Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:39 - ಕನ್ನಡ ಸಮಕಾಲಿಕ ಅನುವಾದ

39 ಅವರೊಂದಿಗೆ ಪೇತ್ರನು ಹೊರಟನು. ಅವನು ಬಂದಾಗ ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರು ಅವನ ಸುತ್ತಲೂ ನಿಂತುಕೊಂಡು ದೊರ್ಕಳು ಜೀವದಿಂದ ಇದ್ದಾಗ ಆಕೆ ಸಿದ್ಧಪಡಿಸಿದ ನಿಲುವಂಗಿಗಳನ್ನು ಇತರ ಬಟ್ಟೆಗಳನ್ನು ಅವನಿಗೆ ತೋರಿಸುತ್ತಾ ಕಣ್ಣೀರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲರು ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ ಮೇಲಂಗಿಗಳನ್ನೂ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಪೇತ್ರನು ಸಿದ್ಧನಾಗಿ ಅವರೊಂದಿಗೆ ಹೋದನು. ಅವನು ಅಲ್ಲಿಗೆ ತಲುಪಿದಾಗ, ಅವರು ಅವನನ್ನು ಮೇಲ್ಮಾಳಿಗೆಯ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರೆಲ್ಲ ಅಳುತ್ತಾ ಪೇತ್ರನನ್ನು ಸುತ್ತುವರಿದರು. ದೊರ್ಕಳು ಜೀವಂತವಾಗಿದ್ದಾಗ ತಮಗಾಗಿ ತಯಾರಿಸಿ ಕೊಟ್ಟ ಮೇಲಂಗಿಗಳನ್ನು ಮತ್ತು ಬಟ್ಟೆಗಳನ್ನು ಅವರು ಪೇತ್ರನಿಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಪೆದ್ರು ತಯಾರ್ ಹೊವ್ನ್ ತೆಂಚ್ಯಾ ವಾಂಗ್ಡಾ ಗೆಲೊ ತೊ ಥೈ ಪಾವಲ್ಯಾ ತನ್ನಾ ತೆನಿ ಪೆದ್ರುಕ್ ಮ್ಹಾಳ್ಳ್ಯಾ ವೈಲ್ಯಾ ಖೊಲಿಕ್ ಬಲ್ವುನ್ ನ್ಹೆಲ್ಯಾನಿ, ಘವ್ಮರಲ್ಲಿ ಬಾಯ್ಕಾಮಾನ್ಸಾ ಸಗ್ಳ್ಯಿ ರಡಿಂಗೆತ್ ಪೆದ್ರುಕ್ಡೆ ಯೆಲಿ, ಅನಿ ದೊರ್ಕಾಸ್ ಜಿವಾನಿ ರಾತಾನಾ ಅಪ್ನಾಕ್ನಿ ತಯಾರ್ ಕರುನ್ ದಿಲ್ಲೆ ಝಗೆ ಅನಿ ಕಪ್ಡೆ ಸಗ್ಳ್ಯೆ ಪೆದ್ರುಕ್ ದಾಕ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:39
26 ತಿಳಿವುಗಳ ಹೋಲಿಕೆ  

ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.


ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.


ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.


ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.


ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.


ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.


ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.


ಪೇತ್ರನು ಆಕೆಯ ಕೈಯನ್ನು ಹಿಡಿದು ಆಕೆ ಎದ್ದು ನಿಂತುಕೊಳ್ಳುವಂತೆ ಮಾಡಿದನು. ಅನಂತರ ದೇವಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ಆಕೆಯನ್ನು ಅವರಿಗೆ ಒಪ್ಪಿಸಿಕೊಟ್ಟನು.


ದೇವಭಕ್ತರು ಸ್ತೆಫನನ ಶವಸಂಸ್ಕಾರ ಮಾಡಿ, ಅವನಿಗಾಗಿ ಬಹಳ ಗೋಳಾಡಿದರು.


ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.


ನಾನು ಇವರೊಡನೆ ಇದ್ದಾಗ ನೀವು ನನಗೆ ಕೊಟ್ಟ ನಿಮ್ಮ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಪವಿತ್ರ ವಾಕ್ಯವು ನೆರವೇರುವಂತೆ ಆ ನಾಶದ ಮಗನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ಏಕೆಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ,” ಎಂದರು.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹವನ್ನು ಅಭಿಷೇಕಿಸಿದ್ದಾಳೆ.


ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವುದಿಲ್ಲ.


ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


“ಇಸ್ರಾಯೇಲಿನ ಪುತ್ರಿಯರೇ, ಸೌಲನಿಗೋಸ್ಕರ ಅಳಿರಿ. ನಿಮಗೆ ರಕ್ತಾಂಬರವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ. ನಿಮ್ಮ ಉಡುಗೆಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ.


ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ; ಫಿಲಿಪ್ಪ, ತೋಮ; ಬಾರ್ತೊಲೊಮಾಯ ಮತ್ತಾಯ; ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಸೀಮೋನ ಮತ್ತು ಯಾಕೋಬನ ಮಗ ಯೂದ.


ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯರನ್ನು ಗುರುತಿಸಿ ಅವರಿಗೆ ಸಹಾಯಮಾಡು.


ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲು ಇರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು