನು. ಆದರೆ, ಅವರು ಅರ್ಥಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬದು ತನ್ನ ಸಹೋದರರಿಗೆ ತಿಳಿದುಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ತಮ್ಮನ್ನು ರಕ್ಷಿಸಲು ದೇವರು ಮೋಶೆಯನ್ನು ಉಪಯೋಗಿಸುತ್ತಿದ್ದಾನೆ ಎಂಬುದಾಗಿ ತನ್ನ ಯೆಹೂದ್ಯ ಸಹೋದರರು ಅರ್ಥಮಾಡಿಕೊಳ್ಳುತ್ತಾರೆ ಎಂದು ಮೋಶೆ ಭಾವಿಸಿಕೊಂಡನು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ದೆವಾನ್ ಅಮ್ಕಾ ಸುಟ್ಕಾ ಕರುನ್ ರಾಕ್ವನ್ ಕರುಕ್ ಸಾಟ್ನಿ ಅಪ್ನಾಕ್ ಧಾಡ್ಲಾ ಮನುನ್ ತೆನಿ ಕಳ್ವುನ್ ಘೆಂವ್ದಿ ಮನುನ್ ಮೊಯ್ಜೆನ್ ಚಿಂತ್ಲ್ಯಾನ್, ಖರೆ ತೆನಿ ತೆ ಕಳ್ವುನ್ ಘೆವ್ಕ್ ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:25
20 ತಿಳಿವುಗಳ ಹೋಲಿಕೆ  

ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ


ಪೌಲನು ಅವರನ್ನು ವಂದಿಸಿ, ತನ್ನ ಸೇವೆಯ ಮೂಲಕ ದೇವರು ಯೆಹೂದ್ಯರಲ್ಲದವರ ಮಧ್ಯದಲ್ಲಿ ಮಾಡಿದ ಕಾರ್ಯಗಳನ್ನು ವಿವರಿಸಿದನು.


ಬಹಳ ಚರ್ಚೆಯಾಗುತ್ತಿರುವಾಗ ಪೇತ್ರನು ಎದ್ದು ನಿಂತು ಅವರಿಗೆ, “ಸಹೋದರರೇ, ಯೆಹೂದ್ಯರಲ್ಲದವರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂಬ ಉದ್ದೇಶದಿಂದ ನಿಮ್ಮೊಳಗಿಂದ ನನ್ನನ್ನು ದೇವರು ಬಹು ದಿನಗಳ ಹಿಂದೆ ಆಯ್ದುಕೊಂಡರೆಂಬುದು ನಿಮಗೆ ತಿಳಿದೇ ಇದೆ.


ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು.


ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.


ಆದರೆ ಶಿಷ್ಯರಿಗೆ ಇವುಗಳಲ್ಲಿ ಒಂದೂ ಅರ್ಥವಾಗಲಿಲ್ಲ. ಈ ಮಾತುಗಳು ಅವರಿಗೆ ಮರೆಯಾಗಿದ್ದುದರಿಂದ, ಯೇಸು ಹೇಳಿದವುಗಳನ್ನು ಅವರು ತಿಳಿದುಕೊಳ್ಳಲಿಲ್ಲ.


ಆದರೆ ಶಿಷ್ಯರು ಈ ಮಾತನ್ನು ತಿಳಿದುಕೊಳ್ಳಲಿಲ್ಲ. ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು, ಆ ಮಾತನ್ನು ಕುರಿತು ಯೇಸುವನ್ನು ಕೇಳುವುದಕ್ಕೆ ಅವರು ಭಯಪಟ್ಟರು.


ಆದರೆ ಅವರಲ್ಲಿ ಆ ಮಾತನ್ನು ಯಾರೂ ಗ್ರಹಿಸಲಿಲ್ಲ. ಯೇಸುವನ್ನು ಕೇಳುವುದಕ್ಕೂ ಭಯಪಟ್ಟರು.


ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.


ಅರಾಮಿನ ಅರಸನ ಸೈನ್ಯಾಧಿಪತಿ ನಾಮಾನನು ತನ್ನ ಯಜಮಾನನ ಮುಂದೆ ಮಹಾಪುರುಷನಾಗಿಯೂ, ಘನವುಳ್ಳವನಾಗಿಯೂ ಇದ್ದನು. ಏಕೆಂದರೆ ಅವನಿಂದ ಯೆಹೋವ ದೇವರು ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದರು. ಇದಲ್ಲದೆ ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾಗಿದ್ದನು.


ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಫಿಲಿಷ್ಟಿಯನನ್ನು ಹೊಡೆದನು. ಯೆಹೋವ ದೇವರು ಸಮಸ್ತ ಇಸ್ರಾಯೇಲರಿಗೋಸ್ಕರ ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ನೀನೂ ಕಂಡು ಸಂತೋಷಪಟ್ಟೆ. ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರ್ದೋಷಿಯ ರಕ್ತಕ್ಕೆ ವಿರೋಧವಾಗಿ ಅಪರಾಧವನ್ನು ಮಾಡುವುದೇಕೆ?” ಎಂದನು.


ಆದರೆ ಜನರು ಸೌಲನಿಗೆ, “ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆಯನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಎಂದಿಗೂ ಇಲ್ಲ. ಯೆಹೋವ ದೇವರ ಜೀವದಾಣೆ, ಇದನ್ನು ಅವನು ದೇವರ ಸಹಾಯದಿಂದ ಮಾಡಿದ್ದರಿಂದ, ಅವನ ಒಂದು ಕೂದಲು ನೆಲಕ್ಕೆ ಬೀಳಬಾರದು,” ಎಂದು ಹೇಳಿ ಯೋನಾತಾನನು ಸಾಯದ ಹಾಗೆ ಪ್ರಾಯಶ್ಚಿತ್ತವನ್ನು ಮಾಡಿ ಬಿಡಿಸಿಕೊಂಡರು.


ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.


ಅವನು ಸುತ್ತಮುತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು ಆ ಈಜಿಪ್ಟಿನವನನ್ನು ಕೊಂದುಹಾಕಿ, ಮರಳಿನಲ್ಲಿ ಮುಚ್ಚಿಹಾಕಿದನು.


ತನ್ನ ಬಂಧುಗಳಲ್ಲಿ ಒಬ್ಬನನ್ನು ಈಜಿಪ್ಟಿನವನೊಬ್ಬನು ಹೊಡೆಯುತ್ತಿರುವುದನ್ನು ಕಂಡು, ಮೋಶೆ ಆ ಈಜಿಪ್ಟಿನವನನ್ನು ಕೊಂದುಹಾಕಿ ಸೇಡು ತೀರಿಸಿದನು.


ಮರುದಿನ ಇಬ್ಬರು ಇಸ್ರಾಯೇಲರು ಜಗಳವಾಡುತ್ತಿರುವುದನ್ನು ಮೋಶೆ ಕಂಡು, ‘ಗೆಳೆಯರೇ, ನೀವು ಸಹೋದರರಲ್ಲವೇ; ಒಬ್ಬರಿಗೊಬ್ಬರು ಏಕೆ ಜಗಳಮಾಡುತ್ತಿದ್ದೀರಿ?’ ಎಂದು ಹೇಳಿ ಅವರನ್ನು ಸಮಾಧಾನಪಡಿಸಲು ಯತ್ನಿಸಿದನು.


ಆಗ ಅವರು ಅವನಿಗೆ, “ನಾವು ನಿನ್ನನ್ನು ಕಟ್ಟಿ, ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು,” ಎಂದರು. ಸಂಸೋನನು ಅವರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ನನಗೆ ಆಣೆ ಇಡಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು