Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:42 - ಕನ್ನಡ ಸಮಕಾಲಿಕ ಅನುವಾದ

42 ಈ ವಿಷಯ ಯೊಪ್ಪದಲ್ಲಿದ್ದವರೆಲ್ಲರಿಗೂ ತಿಳಿಯಿತು. ಕರ್ತ ಯೇಸುವಿನಲ್ಲಿ ಅನೇಕರು ವಿಶ್ವಾಸವನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಈ ಸಂಗತಿಯು ಯೊಪ್ಪದಲ್ಲೆಲ್ಲಾ ಹರಡಿ ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಈ ಸಮಾಚಾರ ಜೊಪ್ಪದಲ್ಲೆಲ್ಲಾ ಹರಡಿತು. ಅನೇಕರು ಪ್ರಭುವನ್ನು ವಿಶ್ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಈ ಸಂಗತಿಯು ಯೊಪ್ಪದಲ್ಲೆಲ್ಲಾ ತಿಳಿಯಬಂದು ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಜೊಪ್ಪದ ಎಲ್ಲಾ ಕಡೆಗಳಲ್ಲಿಯೂ ಇದ್ದ ಜನರಿಗೆ ಈ ವಿಷಯ ತಿಳಿಯಿತು. ಈ ಜನರಲ್ಲಿ ಅನೇಕರು ಪ್ರಭುವನ್ನು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಜೊಪ್ಪಾತ್ಲ್ಯಾ ಸಗ್ಳ್ಯಾಕ್ಡೆ ಹೊತ್ತ್ಯಾ ಲೊಕಾಕ್ನಿಬಿ ಹಿ ಖಬರ್ ಕಳ್ಲಿ ಹ್ಯಾ ಲೊಕಾತ್ನಿ ಲೈ ಲೊಕಾನಿ ಧನಿಯಾಚೆರ್ ವಿಶ್ವಾಸ್ ಥವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:42
17 ತಿಳಿವುಗಳ ಹೋಲಿಕೆ  

ಲುದ್ದ ಹಾಗೂ ಸಾರೋನಿನ ನಿವಾಸಿಗಳೆಲ್ಲರೂ ಅವನನ್ನು ಕಂಡು ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.


ಏಕೆಂದರೆ ಅವನ ದೆಸೆಯಿಂದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಡೆಗೆ ಹೋಗಿ ನಂಬಿಕೆ ಇಟ್ಟಿದ್ದರು.


ಆದ್ದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯಗಳನ್ನು ಕಂಡು ಅವರಲ್ಲಿ ನಂಬಿಕೆಯಿಟ್ಟರು.


ಕರ್ತ ಯೇಸುವಿನ ಹಸ್ತವು ಅವರೊಂದಿಗಿತ್ತು ಬಹಳಷ್ಟು ಜನರು ನಂಬಿ ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.


ಯೇಸು, ಕೂಗಿ ಹೇಳಿದ್ದೇನೆಂದರೆ, “ನನ್ನನ್ನು ನಂಬುವವರು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿಕೊಟ್ಟ ತಂದೆಯಲ್ಲಿಯೇ ವಿಶ್ವಾಸವಿಡುತ್ತಾರೆ.


ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು.


ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪ ಊರಿಗೆ ಎದುರಾದ ಮೇರೆಯು ಸಹ ದೊರಕಿತು.


ಇದಲ್ಲದೆ ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ನೀನು ಅವುಗಳನ್ನು ಯೆರೂಸಲೇಮಿಗೆ ಒಯ್ಯಬಹುದು.”


ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.


ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು.


ಲುದ್ದ ಊರು ಯೊಪ್ಪ ಊರಿಗೆ ಸಮೀಪದಲ್ಲಿತ್ತು. ಪೇತ್ರನು ಲುದ್ದದಲ್ಲಿರುವುದು ದೇವ ಭಕ್ತರಿಗೆ ತಿಳಿಯಲು ಅವರು, “ಕೂಡಲೇ ಬರಬೇಕು,” ಎಂದು ಹೇಳಿ ಅವನನ್ನು ಕರೆದುಕೊಂಡು ಬರಲು ಇಬ್ಬರನ್ನು ಕಳುಹಿಸಿದರು.


ಪೇತ್ರನು ಯೊಪ್ಪದಲ್ಲಿ ಸೀಮೋನ ಎಂಬ ಹೆಸರಿನ ಚರ್ಮಕಾರನೊಂದಿಗೆ ಕೆಲವು ದಿನ ಇದ್ದನು.


ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರ ಎಂದು ಕರೆಯಲಾಗುವ ಸೀಮೋನನನ್ನು ಇಲ್ಲಿಗೆ ಕರೆದುಕೊಂಡು ಬರಲು ಹೇಳು.


ಸಂಭವಿಸಿದ್ದೆಲ್ಲವನ್ನು ಅವರಿಗೆ ವಿವರಿಸಿ, ಅವರನ್ನು ಯೊಪ್ಪಕ್ಕೆ ಕಳುಹಿಸಿದನು.


“ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿದ್ದೆನು. ಆಗ ನಾನು ಧ್ಯಾನಪರವಶನಾಗಿ ಒಂದು ದರ್ಶನವನ್ನು ಕಂಡೆನು. ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಪರಲೋಕದಿಂದ ಕೆಳಗೆ ಇಳಿದು ನಾನಿದ್ದಲ್ಲಿಗೆ ಬರುವುದನ್ನು ಕಂಡೆನು.


ತನ್ನ ಮನೆಯಲ್ಲಿ ಒಬ್ಬ ದೇವದೂತನು ಪ್ರತ್ಯಕ್ಷನಾಗಿ, ‘ಪೇತ್ರ ಎಂದು ಕರೆಯಲಾಗುವ ಸೀಮೋನನನ್ನು ಯೊಪ್ಪದಿಂದ ಕರೆಕಳುಹಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು