Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:29 - ಕನ್ನಡ ಸಮಕಾಲಿಕ ಅನುವಾದ

29 ಗ್ರೀಕ್ ಮಾತನಾಡುವ ಯೆಹೂದ್ಯರೊಂದಿಗೆ ಅವನು ಮಾತನಾಡಿ ಚರ್ಚೆಮಾಡಿದಾಗ, ಅವರು ಅವನನ್ನು ಕೊಲ್ಲಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಗ್ರೀಕ್ ಮಾತನಾಡುತ್ತಿದ್ದ ಯೆಹೂದ್ಯರೊಡನೆ ಸಂಭಾಷಿಸುತ್ತಾ ಅವರ ವಿರುದ್ಧ ವಾದಿಸುತ್ತಿದ್ದನು. ಅವರಾದರೋ ಅವನನ್ನು ಕೊಲ್ಲಲು ಹವಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತಾಡಿ ತರ್ಕಿಸುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಗ್ರೀಕ್ ಮಾತಾಡುತ್ತಿದ್ದ ಯೆಹೂದ್ಯರೊಂದಿಗೆ ಸೌಲನು ಪದೇಪದೇ ವಾದಮಾಡಿದನು. ಆದರೆ ಅವರು ಅವನನ್ನು ಕೊಲ್ಲಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಸಾವ್ಲು ಗ್ರಿಕ್ ಭಾಶ್ಯಾ ಭೊಲ್ತಲ್ಯಾ ಜುದೆವಾಂಚ್ಯಾ ವಾಂಗ್ಡಾ ಪರ್ತುನ್ ಭೊಲ್ತಾ ಅನಿ ವಾದ್ ಕರ್‍ತಾ ಖರೆ ತೆನಿ ತೆಕಾ ಜಿವ್ ಕಾಡುಕ್ ಬಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:29
13 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.


ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು, ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ, ಅವನು ಸೈತಾನನನ್ನು ದೂಷಿಸುವುದಕ್ಕೆ ಧೈರ್ಯಗೊಳ್ಳದೆ, “ಕರ್ತದೇವರು ನಿನ್ನನ್ನು ಗದರಿಸಲಿ!” ಎಂದನು.


ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು.


ಆದರೆ ಅವರಲ್ಲಿ, ಕೆಲವರು ಅಂದರೆ ಸೈಪ್ರಸ್ ಮತ್ತು ಕುರೇನೆದ ಪುರುಷರು ಅಂತಿಯೋಕ್ಯಕ್ಕೆ ಹೋಗಿ ಗ್ರೀಕರಿಗೂ ಕರ್ತ ಯೇಸುವಿನ ಶುಭಸಮಾಚಾರ ಸಾರಲು ಪ್ರಾರಂಭಿಸಿದರು.


ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು.


ಎಫೆಸಕ್ಕೆ ತಲುಪಿದಾಗ, ಪೌಲನು ಅವರನ್ನು ಅಲ್ಲಿಯೇ ಬಿಟ್ಟು ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚೆ ನಡೆಸಿದನು.


ಆದ್ದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ದೇವಭಕ್ತಿಯುಳ್ಳ ಗ್ರೀಕರೊಂದಿಗೂ ಅಲ್ಲದೆ ಬಹಿರಂಗ ಸಂತೆಪೇಟೆ ಸ್ಥಳದಲ್ಲಿ ದಿನದಿನವೂ ಬರುತ್ತಿದ್ದ ಜನರೊಂದಿಗೂ ಚರ್ಚೆ ಮಾಡುತ್ತಿದ್ದನು.


ಬಾರ್ನಬನು ಅವನನ್ನು ಕರೆದುಕೊಂಡು ಅಪೊಸ್ತಲರ ಬಳಿಗೆ ಬಂದನು. ಸೌಲನು ಪ್ರಯಾಣ ಮಾಡುತ್ತಿದ್ದಾಗ ಅವನಿಗೆ ಕರ್ತ ಯೇಸು ದರ್ಶನವಾದದ್ದನ್ನೂ ಕರ್ತ ಯೇಸು ಅವನೊಂದಿಗೆ ಮಾತನಾಡಿದ್ದನ್ನೂ ಯಾವ ಭಯವಿಲ್ಲದೆ ದಮಸ್ಕದಲ್ಲಿ ಯೇಸುವಿನ ಹೆಸರಿನಲ್ಲಿ ಅವನು ಬೋಧಿಸಿದ್ದನ್ನೂ ಬಾರ್ನಬನು ತಿಳಿಸಿದನು.


ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಹೀಗೆ ಸೌಲನು ಅಪೊಸ್ತಲರೊಂದಿಗೆ ಇದ್ದು ಯೆರೂಸಲೇಮಿನಲ್ಲಿ ಆತಂಕವಿಲ್ಲದೆ ತಿರುಗಾಡಿ ಕರ್ತ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದನು.


ಆಗ ಕರ್ತ ಯೇಸು ನನ್ನೊಂದಿಗೆ ಮಾತನಾಡುತ್ತಿರುವುದನ್ನು ಕಂಡೆನು. ಅವರು, ‘ತಡಮಾಡದೆ! ತಕ್ಷಣವೇ ಯೆರೂಸಲೇಮನ್ನು ಬಿಟ್ಟು ಹೊರಟು ಹೋಗು, ಏಕೆಂದರೆ ನೀನು ನನ್ನನ್ನು ಕುರಿತು ಹೇಳುವ ಸಾಕ್ಷಿಯನ್ನು ಅವರು ಸ್ವೀಕರಿಸುವುದಿಲ್ಲ,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು