Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:16 - ಕನ್ನಡ ಸಮಕಾಲಿಕ ಅನುವಾದ

16 ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನು ನನ್ನ ಹೆಸರಿನ ನಿಮಿತ್ತ ಅನುಭವಿಸಬೇಕಾಗಿರುವ ಹಿಂಸೆಯನ್ನು ನಾನೇ ಅವನಿಗೆ ತೋರಿಸಿಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 “ತೆನಿ ಮಾಜ್ಯಾ ಸಾಟ್ನಿ ಸೊಸುನ್ ಘೆವ್ಚೊ ಹೊಲ್ಲೊ ತರಾಸ್ ಮಿಯಾಚ್, ತೆಕಾ ದಾಕ್ವುನ್ ದಿತಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:16
22 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ. ಏಕೆಂದರೆ ಇವುಗಳಿಗಾಗಿಯೇ ನಾವು ನೇಮಕವಾಗಿದ್ದೇವೆ ಎಂದು ನೀವೇ ಬಲ್ಲಿರಿ.


ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳಿಗೆ ಅದನ್ನು ಕಟ್ಟಿಕೊಂಡು, “ಪವಿತ್ರಾತ್ಮರು ಇಂತೆನ್ನುತ್ತಾರೆ, ‘ಈ ನಡುಪಟ್ಟಿ ಯಾರದೋ ಆ ಮನುಷ್ಯನನ್ನು ಯೆರೂಸಲೇಮಿನ ಯೆಹೂದ್ಯರು ಈ ರೀತಿಯಲ್ಲಿ ಬಂಧಿಸಿ, ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು,’ ” ಎಂದನು.


ಅದಕ್ಕೆ ಬದಲಾಗಿ, ಸರ್ವ ವಿಷಯಗಳಲ್ಲಿ ನಾವು ದೇವರ ಸೇವಕರಾಗಿದ್ದೇವೆಂದು ತೋರಿಸುತ್ತೇವೆ. ಕಷ್ಟ, ಸಂಕಟ ತೊಂದರೆಗಳಲ್ಲಿ ಮಹಾ ದೀರ್ಘತಾಳ್ಮೆಯನ್ನು ತೋರಿಸುತ್ತೇವೆ.


‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.


ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ.


ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


“ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು.


ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.


ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಅವರೊಂದಿಗೆ ಏಳು ದಿನ ಇದ್ದೆವು. ಪೌಲನು ಯೆರೂಸಲೇಮಿಗೆ ಹೋಗಬಾರದೆಂದು ಅವರು ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದರು.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಇಲ್ಲಿ ನಿಮ್ಮ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕನಿಂದ ಅಧಿಕಾರದ ಪತ್ರ ಪಡೆದು ಬಂದಿದ್ದಾನೆ,” ಎಂದು ಉತ್ತರಕೊಟ್ಟನು.


ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಎದ್ದೇಳು ಪಟ್ಟಣದೊಳಗೆ ಹೋಗು, ನೀನು ಏನು ಮಾಡಬೇಕು ಎಂಬುದನ್ನು ಅಲ್ಲಿ ನಿನಗೆ ತಿಳಿಸಲಾಗುವುದು,” ಎಂದು ಕರ್ತ ಯೇಸು ಹೇಳಿದರು.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು