Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:35 - ಕನ್ನಡ ಸಮಕಾಲಿಕ ಅನುವಾದ

35 ಲುದ್ದ ಹಾಗೂ ಸಾರೋನಿನ ನಿವಾಸಿಗಳೆಲ್ಲರೂ ಅವನನ್ನು ಕಂಡು ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮತ್ತು ಲುದ್ದದಲ್ಲಿಯೂ, ಶಾರೋನಿನಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿ, ಅವರು ಕರ್ತನ ಕಡೆಗೆ ತಿರುಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಲುದ್ದ ಮತ್ತು ಸಾರೋನಿನ ನಿವಾಸಿಗಳೆಲ್ಲರೂ ಅವನನ್ನು ಕಂಡು ಪ್ರಭುವಿನ ಭಕ್ತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಮತ್ತು ಲುದ್ದದಲ್ಲಿಯೂ ಸಾರೋನಪ್ರಾಂತ್ಯದಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿದರು, ಮತ್ತು ಅವರು ಕರ್ತನ ಕಡೆಗೆ ತಿರುಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಲುದ್ದದಲ್ಲಿ ಮತ್ತು ಸಾರೋನಿನ ಬಯಲಿನಲ್ಲಿ ವಾಸವಾಗಿದ್ದ ಜನರೆಲ್ಲರು ಅವನನ್ನು ಕಂಡು ಪ್ರಭು ಯೇಸುವಿನಲ್ಲಿ ನಂಬಿಕೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಲಿಡ್ಡಾ ಅನಿ ಸಾರೊನಾಚ್ಯಾ ಮಾಳಾತ್ ಜಿವನ್ ಕರಿತ್ ಹೊತ್ತಿ ಸಗ್ಳ್ಯಾ ಲೊಕಾನಿ ತೆಕಾ ಬಗುನ್ ಧನಿಯಾಕ್ಡೆ ಮನ್ ಪರತ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:35
32 ತಿಳಿವುಗಳ ಹೋಲಿಕೆ  

ಕರ್ತ ಯೇಸುವಿನ ಹಸ್ತವು ಅವರೊಂದಿಗಿತ್ತು ಬಹಳಷ್ಟು ಜನರು ನಂಬಿ ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.


ಈ ವಿಷಯ ಯೊಪ್ಪದಲ್ಲಿದ್ದವರೆಲ್ಲರಿಗೂ ತಿಳಿಯಿತು. ಕರ್ತ ಯೇಸುವಿನಲ್ಲಿ ಅನೇಕರು ವಿಶ್ವಾಸವನ್ನಿಟ್ಟರು.


ಅವರು ಗಿಲ್ಯಾದಿನಲ್ಲಿರುವ ಬಾಷಾನಿನಲ್ಲಿಯೂ, ಅವರ ಊರುಗಳಲ್ಲಿಯೂ, ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.


ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.


ಆದರೆ ಯಾರಾದರೂ ಕರ್ತ ಯೇಸುವಿನ ಕಡೆಗೆ ತಿರುಗಿದಾಗೆಲ್ಲಾ, ಆ ಮುಸುಕು ಅವರಿಂದ ತೆಗೆಯಲಾಗುತ್ತದೆ.


ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.


ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಜವಾಬ್ದಾರಿಯಾಗಿದ್ದನು. ತಗ್ಗುಗಳಲ್ಲಿರುವ ದನಗಳ ಮೇಲೆ ಅಡ್ಲಾಯಿಯ ಮಗನಾದ ಶಾಫಾಟನು ಜವಾಬ್ದಾರಿಯಾಗಿದ್ದನು.


ಹೀಗೆ ಕರ್ತ ಯೇಸುವಿನ ವಾಕ್ಯವು ವಿಸ್ತಾರವಾಗಿ ಹರಡುತ್ತಾ ಪ್ರಬಲವಾಯಿತು.


ಇದು ಎರಡು ವರ್ಷಗಳ ಕಾಲ ಮುಂದುವರಿಯಿತು. ಇದರಿಂದ ಏಷ್ಯಾ ಪ್ರಾಂತದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ ಗ್ರೀಕರೂ ಕರ್ತ ಯೇಸುವಿನ ವಾಕ್ಯವನ್ನು ಕೇಳಿದರು.


“ಆದ್ದರಿಂದ, ದೇವರ ಕಡೆಗೆ ತಿರುಗುತ್ತಿರುವ ಯೆಹೂದ್ಯರಲ್ಲದವರಿಗೆ ನಾವು ತೊಂದರೆ ಮಾಡಬಾರದು ಎಂಬುದೇ ನನ್ನ ತೀರ್ಮಾನ.


ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು.


ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು.


ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.


ಆದರೆ ನೀನು ನಿನ್ನ ದೇವರ ಕಡೆಗೆ ತಿರುಗಿಕೋ. ಪ್ರೀತಿಯನ್ನೂ, ನ್ಯಾಯವನ್ನೂ ಪಾಲಿಸು ಮತ್ತು ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು.


ನಾವು ನಮ್ಮ ಮಾರ್ಗಗಳನ್ನು ಪರಿಶೋಧಿಸಿ, ಪರೀಕ್ಷಿಸಿಕೊಂಡು ಆಮೇಲೆ ಯೆಹೋವ ದೇವರ ಬಳಿಗೆ ತಿರುಗಿಕೊಳ್ಳೋಣ.


ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥ ಸಂಗತಿಯನ್ನು ಕಂಡವರಾರು? ಒಂದೇ ದಿನದಲ್ಲಿ ದೇಶ ಒಂದು ಹುಟ್ಟೀತೇ? ಕ್ಷಣಮಾತ್ರದಲ್ಲಿ ರಾಷ್ಟ್ರವನ್ನು ಹೆರಲಿಕ್ಕಾದೀತೇ? ಆದರೂ ಪ್ರಸವವೇದನೆ ತೊಡಗಿದೊಡನೆ ಚೀಯೋನೆಂಬಾಕೆ ಮಕ್ಕಳನ್ನು ಹೆತ್ತಿದ್ದಾಳೆ.


ನನ್ನನ್ನು ಹುಡುಕುವ ನನ್ನ ಜನರಿಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ, ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾಗಿಯೂ ಇರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.


ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನು ನಾಚಿಕೆಪಟ್ಟು ಕಡಿದು ಬೀಳುವುದು. ಶಾರೋನ್ ಬೆಂಗಾಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.


ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ, ಆತನ ಕಡೆಗೆ ತಿರುಗಿಕೊಳ್ಳಿರಿ.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ನೀವು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿಮಗೆ ಸಂಭವಿಸಿದಾಗ, ಕಡೇ ದಿವಸಗಳಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು ವಿಧೇಯರಾಗಿರಿ.


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.


ಎಲ್ಪಾಲನ ಪುತ್ರರು: ಏಬೆರ್, ಮಿಷಾಮ್, ಶೆಮೆದ್. ಶೆಮೆದನು ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು.


ಲೋದ್, ಹಾದೀದ್, ಓನೋ ಎಂಬ ಊರಿನ ಜನರು 725


ಲೋದ್, ಹಾದೀದ್, ಓನೋ ಎಂಬ ಊರಿನ ಜನರು 721 ಮಂದಿ ಇದ್ದರು.


ಲೋದ್, ಓನೋ ಮತ್ತು ಗೇಹರಾಷೀಮ್ ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು.


ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.


ಪೇತ್ರನು ಅವನಿಗೆ, “ಐನೇಯ, ಕ್ರಿಸ್ತ ಯೇಸುವು ನಿನ್ನನ್ನು ಗುಣಪಡಿಸುತ್ತಾರೆ. ಏಳು, ನಿನ್ನ ಹಾಸಿಗೆಯನ್ನು ಸುತ್ತಿಡು,” ಎಂದು ಹೇಳಲು, ತಕ್ಷಣವೇ ಐನೇಯ ಮೇಲಕ್ಕೆದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು