Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:41 - ಕನ್ನಡ ಸಮಕಾಲಿಕ ಅನುವಾದ

41 ಪೇತ್ರನು ಆಕೆಯ ಕೈಯನ್ನು ಹಿಡಿದು ಆಕೆ ಎದ್ದು ನಿಂತುಕೊಳ್ಳುವಂತೆ ಮಾಡಿದನು. ಅನಂತರ ದೇವಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ಆಕೆಯನ್ನು ಅವರಿಗೆ ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ದೇವಜನರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಅವನು ಕೈನೀಡಿ, ಎದ್ದುನಿಲ್ಲಲು ಆಕೆಗೆ ಸಹಾಯ ಮಾಡಿದನು. ಬಳಿಕ ಅವನು ವಿಶ್ವಾಸಿಗಳನ್ನು ಮತ್ತು ವಿಧವೆಯರನ್ನು ಕೋಣೆಯೊಳಗೆ ಕರೆದು ಅವರಿಗೆ ತಬಿಥಳನ್ನು ತೋರಿಸಿದನು. ಆಕೆ ಜೀವಂತವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಪೆದ್ರುನ್ ಹಾತ್ ಧರುನ್ ತಿಕಾ ಉಟುನ್ ಇಬೆ ರಾವ್ಕ್ ಮಜ್ಜತ್ ಕರ್‍ಲ್ಯಾನ್, ಮಾನಾ ತೆನಿ ಘವ್ಮರಲ್ಯಾ ಬಾಯ್ಕಾಮಾನ್ಸಾಕ್ನಿ, ಅನಿ ದೆವಾಚ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಖೊಲಿತ್ ಬಲ್ವುನ್ ತಬಿಥಾ ಝಿತ್ತಿ ಹೊಲ್ಲಿ ತೆಂಕಾ ದಾಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:41
15 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.


ಯೇಸು ಆಕೆಯ ಬಳಿಗೆ ಬಂದು, ಕೈಹಿಡಿದು ಎಬ್ಬಿಸಿದರು. ಜ್ವರವು ಆಕೆಯನ್ನು ಬಿಟ್ಟುಹೋಯಿತು ಮತ್ತು ಆಕೆಯು ಅವರಿಗೆ ಉಪಚರಿಸಿದಳು.


ಜೀವ ಹೊಂದಿದ ಆ ಯುವಕನನ್ನು ಜನರು ಮನೆಗೆ ಕರೆದುಕೊಂಡು ಹೋದರು. ಅವರಿಗೆ ಅಪಾರ ಸಾಂತ್ವನ ದೊರೆಯಿತು.


ಬಲಗೈ ಹಿಡಿದೆಬ್ಬಿಸಿದಾಗ ಕೂಡಲೇ ಆ ಮನುಷ್ಯನ ಪಾದ ಮತ್ತು ಹರಡುಗಳು ಬಲಗೊಂಡವು.


ಆಗ ಸತ್ತವನು ಎದ್ದು ಕುಳಿತುಕೊಂಡು ಮಾತನಾಡಲಾರಂಭಿಸಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದರು.


ಯೇಸು ಪಟ್ಟಣ ದ್ವಾರದ ಸಮೀಪಕ್ಕೆ ಬಂದಾಗ, ಸತ್ತು ಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೋಗುತ್ತಿದ್ದರು, ಅವನು ತನ್ನ ತಾಯಿಗೆ ಒಬ್ಬನೇ ಮಗನು, ಆಕೆಯು ವಿಧವೆಯಾಗಿದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.


ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ. ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ. ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ.


ಸಾಯುತ್ತಿದ್ದವರ ಆಶೀರ್ವಾದವು ನನ್ನ ಮೇಲೆ ಬರುತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ಮಾಡುತ್ತಿದ್ದೆನು.


ಆಗ ಎಲೀಯನು ಬಾಲಕನನ್ನು ಎತ್ತಿಕೊಂಡು ಉಪ್ಪರಿಗೆಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು, ಅವನನ್ನು ಅವನ ತಾಯಿಗೆ ಕೊಟ್ಟು, “ನೋಡು, ನಿನ್ನ ಮಗನು ಜೀವದಿಂದಿದ್ದಾನೆ,” ಎಂದು ಹೇಳಿದನು.


“ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ.


ಆಗ ಅನನೀಯನು, “ಸ್ವಾಮಿ, ಈ ಮನುಷ್ಯನ ಬಗ್ಗೆ ಬಹಳ ಕೇಳಿದ್ದೇನೆ. ಯೆರೂಸಲೇಮಿನಲ್ಲಿ ನಿಮ್ಮ ಭಕ್ತರಿಗೆ ಬಹಳ ಕೇಡು ಮಾಡಿದ್ದಾನೆ.


ಪೇತ್ರನು ಬೇರೆ ಬೇರೆ ಕಡೆಗಳಲ್ಲಿ ಪ್ರಯಾಣಮಾಡಿದ ತರುವಾಯ ಲುದ್ದದಲ್ಲಿಯ ದೇವಭಕ್ತರನ್ನು ಸಂದರ್ಶಿಸಲು ಹೋದನು.


ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯರನ್ನು ಗುರುತಿಸಿ ಅವರಿಗೆ ಸಹಾಯಮಾಡು.


ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲು ಇರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.


ಪ್ರವಾದಿಯು, “ನೀನು ತೆಗೆದುಕೋ,” ಎಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು