Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:36 - ಕನ್ನಡ ಸಮಕಾಲಿಕ ಅನುವಾದ

36 ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್‍ಭಾಷೆಯಲ್ಲಿ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ “ಜಿಂಕೆ.” ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಜೊಪ್ಪಾ ಶಾರಾತ್ ತಬಿಥಾ ಮನ್ತಲಿ ಜೆಜುಚಿ ಶಿಸೆ ಹೊತ್ತಿ, ಗ್ರಿಕ್ ಭಾಶ್ಯಾನ್ ತಿಜೆ ನಾವ್ ದೊರ್ಕಾಸ್ ಮಟ್ಲ್ಯಾರ್, “ಚಿತಾಳ್” ಮನುನ್, ತಿ ಕನ್ನಾಬಿ ಲೊಕಾಂಚ್ಯಾ ಸಾಟ್ನಿ ಬರಿ ಕಾಮಾಚ್ ಕರಿತ್ ಹೊತ್ತಿ, ಅನಿ ತಿ ಗರಿಬ್ ಹೊತ್ತ್ಯಾ ಲೊಕಾಕ್ನಿ ಕನ್ನಾಬಿ ಮಜ್ಜತ್ ಕರಿತ್ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:36
30 ತಿಳಿವುಗಳ ಹೋಲಿಕೆ  

ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯ ಮಾಡುವುದರಲ್ಲಿ ಆದರ್ಶವಾಗಿ ತೋರಿಸು. ಬೋಧನೆಯಲ್ಲಿ ಪ್ರಾಮಾಣಿಕತೆಯನ್ನೂ ಗಂಭೀರತೆಯನ್ನೂ


ಇದಲ್ಲದೆ ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ನೀನು ಅವುಗಳನ್ನು ಯೆರೂಸಲೇಮಿಗೆ ಒಯ್ಯಬಹುದು.”


ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


ಅವನು ನನಗೆ, ‘ಕೊರ್ನೇಲ್ಯನೇ, ದೇವರು ನಿನ್ನ ಪ್ರಾರ್ಥನೆ ಕೇಳಿದ್ದಾರೆ. ಬಡವರಿಗೆ ಕೊಟ್ಟ ನಿನ್ನ ದಾನಗಳನ್ನು ಜ್ಞಾಪಿಸಿಕೊಂಡಿದ್ದಾರೆ.


ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ನೀವು ಪ್ರೀತಿಸುತ್ತಿರುವುದು ನಿಜವೆ. ಆದರೂ ಪ್ರಿಯರೇ, ನೀವು ಪ್ರೀತಿಯಲ್ಲಿ ಇನ್ನೂ ಸಮೃದ್ಧಿಯಾಗಬೇಕೆಂದು ನಾವು ನಿಮ್ಮನ್ನು ಉತ್ತೇಜಿಸುತ್ತೇವೆ.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ನೀವು ಬಹಳ ಫಲಕೊಡುವುದರಿಂದಲೇ ನನ್ನ ಶಿಷ್ಯರಾಗಿರುವಿರಿ, ಇದರಿಂದ ನನ್ನ ತಂದೆಗೆ ಮಹಿಮೆಯಾಗುವುದು.


“ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.


ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.


ಆಕೆಯು ಮನೋಹರವಾದ ಹರಿಣಿ, ಅಂದವಾದ ಜಿಂಕೆಯ ಹಾಗೆಯೂ; ಆಕೆಯ ಎದೆಯು ನಿನ್ನನ್ನು ಸದಾ ತೃಪ್ತಿಪಡಿಸಲಿ; ಆಕೆಯ ಪ್ರೀತಿಯಿಂದ ನೀನು ಸದಾ ಪರವಶನಾಗಿರು.


ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪ ಊರಿಗೆ ಎದುರಾದ ಮೇರೆಯು ಸಹ ದೊರಕಿತು.


ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ


ನನ್ನ ಪ್ರಿಯನೇ, ಸುಗಂಧ ಸಸ್ಯ ಪರ್ವತಗಳ ಮೇಲಿರುವ ಜಿಂಕೆಯಂತೆಯೂ, ಪ್ರಾಯದ ಹುಲ್ಲೆಯಂತೆಯೂ ನೀನು ಬೇಗ ಬಾ.


ಯೆರೂಸಲೇಮಿನ ಪುತ್ರಿಯರೇ, ಮೆಚ್ಚುವ ಕಾಲಕ್ಕೆ ಮುಂಚೆ ನೀವು ಪ್ರೀತಿಯನ್ನು ಎಬ್ಬಿಸಬೇಡಿರಿ. ಎಚ್ಚರಿಸಲೂ ಬೇಡಿರಿ ಎಂದು ಅಡವಿಯ ಹುಲ್ಲೆ ಹರಿಣಿಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ನನ್ನ ಪ್ರಿಯನು ಜಿಂಕೆಯ ಹಾಗೆ ಇದ್ದಾನೆ. ದುಪ್ಪಿಯ ಮರಿಯ ಹಾಗೆಯೂ ಇದ್ದಾನೆ. ಇಗೋ! ಅವನು ನಮ್ಮ ಗೋಡೆಯ ಹಿಂದೆ ನಿಂತಿದ್ದಾನೆ. ಜಾಲಾಂತರಗಳಲ್ಲಿ ತನ್ನನ್ನು ತೋರಿಸಿ, ಕಿಟಿಕಿಗಳಿಂದ ನೋಡುತ್ತಿದ್ದಾನೆ.


ಲುದ್ದ ಊರು ಯೊಪ್ಪ ಊರಿಗೆ ಸಮೀಪದಲ್ಲಿತ್ತು. ಪೇತ್ರನು ಲುದ್ದದಲ್ಲಿರುವುದು ದೇವ ಭಕ್ತರಿಗೆ ತಿಳಿಯಲು ಅವರು, “ಕೂಡಲೇ ಬರಬೇಕು,” ಎಂದು ಹೇಳಿ ಅವನನ್ನು ಕರೆದುಕೊಂಡು ಬರಲು ಇಬ್ಬರನ್ನು ಕಳುಹಿಸಿದರು.


ಈ ವಿಷಯ ಯೊಪ್ಪದಲ್ಲಿದ್ದವರೆಲ್ಲರಿಗೂ ತಿಳಿಯಿತು. ಕರ್ತ ಯೇಸುವಿನಲ್ಲಿ ಅನೇಕರು ವಿಶ್ವಾಸವನ್ನಿಟ್ಟರು.


ಸಂಭವಿಸಿದ್ದೆಲ್ಲವನ್ನು ಅವರಿಗೆ ವಿವರಿಸಿ, ಅವರನ್ನು ಯೊಪ್ಪಕ್ಕೆ ಕಳುಹಿಸಿದನು.


ಪೇತ್ರನು ಅವರನ್ನು ತನ್ನ ಅತಿಥಿಗಳಾಗಿರಲು ಮನೆಯೊಳಗೆ ಕರೆದನು. ಮರುದಿನ ಪೇತ್ರನು ಅವರೊಂದಿಗೆ ಪ್ರಯಾಣ ಬೆಳೆಸಿದನು. ಯೊಪ್ಪದಲ್ಲಿಯ ಕೆಲವು ಸಹೋದರರು ಅವನೊಂದಿಗೆ ಹೊರಟರು.


“ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿದ್ದೆನು. ಆಗ ನಾನು ಧ್ಯಾನಪರವಶನಾಗಿ ಒಂದು ದರ್ಶನವನ್ನು ಕಂಡೆನು. ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಪರಲೋಕದಿಂದ ಕೆಳಗೆ ಇಳಿದು ನಾನಿದ್ದಲ್ಲಿಗೆ ಬರುವುದನ್ನು ಕಂಡೆನು.


ತನ್ನ ಮನೆಯಲ್ಲಿ ಒಬ್ಬ ದೇವದೂತನು ಪ್ರತ್ಯಕ್ಷನಾಗಿ, ‘ಪೇತ್ರ ಎಂದು ಕರೆಯಲಾಗುವ ಸೀಮೋನನನ್ನು ಯೊಪ್ಪದಿಂದ ಕರೆಕಳುಹಿಸು.


ಅದೇ ಪ್ರಕಾರ, ಎರಡು ಚಿನ್ನದ ನಾಣ್ಯಗಳನ್ನು ಹೊಂದಿದವನು ಸಹ ಇನ್ನು ಬೇರೆ ಎರಡು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು