Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:13 - ಕನ್ನಡ ಸಮಕಾಲಿಕ ಅನುವಾದ

13 ಸೀಮೋನನು ಸಹ ವಿಶ್ವಾಸವಿಟ್ಟು, ದೀಕ್ಷಾಸ್ನಾನ ಹೊಂದಿದನು. ಫಿಲಿಪ್ಪ ಮಾಡಿದ ಮಹಾಸೂಚಕಕಾರ್ಯಗಳನ್ನು ಮತ್ತು ಅದ್ಭುತಗಳನ್ನು ಕಂಡು, ಬೆರಗಾಗಿ ಅವನು ಹೋದಲ್ಲೆಲ್ಲಾ ಅವನನ್ನು ಹಿಂಬಾಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಿಮೋನನು ಕೂಡ ವಿಶ್ವಾಸವಿಟ್ಟನು. ದೀಕ್ಷಾಸ್ನಾನವನ್ನು ಪಡೆದು ಫಿಲಿಪ್ಪನ ಸಂಗಡಿಗನಾದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕಂಡು ಬೆಕ್ಕಸಬೆರಗಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಸೀಮೋನನು ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಸ್ವತಾ ಸಿಮಾಂವಾನ್ಬಿ ವಿಶ್ವಾಸ್ ಕರ್‍ಲ್ಯಾನ್, ಅನಿ ಬಾಲ್ತಿಮ್ ಘೆಟ್ಲ್ಯಾನ್, ಅನಿ ಸಿಮಾವ್ ಪಿಲಿಪಾಚ್ಯಾ ಜಗ್ಗೊಳುಚ್ ರ್‍ಹಾಯ್, ಫಿಲಿಪಾನ್ ಕರಲಿ ಆಜಾಪಾಚಿ ಕಾಮಾ ಬಗುನ್ ಸಿಮಾವ್ ಲೈ ವಿಸ್ಮಿತ್ ಹೊಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:13
16 ತಿಳಿವುಗಳ ಹೋಲಿಕೆ  

ದೇವರು ಪೌಲನ ಮುಖಾಂತರ ಅಸಾಧಾರಣ ಅದ್ಭುತಗಳನ್ನು ಮಾಡುತ್ತಿದ್ದರು.


ತಂದೆ ಪುತ್ರನನ್ನು ಪ್ರೀತಿಸಿ ತಾನು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ನೀವು ಆಶ್ಚರ್ಯಪಡುವಂತೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಪುತ್ರನಿಗೆ ತೋರಿಸುವರು.


ಮುಂದಿನ ಸಬ್ಬತ್ ದಿನ ಕರ್ತದೇವರ ವಾಕ್ಯ ಕೇಳಲು ನಗರದ ಜನರೆಲ್ಲರೂ ಹೆಚ್ಚಾಗಿ ಕೂಡಿಬಂದರು.


ಯೇಸು ಅವರಿಗೆ, “ನಾನು ಒಂದು ಕ್ರಿಯೆಯನ್ನು ಮಾಡಿದೆನು. ಅದಕ್ಕೆ ನೀವೆಲ್ಲರೂ ಆಶ್ವರ್ಯಪಡುತ್ತೀರಿ.


ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.


ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು.


ನಿನ್ನ ಹೃದಯವು ದೇವರ ದೃಷ್ಟಿಯಲ್ಲಿ ಸರಿಯಾಗಿಲ್ಲವಾದ್ದರಿಂದ ಈ ಸೇವೆಯಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ.


ಅವನು ದೇವಾಲಯದ “ಸುಂದರದ್ವಾರದ” ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದ ಮನುಷ್ಯನೇ ಎಂದು ಗುರುತಿಸಿದರು. ಅವನಿಗೆ ಸಂಭವಿಸಿದ್ದರ ಬಗ್ಗೆ ಅವರು ವಿಸ್ಮಯಗೊಂಡು ಬೆರಗಾದರು.


“ಜನಾಂಗಗಳ ಕಡೆಗೆ ನೋಡಿ ಲಕ್ಷ್ಯಗೊಟ್ಟು ಬಹಳವಾಗಿ ಆಶ್ಚರ್ಯಪಡಿರಿ. ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ವಿವರಿಸಿ ಹೇಳಿದರೂ ನೀವದನ್ನು ನಂಬುವುದಿಲ್ಲ.


ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು