Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:33 - ಕನ್ನಡ ಸಮಕಾಲಿಕ ಅನುವಾದ

33 ಅವರ ಅವಮಾನದಲ್ಲಿ ನ್ಯಾಯವು ಅವರಿಂದ ತೆಗೆಯಲಾಯಿತು. ಭೂಮಿಯಿಂದ ಆತನ ಜೀವವನ್ನು ತೆಗೆದೇಬಿಟ್ಟರಲ್ಲವೇ, ಆತನ ಸಂತತಿಯವರ ಬಗ್ಗೆ ಮಾತನಾಡಬಲ್ಲವರು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆತನನ್ನು ಅವಮಾನಪಡಿಸಲಾಯಿತು ನ್ಯಾಯವನ್ನೇ ಆತನಿಗೆ ನಿರಾಕರಿಸಲಾಯಿತು ಆತನ ಸಂತತಿಯ ಮಾತೇ ಎತ್ತದಂತಾಯಿತು. ಇದಕಾರಣ ಆತನ ಭೌತಿಕಜೀವವನ್ನೇ ಮೊಟಕುಗೊಳಿಸಲಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನಿಗುಂಟಾದ ದೀನಾವಸ್ಥೆಯಲ್ಲಿ ನ್ಯಾಯವು ಇಲ್ಲದೆಹೋಯಿತು. ಆತನ ಸಕಾಲದವರನ್ನು ಹೇಳತಕ್ಕದ್ದೇನು? ಆತನ ಜೀವವನ್ನು ಭೂವಿುಯ ಮೇಲಿನಿಂದ ತೆಗೆದುಬಿಟ್ಟರಲ್ಲಾ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆತನಿಗೆ ಅವಮಾನ ಮಾಡಿದರು. ಆತನಿಗೆ ನ್ಯಾಯವು ದೊರೆಯಲಿಲ್ಲ. ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದುಬಿಟ್ಟರಲ್ಲಾ! ಆತನ ಸಂತತಿಯವರ ಬಗ್ಗೆ ಯಾರು ಮಾತಾಡಬಲ್ಲರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತೆನಿ ಮಾನುನ್ ಘೆಟಲ್ಯಾ ಸಾಟ್ನಿ ತೆಕಾ ನ್ಯಾಯ್ ಗಾವ್ಕನಾ ತೆಚ್ಯಾ ಪುರ್ವಜಾಂಚ್ಯಾ ವಿಶಯಾತ್ ಸಾಂಗುಕ್ ಕೊನಾಕ್ಬಿ ಬಳ್ ನಾ ಕಶ್ಯಾಕ್ ಮಟ್ಲ್ಯಾರ್, ಜಿಮ್ನಿ ವೈನಾ ತೆಜೊ ಜಿವನ್ ಸರುನ್ಗೆತ್ ಯೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:33
17 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.


ಆತನನ್ನು ದಬ್ಬಾಳಿಕೆಯಿಂದಲೂ, ನ್ಯಾಯತೀರ್ಪಿನಿಂದಲೂ ಎಳೆದುಕೊಂಡು ಹೋದರು. ಆತನ ಕಾಲದವರಲ್ಲಿ ಯಾರು ಮರುಗಿದರು? ಏಕೆಂದರೆ ಆತನನ್ನು ಜೀವಿತರ ಲೋಕದಿಂದ ತೆಗೆದುಹಾಕಿದರು. ನನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಶಿಕ್ಷೆಯನ್ನು ಹೊಂದಿದನು.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಆದ್ದರಿಂದ ದೈವನಿಯಮವು ಪಕ್ಕಕ್ಕೆ ಇಡಲಾಗಿದೆ. ನ್ಯಾಯವು ಎಂದಿಗೂ ಸ್ಥಾಪಿತವಾಗುವುದಿಲ್ಲ. ಏಕೆಂದರೆ ದುಷ್ಟರು ನೀತಿವಂತರನ್ನು ಸುತ್ತಿಕೊಂಡಿದ್ದಾರೆ. ಆದ್ದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ಇವರು ವಿಧವೆಯರನ್ನು ಸೂರೆಮಾಡಿ, ದಿಕ್ಕಿಲ್ಲದವರಿಂದ ಸುಲಿದುಕೊಂಡು ದೀನರಿಗೆ ನ್ಯಾಯವನ್ನು ತಪ್ಪಿಸಿ, ನನ್ನ ಜನರಲ್ಲಿ ಬಡವರ ನ್ಯಾಯವನ್ನು ತೆಗೆಯಬೇಕೆಂದಿದ್ದಾರೆ.


ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ, ನೀತಿಯನ್ನು ನೀತಿವಂತನಿಂದ ತೆಗೆದು ಹಾಕುವವರಿಗೂ ಕಷ್ಟ!


ಸಂತಾನವು ದೇವರನ್ನು ಸೇವಿಸುವುದು; ಮುಂದಿನ ಸಂತತಿಗಳಿಗೆ ಯೆಹೋವ ದೇವರ ಬಗ್ಗೆ ಹೇಳಲಾಗುವುದು.


ನನ್ನ ಬಾಯಿ ಬೋಕಿಯ ಹಾಗೆ ಒಣಗಿಹೋಗಿದೆ, ನನ್ನ ನಾಲಿಗೆ ಅಂಗಳಕ್ಕೆ ಹತ್ತಿದೆ, ನೀವು ನನ್ನನ್ನು ಮಣ್ಣಿಗೆ ಸೇರಿಸುವಿರಿ.


“ಏಕೆಂದರೆ ಯೋಬನು, ‘ನಾನು ನಿರ್ದೋಷಿಯಾಗಿದ್ದೇನೆ. ಆದರೆ ದೇವರು ನನಗೆ ನ್ಯಾಯವನ್ನು ನಿರಾಕರಿಸಿದ್ದಾರೆ.


ನನ್ನ ನ್ಯಾಯವನ್ನು ತಪ್ಪಿಸಿದ ಜೀವಂತ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತರ ಆಣೆ,


ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.


ನಂತರ ಕಂಚುಕಿಯು, “ಪ್ರವಾದಿ ಇಲ್ಲಿ ಯಾರ ಬಗ್ಗೆ ಮಾತನಾಡುತ್ತಿದ್ದಾನೆ, ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ? ನನಗೆ ಹೇಳು,” ಎಂದು ಫಿಲಿಪ್ಪನನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು