Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:33 - ಕನ್ನಡ ಸಮಕಾಲಿಕ ಅನುವಾದ

33 ಅಲ್ಲಿ ಐನೇಯ ಎಂಬ ಹೆಸರಿನ ಒಬ್ಬಾತನನ್ನು ಸಂದರ್ಶಿಸಿದನು. ಅವನು ಪಾರ್ಶ್ವವಾಯು ರೋಗ ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರ್ಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅಲ್ಲಿ ಪಾರ್ಶ್ವವಾಯು ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಐನೇಯಾ ಎಂಬವನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅವನು ಲುದ್ದದಲ್ಲಿ ಐನೇಯಾ ಎಂಬವನನ್ನು ಕಂಡನು. ಪಾರ್ಶ್ವವಾಯು ರೋಗಿಯಾಗಿದ್ದ ಅವನು ಎಂಟು ವರ್ಷಗಳಿಂದ ಹಾಸಿಗೆ ಮೇಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತೆನಿ ಲಿಡ್ಡಾತ್ ಎನೆಯಾ ಮನ್ತಲ್ಯಾ ಎಕ್ ಮಾನ್ಸಾಕ್ ಬಗಟ್ಲ್ಯಾನ್, ತೆಕಾ ವಾರೆಮಾರುನ್ ಆಟ್ ವರ್ಸಾಚ್ಯಾನ್ ತೊ ಹಾತ್ರಾನಾತುಚ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:33
13 ತಿಳಿವುಗಳ ಹೋಲಿಕೆ  

ಅಬ್ರಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರ್ಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೇ?” ಎಂದರು.


ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದನು. ಅವನು ಹುಟ್ಟು ಕುಂಟನಾಗಿದ್ದುದರಿಂದ ಅವನೆಂದೂ ನಡೆದಾಡಿರಲಿಲ್ಲ.


ಅದ್ಭುತ ರೀತಿಯಲ್ಲಿ ಸ್ವಸ್ಥತೆ ಹೊಂದಿದ ಆ ಮನುಷ್ಯನು ನಾಲ್ವತ್ತಕ್ಕಿಂತಲೂ ಹೆಚ್ಚು ವರ್ಷ ವಯಸ್ಸಿನವನಾಗಿದ್ದನು.


ದೇವಾಲಯದೊಳಗೆ ಹೋಗುವವರಿಂದ ಭಿಕ್ಷೆ ಬೇಡಲು ಪ್ರತಿದಿನ “ಸುಂದರದ್ವಾರ” ಎಂದು ಕರೆಯಲಾಗುತ್ತಿದ್ದ ದೇವಾಲಯದ ದ್ವಾರದ ಬಳಿಯಲ್ಲಿ ಹುಟ್ಟುಕುಂಟನೊಬ್ಬನನ್ನು ಕೆಲವರು ಹೊತ್ತುಕೊಂಡು ಬಂದು ಬಿಡುತ್ತಿದ್ದರು.


ಆದರೆ ಇವನಿಗೆ ಈಗ ಕಣ್ಣು ಕಾಣುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೆಂದೂ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ; ಇವನು ಪ್ರಾಯದವನಾಗಿದ್ದಾನೆ. ಇವನೇ ತನ್ನ ವಿಷಯವಾಗಿ ಮಾತನಾಡುವನು,” ಎಂದು ಹೇಳಿದರು.


ಯೇಸು ನಡೆದು ಹೋಗುತ್ತಿದ್ದಾಗ, ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡರು.


ಆಗ ಮೂವತ್ತೆಂಟು ವರ್ಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನು ಅಲ್ಲಿ ಇದ್ದನು.


ಯೇಸು ಅವನ ತಂದೆಗೆ, “ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?” ಎಂದು ಕೇಳಲು, ಅವನು, “ಬಾಲ್ಯದಿಂದಲೇ ಹೀಗಿದೆ.


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಪೇತ್ರನು ಬೇರೆ ಬೇರೆ ಕಡೆಗಳಲ್ಲಿ ಪ್ರಯಾಣಮಾಡಿದ ತರುವಾಯ ಲುದ್ದದಲ್ಲಿಯ ದೇವಭಕ್ತರನ್ನು ಸಂದರ್ಶಿಸಲು ಹೋದನು.


ಪೇತ್ರನು ಅವನಿಗೆ, “ಐನೇಯ, ಕ್ರಿಸ್ತ ಯೇಸುವು ನಿನ್ನನ್ನು ಗುಣಪಡಿಸುತ್ತಾರೆ. ಏಳು, ನಿನ್ನ ಹಾಸಿಗೆಯನ್ನು ಸುತ್ತಿಡು,” ಎಂದು ಹೇಳಲು, ತಕ್ಷಣವೇ ಐನೇಯ ಮೇಲಕ್ಕೆದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು