Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:35 - ಕನ್ನಡ ಸಮಕಾಲಿಕ ಅನುವಾದ

35 “ ‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ ‘ನಮ್ಮ ನ್ಯಾಯತೀರಿಸುವ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?’ ಎಂದು ಇಸ್ರಯೇಲರಿಂದ ತಿರಸ್ಕೃತನಾದವನೇ ಆ ಮೋಶೆ. ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡ ತಮ್ಮ ದೂತನ ಮೂಲಕ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ನೇಮಿಸಿದ್ದು ಇವನನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವರು ಯಾವ ಮೋಶೆಯನ್ನು - ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರೆಂದು ಹೇಳಿ ಬೇಡವೆಂದರೋ ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ ಬಿಡುಗಡೆಮಾಡುವವನನ್ನಾಗಿಯೂ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಆಗಿನ್ ಜಳುಕ್ಲಾಗಲ್ಯಾ ಝಿಳಿತ್ ಮೊಯ್ಜೆನ್ ದೆವ್ ದುತಾಕ್ ಬಗಲ್ಯಾನ್, ದೆವಾನ್ ತ್ಯಾ ದುತಾಕ್ನಾಚ್ ಮೊಯ್ಜೆಕ್ ಇಸ್ರಾಯೆಲ್ ಲೊಕಾಕ್ನಿ ಸುಟ್ಕಾ ಕರ್‍ತಲೊ ಅನಿ ಅದಿಪತಿ ಕರುನ್ ಧಾಡಲೆ, ಖರೆ ತ್ಯಾ ಲೊಕಾನಿ ತೆಕಾ ಅಮ್ಚೊ ಮುಖಂಡ್ ಅನಿ ಝಡ್ತಿ ಕರ್‍ತಲೊ ಮನುನ್ ತುಕಾ ಕೊನಿತರಿ ಸಾಂಗ್ಲಾತ್ ಕಾಯ್? ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:35
32 ತಿಳಿವುಗಳ ಹೋಲಿಕೆ  

“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.


ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.


ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ.


ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ಏಕೆಂದರೆ ದೇವದೂತರ ಮೂಲಕ ಹೇಳಲಾದ ವಾಕ್ಯವೇ ದೃಢಪಡಿಸಲಾಯಿತು. ಆದ್ದರಿಂದ ಆ ವಾಕ್ಯವನ್ನು ಮೀರಿದವರಿಗೂ ಅವಿಧೇಯರಾದವರಿಗೂ ನ್ಯಾಯವಾದ ದಂಡನೆ ಕೊಡಲಾಯಿತು.


ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


“ನಲವತ್ತು ವರ್ಷಗಳು ಗತಿಸಿದ ತರುವಾಯ ಸೀನಾಯಿ ಪರ್ವತದ ಮರುಭೂಮಿಯಲ್ಲಿ ಉರಿಯುವ ಪೊದೆಯಲ್ಲಿ ದೇವದೂತನೊಬ್ಬನು ಮೋಶೆಗೆ ದರ್ಶನ ಕೊಟ್ಟನು.


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


ಮೋಶೆಯು ಹೇಳಿದ್ದೇನೆಂದರೆ: ‘ನಿಮ್ಮ ಕರ್ತದೇವರು ನಿಮ್ಮ ಸ್ವಂತ ಸಹೋದರರೊಳಗಿಂದ ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗಾಗಿ ಎಬ್ಬಿಸುವರು. ಅವರು ನಿಮಗೆ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗಿರಬೇಕು.


“ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.


ಆದರೆ ಅವರು, “ಆತನನ್ನು ಕೊಲ್ಲಿಸು ಕೊಲ್ಲಿಸು! ಆತನನ್ನು ಶಿಲುಬೆಗೆ ಹಾಕು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಬೇಕೆ?” ಎಂದು ಕೇಳಿದನು. ಆಗ ಮುಖ್ಯಯಾಜಕರು, “ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.


ಅದಕ್ಕೆ ಅವರೆಲ್ಲರೂ ತಿರುಗಿ, “ಇವನು ಬೇಡ, ನಮಗೆ ಬರಬ್ಬನನ್ನು ಬಿಟ್ಟುಕೊಡು,” ಎಂದು ಕೂಗಿಕೊಂಡರು. ಆ ಬರಬ್ಬನು ದರೋಡೆಕೋರನಾಗಿದ್ದನು.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ಮೋಶೆ ಆರೋನರ ಕೈಯಿಂದ ನಿಮ್ಮ ಜನರನ್ನು ಮಂದೆಯ ಹಾಗೆ ನಡೆಸಿದಿರಿ.


“ಯಾಕೋಬನು ಈಜಿಪ್ಟಿಗೆ ಬಂದ ತರುವಾಯ, ನಿಮ್ಮ ತಂದೆಗಳು ಯೆಹೋವ ದೇವರಿಗೆ ಮೊರೆಯಿಟ್ಟರು. ಆಗ ಯೆಹೋವ ದೇವರು ಮೋಶೆಯನ್ನೂ, ಆರೋನನನ್ನೂ ಕಳುಹಿಸಿದರು. ಇವರು ನಿಮ್ಮ ಪಿತೃಗಳನ್ನು ಈಜಿಪ್ಟಿನಿಂದ ಕರೆತಂದು, ಅವರನ್ನು ಈ ದೇಶದಲ್ಲಿ ವಾಸಿಸುವಂತೆ ಮಾಡಿದರು.


ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು.


ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ, ಅಮೋರಿಯರನ್ನೂ, ಹಿತ್ತಿಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಹೊರದೂಡುವೆನು.


ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.


ಬೆಳಗಿನ ಜಾವದಲ್ಲಿ ಯೆಹೋವ ದೇವರು ಅಗ್ನಿ ಮೇಘಗಳ ಸ್ತಂಭದೊಳಗಿಂದ ಈಜಿಪ್ಟಿನ ದಂಡಿನ ಮೇಲೆ ದೃಷ್ಟಿಯಿಟ್ಟು, ಈಜಿಪ್ಟಿನ ದಂಡನ್ನು ಗಾಬರಿಗೊಳಿಸಿದರು.


ಅದಕ್ಕವನು, “ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿದ್ದಾರೆ? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದು ಹಾಕಬೇಕೆಂದಿದ್ದೀಯೋ?” ಎಂದನು. ಆಗ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ತಿಳಿದಿರಬೇಕು,” ಎಂದುಕೊಂಡನು.


ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು