Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:51 - ಕನ್ನಡ ಸಮಕಾಲಿಕ ಅನುವಾದ

51 “ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಸ್ತೆಪನಾನ್ ಅನಿಬಿ ಬೊಲುನ್, “ಮಂಡ್ ಮನಾಚ್ಯಾ ಲೊಕಾನು ತುಮಿ ತುಮ್ಚಿ ಮಾನಾ ದೆವಾಕ್ ದಿವ್ಕ್ ನ್ಯಾಸಿ, ಅನಿ ತೆಚ್ಯಾ ಗೊಸ್ಟಿಯಾಕ್ನಿ ಕಾನ್ ದಿವ್ಕ್ ನ್ಯಾಸಿ, ಪವಿತ್ರ್ ಆತ್ಮ್ಯಾಕ್ ಕನ್ನಾಬಿ ವಿರೊಧ್ ಹೊವ್ನ್ ಹಾಸಿ ತುಮ್ಚ್ಯಾ ಪುರ್ವಜ್ ಲೊಕಾನಿ ಬಿ ಅಸೆಚ್ ಕರ್‍ಲ್ಯಾನಿ, ಅನಿ ತುಮಿ ಬಿ ತೆಂಚ್ಯಾ ಸಾರ್ಕೆಚ್ ಹಾಸಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:51
38 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ.


ನಾನು ಸಹ ಅವರಿಗೆ ವಿರೋಧವಾಗಿ ನಡೆದುಕೊಂಡು ಅವರನ್ನು ತಮ್ಮ ಶತ್ರುಗಳ ದೇಶದಲ್ಲಿ ಬರಮಾಡಿದ್ದನ್ನೂ ಅರಿಕೆಮಾಡಿದರೆ, ಆಗಲೇ ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆಬಾಗಿ, ಅವರು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಒಪ್ಪಿಕೊಳ್ಳುವುದಾದರೆ,


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ಏಕೆಂದರೆ ಯೆಹೋವ ದೇವರು ಮೋಶೆಗೆ, “ಇಸ್ರಾಯೇಲರಿಗೆ ಹೀಗೆ ಹೇಳು: ‘ನೀವು ಆಜ್ಞೆಗಳನ್ನು ಪಾಲಿಸದ ಹಟಮಾರಿ ಜನರು. ನಾನು ಕ್ಷಣಮಾತ್ರವೂ ನಿಮ್ಮೊಡನೆ ಬಂದರೆ ನೀವು ನಿರ್ಮೂಲವಾಗಿಬಿಡುವಿರಿ. ಹೀಗಿರುವುದರಿಂದ ಈಗ ನಿಮ್ಮ ಆಭರಣಗಳನ್ನು ನಿಮ್ಮಿಂದ ತೆಗೆದುಬಿಡಿರಿ, ನಾನು ನಿಮಗೆ ಏನು ಮಾಡಬೇಕೆಂಬುದನ್ನು ತೀರ್ಮಾನಿಸುವೆನು’ ಎಂದು ಹೇಳು,” ಎಂದು ತಿಳಿಸಿದರು.


ಇದಲ್ಲದೆ ಯೆಹೋವ ದೇವರು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಇವರು ಹಟಮಾರಿ ಜನರೇ,


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು. ನಾನು ನಿಮ್ಮ ಸಂಗಡ ಹೋಗುವುದಿಲ್ಲ ಏಕೆಂದರೆ ನೀವು ಮಾತು ಕೇಳದ ಹಟಮಾರಿ ಜನರಾಗಿದ್ದೀರಿ ಮತ್ತು ಮಾರ್ಗದಲ್ಲಿ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು,” ಎಂದರು.


ಆದರೆ ಅವನು ಜ್ಞಾನದಿಂದಲೂ ಪವಿತ್ರಾತ್ಮ ದೇವರಿಂದಲೂ ಮಾತನಾಡಿದ್ದರಿಂದ ಅವರಿಗೆ ಅವನನ್ನು ಎದುರಿಸಲು ಸಾಧ್ಯವಾಗಲಿಲ್ಲ.


ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಮುಚ್ಚಿಹೋಗಿವೆ. ಇಗೋ, ಯೆಹೋವ ದೇವರ ವಾಕ್ಯವು ಅವನಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.


ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, ಅವರ ಆತ್ಮವು ದೇವರಲ್ಲಿ ನಂಬಿಗಸ್ತಿಕೆಯಿಂದಲೂ ಇರಲಿಲ್ಲ.


ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.


ನೀನು ನಿಯಮವನ್ನು ಕೈಕೊಳ್ಳುವವನಾದರೆ, ಸುನ್ನತಿ ಪ್ರಯೋಜನಕರವಾಗಿರುವುದು. ಆದರೆ ನೀನು ನಿಯಮವನ್ನು ಮೀರಿ ನಡೆಯುವವನಾದರೆ, ನಿನಗೆ ಸುನ್ನತಿಯಾಗಿದ್ದರೂ ಇಲ್ಲದಂತಾಗಿರುವುದು.


“ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ಒಪ್ಪಿಕೊಳ್ಳಲಿಲ್ಲ. ಅದಕ್ಕೆ ಬದಲಾಗಿ ಅವರು ಅವನನ್ನು ತಿರಸ್ಕರಿಸಿ, ತಮ್ಮ ಹೃದಯಗಳಲ್ಲಿ ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗಬೇಕೆಂದಿದ್ದರು.


“ಆದರೆ ಹೊಡೆಯುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?


“ಈ ಪಿತೃಗಳು ಯೋಸೇಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗಿದ್ದು,


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲರೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಬಾರದು.


ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.


ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.


ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು?


ಅವರು ಕಠಿಣ ಹೃದಯದವರು ಮತ್ತು ಹಠಮಾರಿ ಆಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ. ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಹೇಳಬೇಕು.


ಆದರೆ ಅವರು ವಿಧೇಯರಾಗಲಿಲ್ಲ, ಕಿವಿಗೊಟ್ಟು ಕೇಳಲಿಲ್ಲ. ಆದರೆ ವಿಧೇಯರಾಗದ ಹಾಗೆಯೂ, ಉಪದೇಶ ಹೊಂದದ ಹಾಗೆಯೂ ಹಟಮಾರಿಯಾಗಿದ್ದರು.


ಏಕೆಂದರೆ ನೀನು ಹಟಗಾರ. ನಿನ್ನ ಕತ್ತಿನ ನರಗಳು ಕಬ್ಬಿಣ, ನಿನ್ನ ಹಣೆ ಕಂಚಿನದು ಎಂದು ನಾನು ತಿಳಿದುಕೊಂಡಿದ್ದೇನೆ.


ನಿಮ್ಮ ಕೊಂಬನ್ನು ಪರಲೋಕದ ಕಡೆಗೆ ಎತ್ತಬೇಡಿರಿ. ಹಟಮಾರಿತನದಿಂದ ಮಾತನಾಡಬೇಡಿರಿ,” ಎಂದು ನೀವು ಹೇಳಿದ್ದೀರಿ.


“ಆದರೆ ನಮ್ಮ ಪಿತೃಗಳು ಗರ್ವಪಟ್ಟು ನಡೆದು, ಹಟಮಾರಿಗಳೂ, ಕಠಿಣರೂ ಆಗಿ ನಿಮ್ಮ ಆಜ್ಞೆಗಳಿಗೆ ಅವಿಧೇಯರಾದರು.


ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.


ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.


ಇದಲ್ಲದೆ ಯೆಹೋವ ದೇವರು ನನಗೆ, “ನಾನು ಈ ಜನರನ್ನು ನೋಡಿದ್ದೇನೆ. ಇಗೋ, ಇದು ಆಜ್ಞೆಗೆ ವಿಧೇಯವಾಗದ ಜನಾಂಗವೇ.


ಹೀಗಿರುವುದರಿಂದ ನಿಮ್ಮ ನೀತಿಗೋಸ್ಕರ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ಒಳ್ಳೆಯ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಕೊಡುವುದಿಲ್ಲವೆಂದು ನೀವು ತಿಳಿದುಕೊಳ್ಳಬೇಕು. ಏಕೆಂದರೆ ನೀವು ಹಟಮಾರಿ ಜನಾಂಗವಾಗಿದ್ದೀರಿ.


ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.


“ ‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು.


ಏಕೆಂದರೆ ನೀವು ಚಿನ್ ಎಂಬ ಮರುಭೂಮಿಯಲ್ಲಿ, ಇಸ್ರಾಯೇಲ್ ಜನಸಮೂಹದವರು ನನ್ನೊಡನೆ ವಾಗ್ವಾದ ಮಾಡಿದಾಗ ಅವರ ಮುಂದೆ ನೀರಿನ ಬಳಿಯಲ್ಲಿ ನನ್ನನ್ನು ಗೌರವಿಸದೆ, ನನ್ನ ಆಜ್ಞೆಯನ್ನು ಮೀರಿದಿರಿ. ಆ ನೀರು ಎಂದರೆ ಚಿನ್ ಎಂಬ ಮರುಭೂಮಿಯ ಕಾದೇಶಿನಲ್ಲಿರುವ ಮೆರೀಬಾದ ನೀರು,” ಎಂದರು.


ಆದರೆ ಅವರು ಕೇಳದೆ ತಮ್ಮ ದೇವರಾದ ಯೆಹೋವ ದೇವರಲ್ಲಿ ನಂಬಿಕೆ ಇಡದೆ ತಮ್ಮ ಪಿತೃಗಳಂತೆ ದೇವರ ಆಜ್ಞೆಗಳಿಗೆ ಮಣಿಯದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು