Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:36 - ಕನ್ನಡ ಸಮಕಾಲಿಕ ಅನುವಾದ

36 ಈ ಮೋಶೆಯೇ ಇಸ್ರಾಯೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿಕೊಂಡು ಬಂದನು. ಈಜಿಪ್ಟಿನಲ್ಲಿ, ಕೆಂಪುಸಮುದ್ರದ ಬಳಿಯಲ್ಲಿ, ಅರಣ್ಯದಲ್ಲಿ ಅದ್ಭುತಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ನಲವತ್ತು ವರ್ಷಗಳ ಕಾಲ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅವನೇ ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡಿಸಿಕೊಂಡು ಬಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತಸೆ ಹೊವ್ನ್ ಮೊಯ್ಜೆನ್ ಲೊಕಾಕ್ನಿ ಇಜಿಪ್ತಾತ್ನಾ ಬಲ್ವುನ್ ಹಾನ್ಲ್ಯಾನ್ ಅನಿ ತೆನಿ ಇಜಿಪ್ತಾತ್, ತಾಂಬ್ಡ್ಯಾ ಸಮುಂದರಾತ್, ಅನಿ ಚಾಳಿಸ್ ವರ್ಸಾ ಪತರ್ ಡಂಗ್ಳಿತ್ಬಿ ಅಜಾಬಾಚಿ ಅನಿ ಚಮತ್ಕಾರಾಚಿ ಕಾಮಾ ಕರುಂಗೆತ್ ಲೊಕಾಕ್ನಿ ಫಿಡೆ ಚಾಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:36
38 ತಿಳಿವುಗಳ ಹೋಲಿಕೆ  

ಆಗ ಮೋಶೆಯು ಸಮುದ್ರದ ಮೇಲೆ ತನ್ನ ಬಲಗೈಯನ್ನು ಚಾಚಲಾಗಿ, ಯೆಹೋವ ದೇವರು ರಾತ್ರಿಯೆಲ್ಲಾ ಬಲವಾದ ಪೂರ್ವದಿಕ್ಕಿನ ಗಾಳಿಯಿಂದ ಸಮುದ್ರವನ್ನು ಹಿಂದಕ್ಕೆ ಹೋಗುವಂತೆ ಸಮುದ್ರವನ್ನು ಸರಿಸಿ, ಒಣ ನೆಲ ಕಾಣಿಸುವಂತೆ ಮಾಡಿದರು. ಆಗ ನೀರು ವಿಭಾಗವಾಯಿತು.


ನಾನೂರ ಮೂವತ್ತು ವರ್ಷಗಳು ತೀರಿದ ತರುವಾಯ, ಅದೇ ದಿನದಲ್ಲಿ ಯೆಹೋವ ದೇವರ ಸೈನ್ಯಗಳೆಲ್ಲಾ ಈಜಿಪ್ಟ್ ದೇಶವನ್ನು ಬಿಟ್ಟು ಹೊರಗೆ ಹೋದವು.


ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ, ‘ನಿಮ್ಮ ಸಂತತಿಯವರಿಗೆ ಅದನ್ನು ಕೊಡುವೆನು,’ ಎಂದು ಹೇಳಿ ಪ್ರಮಾಣ ಮಾಡಿದ ದೇಶಕ್ಕೆ ಹೋಗು.


ಇಸ್ರಾಯೇಲರು ತಾವು ವಾಸವಾಗಿರತಕ್ಕ ದೇಶಕ್ಕೆ ಬರುವವರೆಗೆ, ನಲವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಸೇರುವವರೆಗೂ ಅವರು ಮನ್ನವನ್ನು ತಿಂದರು.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ.


ಅರಣ್ಯದಲ್ಲಿ ಸುಮಾರು ನಲವತ್ತು ವರ್ಷ ಅವರ ನಡತೆಯನ್ನು ಸಹಿಸಿಕೊಂಡರು.


ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “ ‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.


ನಾಲ್ವತ್ತು ವರ್ಷ ಆ ಸಂತತಿಗೆ ಬೇಸರಗೊಂಡು, ‘ಇವರು ತಮ್ಮ ಹೃದಯದಲ್ಲಿ ತಪ್ಪಿಹೋಗುವ ಜನರಾಗಿದ್ದಾರೆ, ನನ್ನ ಮಾರ್ಗಗಳನ್ನು ಇವರು ಅರಿಯರು,’ ಎಂದೆನು.


ಈಜಿಪ್ಟಿನವರು ಗರ್ವಿಗಳಾಗಿ ಇಸ್ರಾಯೇಲರನ್ನು ಕುಗ್ಗಿಸಿದಾಗ, ನೀವು ಫರೋಹನ ಮೇಲೆಯೂ, ಅವನ ಸಮಸ್ತ ಅಧಿಕಾರಿಗಳ ಮೇಲೆಯೂ, ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದಿರಿ. ಈ ಪ್ರಕಾರವೇ ನೀವು ಇಂದಿನವರೆಗೂ ನಿಮ್ಮ ಹೆಸರಿನ ಕೀರ್ತಿಯನ್ನು ಸ್ಥಾಪಿಸಿದ್ದೀರಿ.


ಈ ನಲವತ್ತು ವರ್ಷ ನಿಮ್ಮ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ, ನಿಮ್ಮ ಕಾಲುಗಳು ಬಾತುಹೋಗಲಿಲ್ಲ.


ಹೀಗಿರುವುದರಿಂದ ನನ್ನ ಕೈಯನ್ನು ಚಾಚಿ ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿ, ನಾನು ಅದನ್ನು ನಾನಾ ವಿಧವಾಗಿ ಬಾಧಿಸುವೆನು. ತರುವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.


“ನೀವು ಮೆರೀಬದಲ್ಲಿ ಮಾಡಿದಂತೆ, ಹೌದು, ಅಂದು ನೀವು ಮರುಭೂಮಿಯ ಮಸ್ಸಾ ಎಂಬ ಸ್ಥಳದಲ್ಲಿ ಮಾಡಿದಂತೆ, ನಿಮ್ಮ ಹೃದಯವನ್ನು ಕಠಿಣಪಡಿಸಬೇಡಿರಿ.


ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕಾಣದ ಹೊರತು ನಂಬುವುದೇ ಇಲ್ಲ,” ಎಂದರು.


ಅರಣ್ಯದಲ್ಲಿದ್ದಾಗ ನನ್ನನ್ನು ಪರೀಕ್ಷಿಸಿದ ದಿನದಲ್ಲಿ ಕೋಪಕ್ಕೆ ಈಡುಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.


ನಿಮ್ಮ ಪಿತೃಗಳು ನನ್ನನ್ನು ಕೆಣಕಿ ಪರೀಕ್ಷಿಸಿದರು, ನಲವತ್ತು ವರ್ಷ ನನ್ನ ಕಾರ್ಯಗಳನ್ನು ನೋಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು