Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:53 - ಕನ್ನಡ ಸಮಕಾಲಿಕ ಅನುವಾದ

53 ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ [ಯೆಹೋವನ] ಕೋಪವು ಇಸ್ರಾಯೇಲ್ಯರ ಮೇಲೆ ಉಂಟಾಗುವದಕ್ಕೆ ಆಸ್ಪದವಿರುವದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:53
26 ತಿಳಿವುಗಳ ಹೋಲಿಕೆ  

ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು.


ಯೆಹೋವ ದೇವರ ಮನೆಯ ಸೇವೆಯಲ್ಲಿ ದೇವದರ್ಶನ ಗುಡಾರದ ಕಾವಲನ್ನೂ, ಪರಿಶುದ್ಧ ಸ್ಥಾನದ ಕಾವಲನ್ನೂ, ತಮ್ಮ ಸಹೋದರರಾದ ಆರೋನನ ಪುತ್ರರ ಆಜ್ಞೆಯನ್ನೂ ಕೈಗೊಳ್ಳುವುದು ಅವರಿಗೆ ನೇಮಕವಾಗಿತ್ತು.


ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.


ಮೋಶೆಯು ಇಸ್ರಾಯೇಲರ ಅರ್ಧದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋವ ದೇವರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.


ಇಸ್ರಾಯೇಲರ ಅರ್ಧ ಪಾಲಿನಿಂದ ಜನರಿಂದಲೂ, ಕತ್ತೆಗಳಿಂದಲೂ, ಮಂದೆಗಳಿಂದಲೂ, ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತೆಗೆದುಕೊಂಡು, ಅವುಗಳನ್ನು ಯೆಹೋವ ದೇವರ ಗುಡಾರವನ್ನು ನಿರ್ವಹಿಸುವ ಲೇವಿಯರಿಗೆ ಕೊಡಬೇಕು,” ಎಂದರು.


ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.”


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


“ನಮಗಾದರೋ ಯೆಹೋವ ದೇವರು ದೇವರಾಗಿದ್ದಾರೆ. ನಾವು ಅವರನ್ನು ಬಿಡಲಿಲ್ಲ. ಇದಲ್ಲದೆ ಯೆಹೋವ ದೇವರಿಗೆ ಸೇವೆ ಮಾಡುವ ಯಾಜಕರು ಆರೋನನ ಮಕ್ಕಳು. ಲೇವಿಯರು ಅವರಿಗೆ ಕೆಲಸದಲ್ಲಿ ಸಹಾಯ ಮಾಡುತ್ತಿದ್ದರು.


ಬೇತ್ ಷೆಮೆಷ್ ಊರಿನ ಜನರು ಯೆಹೋವ ದೇವರ ಮಂಜೂಷದೊಳಗೆ ಇಣಿಕಿ ನೋಡಿದ್ದರಿಂದ, ಯೆಹೋವ ದೇವರು ಅವರೊಳಗೆ ಎಪ್ಪತ್ತು ಮಂದಿಯನ್ನು ಕಠಿಣವಾಗಿ ದಂಡಿಸಿದರು.


ದೇವದರ್ಶನ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ದೇವದರ್ಶನದ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳಿದುಕೊಳ್ಳುವವರು ಮೋಶೆ, ಆರೋನ್ ಮತ್ತು ಅವನ ಪುತ್ರರು. ಇವರು ಇಸ್ರಾಯೇಲರಿಗಾಗಿ ಪರಿಶುದ್ಧಸ್ಥಳದ ಮೇಲ್ವಿಚಾರಣೆ ಮಾಡುವವರು. ಬೇರೆ ಯಾರಾದರೂ ಸಮೀಪಿಸಿದರೆ, ಅವರಿಗೆ ಮರಣಶಿಕ್ಷೆ ಆಗಬೇಕು.


ಆದರೆ ನೀನು ಸಾಕ್ಷಿಯ ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಅದಕ್ಕೆ ಬೇಕಾದ ಎಲ್ಲವನ್ನೂ ನೋಡಿಕೊಳ್ಳಲು ಲೇವಿಯರನ್ನು ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳುವರು. ಅದರ ಸೇವೆಮಾಡಿ, ಗುಡಾರದ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.


ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.


ತರುವಾಯ ದೇವದರ್ಶನ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ, ತಮ್ಮ ತಮ್ಮ ಕಡೆಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.


ಗೇರ್ಷೋನ್ಯರ ಕುಟುಂಬಗಳು ದೇವದರ್ಶನದ ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳಿದುಕೊಳ್ಳಬೇಕು.


ಕೊಹಾತ್ಯರ ಗೋತ್ರಗಳವರು ಪರಿಶುದ್ಧ ಸ್ಥಳವನ್ನು ಕಾಯುವ ಜವಾಬ್ದಾರಿಕೆ ಹೊಂದಿದ್ದರು. ಅವರು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳಿದುಕೊಳ್ಳಬೇಕು.


ಅಬೀಹೈಲನ ಮಗ ಜುರೀಯೇಲನು ಮೆರಾರೀ ಗೋತ್ರದ ಮುಖ್ಯಸ್ಥನು. ಅವರು ದೇವದರ್ಶನ ಗುಡಾರದ ಬಳಿಯಲ್ಲಿ ಉತ್ತರ ದಿಕ್ಕಿನ ಕಡೆಗೆ ಇಳಿದುಕೊಳ್ಳಬೇಕು.


ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರದ ಒಳಗೆ ಯೆಹೋವ ದೇವರ ಸಮ್ಮುಖದಲ್ಲಿ ಇಟ್ಟನು.


ಯೆಹೋವ ದೇವರ ಗುಡಾರದ ಸೇವೆಯನ್ನು ಮಾಡುವುದಕ್ಕೂ, ಸಮೂಹದ ಮುಂದೆ ಇರುವ ಅವರ ಸೇವೆಯಲ್ಲಿ ನಿಲ್ಲುವುದಕ್ಕೂ ಇಸ್ರಾಯೇಲರ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲರೊಳಗಿಂದಲೇ ನಿಮ್ಮನ್ನು ಪ್ರತ್ಯೇಕಿಸಿದ್ದು, ನಿಮಗೆ ಅಲ್ಪವಾಗಿ ತೋರಿತೋ?


ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು