Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:16 - ಕನ್ನಡ ಸಮಕಾಲಿಕ ಅನುವಾದ

16 ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಪುರಾತನ ಗೋತ್ರಗಳ ನಾಯಕರು. ಇವರು ಇಸ್ರಾಯೇಲಿನ ಗೋತ್ರಗಳ ಪ್ರಮುಖರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವರು ಸಮಾಜದಲ್ಲಿ ಹೆಸರು ಪಡೆದವರು. ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನ ಪುರುಷರು, ಇಸ್ರಯೇಲರಲ್ಲಿ ಸಹಸ್ರಾಧಿಪತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವರು ಸರ್ವಸಮೂಹದವರೊಳಗಿಂದ ಕರಸಿಕೊಂಡವರು, ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನಪುರುಷರು, ಇಸ್ರಾಯೇಲ್ಯರಲ್ಲಿ ಸಹಸ್ರಾಧಿಪತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸರ್ವಸಮೂಹದವರೊಳಗಿಂದ ಆರಿಸಲ್ಪಟ್ಟಿದ್ದ ಇವರು ತಮ್ಮ ಪೂರ್ವಿಕರ ಕುಲಗಳಿಗೆ ನಾಯಕರು ಮತ್ತು ಇಸ್ರೇಲರಿಗೆ ಸಹಸ್ರಾಧಿಪತಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:16
20 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಪ್ರಧಾನರು ಎಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.


ಮೋಶೆಯು ಇಸ್ರಾಯೇಲರಲ್ಲಿ ಇರುವ ಸಮರ್ಥರನ್ನು ಆರಿಸಿಕೊಂಡು, ಅವರನ್ನು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ, ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದನು.


ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.


ಎಲೀಯಾಬನ ಪುತ್ರರು ನೆಮೂಯೇಲ್, ದಾತಾನ್, ಅಬೀರಾಮ್. ಈ ದಾತಾನನೂ, ಅಬೀರಾಮನೂ ಜನರಲ್ಲಿ ಪ್ರಸಿದ್ಧರಾಗಿದ್ದು; ಕೋರಹನ ಗುಂಪಿನಲ್ಲಿದ್ದು; ಯೆಹೋವ ದೇವರಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.


ಇಸ್ರಾಯೇಲರೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯ ಪ್ರಸಿದ್ಧರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಗೆ ಎದುರಾಗಿ ತಿರುಗಿಬಿದ್ದರು.


ಪ್ರತಿಯೊಂದು ಗೋತ್ರದ ಒಬ್ಬೊಬ್ಬ ಮುಖ್ಯಸ್ಥನು ನಿಮಗೆ ಸಹಾಯಕನಾಗಿರಲಿ.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಅವನು ಅಡಗಿಕೊಂಡಿರುವ ಸಮಸ್ತ ರಹಸ್ಯ ಸ್ಥಳಗಳನ್ನೂ ನೋಡಿ ತಿಳಿದುಕೊಂಡು, ನಿಶ್ಚಯವಾದ ವರ್ತಮಾನವನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ, ಯೆಹೂದದ ಸಹಸ್ರ ಕುಲದಲ್ಲಿಯೂ ಅವನನ್ನು ಹುಡುಕಿ ಅವನನ್ನು ಹಿಡಿಯುವೆನು,” ಎಂದನು.


ಆಗ ಸೌಲನು ಸುತ್ತಲು ನಿಂತಿದ್ದ ಸೇವಕರಿಗೆ, “ಬೆನ್ಯಾಮೀನನ ಮಕ್ಕಳೇ, ಕೇಳಿರಿ. ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡೆಸುವಂತೆ ಇಷಯನ ಮಗನು ನಿಮ್ಮೆಲ್ಲರಿಗೆ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನು ಸಾವಿರಕ್ಕೆ ನಾಯಕರಾಗಿಯೂ, ನೂರಕ್ಕೆ ನಾಯಕರಾಗಿಯೂ ಮಾಡುವನೋ?


ಅದಕ್ಕವನು ಅವರಿಗೆ, “ನನ್ನ ಒಡೆಯನೇ, ಕ್ಷಮಿಸಿರಿ ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು. ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು,” ಎಂದನು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಜ್ಞಾನಿಗಳನ್ನು ಕರೆಯಿಸಿ, ಒಂದೊಂದು ಗೋತ್ರದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದೆನು.


ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.


ನಫ್ತಾಲಿ ಗೋತ್ರದಿಂದ ಏನಾನನ ಮಗ ಅಹೀರನು.”


ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆ ಮತ್ತು ಆರೋನನು ತಮ್ಮ ಜೊತೆ ತೆಗೆದುಕೊಂಡರು.


ಒಂದನ್ನು ಮಾತ್ರ ಊದುವಾಗ, ಇಸ್ರಾಯೇಲರಲ್ಲಿ ಮುಖ್ಯಸ್ಥರಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.


ಮೋಶೆಯು ಇಸ್ರಾಯೇಲರ ಗೋತ್ರಗಳ ನಾಯಕರ ಸಂಗಡ ಮಾತನಾಡಿ, “ಯೆಹೋವ ದೇವರು ಆಜ್ಞಾಪಿಸಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು