Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:48 - ಕನ್ನಡ ಸಮಕಾಲಿಕ ಅನುವಾದ

48 “ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಆದರೆ ಪರಾತ್ಪರ ದೇವರು ಮಾನವ ನಿರ್ಮಿತ ಆಲಯಗಳಲ್ಲಿ ಮನೆಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆದರೂ ಪರಾತ್ಪರನು ಕೈಯಿಂದ ಕಟ್ಟಿದ ಮನೆಗಳಲ್ಲಿ ವಾಸಮಾಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 “ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಖರೆ ಪ್ರವಾದಿನಿ ಸಾಂಗಲ್ಲ್ಯಾ ಸಾರ್ಕೆ ಸಗ್ಳ್ಯಾತ್ ಮೊಟೊ ದೆವ್ ಮಾನ್ಸಾನಿ ಅಪ್ಲ್ಯಾ ಹಾತಿನ್ ಬಾಂದಲ್ಯಾ ಘರಾತ್ನಿ ವಸ್ತಿ ರ್‍ಹಾಯ್ನಾ, ಮನುನ್ ಲಿವಲ್ಲೆ ಹಾಯ್:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:48
17 ತಿಳಿವುಗಳ ಹೋಲಿಕೆ  

“ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ವಾಸವಾಗಿರುವರೋ? ಇಗೋ, ಆಕಾಶವೂ ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?


“ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವರೋ? ಇಗೋ, ಆಕಾಶವೂ, ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?


“ಮಹೋನ್ನತ ದೇವರು ನಮ್ಮ ಆಶ್ರಯ,” ಎಂದು ಹೇಳುವದಾದರೆ, ಯೆಹೋವ ದೇವರು ನಿಮ್ಮ ನಿವಾಸವಾಗಿ ಮಾಡಿಕೊಂಡರೆ,


“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’


ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.


ಯೆಹೋವ ದೇವರೇ, ನೀವಾದರೋ ಎಂದೆಂದಿಗೂ ಉನ್ನತರಾಗಿದ್ದೀರಿ.


ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.


ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.


ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.


ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.


ಅವರು ಮಹೋನ್ನತನಾದಾತನ ಕಡೆಗೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿನ ಹಾಗೆ ಇದ್ದಾರೆ. ಅವರ ನಾಯಕರು ನಾಲಿಗೆಯ ಹುಚ್ಚು ಕೂಗಾಟದಿಂದ, ಖಡ್ಗದಿಂದ ಬೀಳುವರು. ಇದೇ ಈಜಿಪ್ಟ್ ದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.


ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು.


ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು