Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:10 - ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಸಂತೋಷದ ದಿವಸದಲ್ಲಿಯೂ, ನಿಮ್ಮ ಹಬ್ಬಗಳಲ್ಲಿಯೂ ನಿಮ್ಮ ತಿಂಗಳಿನ ಆರಂಭದಲ್ಲಿಯೂ ತುತೂರಿಗಳನ್ನು ಊದಬೇಕು. ನಿಮ್ಮ ದಹನಬಲಿಗಳನ್ನೂ ಸಮಾಧಾನದ ಬಲಿಯನ್ನೂ ಅರ್ಪಿಸುವಾಗ ಅವುಗಳನ್ನು ಊದಬೇಕು. ಅವುಗಳ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ, ಉತ್ಸವ ದಿನಗಳಲ್ಲೂ ಹಬ್ಬ ದಿನಗಳಲ್ಲೂ ಅಮಾವಾಸ್ಯೆಯಲ್ಲೂ ಮತ್ತು ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಅರ್ಪಿಸುವಾಗಲೂ ಆ ಕಹಳೆಗಳನ್ನು ಮೊಳಗಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ನೆನಪಿಗೆ ತರಲು ನೆರವಾಗುವುದು. ನಾನೇ ನಿಮ್ಮ ದೇವರಾದ ಸರ್ವೇಶ್ವರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸುವಾಗ ಆ ತುತೂರಿಗಳನ್ನು ಊದಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವದು; ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದಲ್ಲದೆ, ನೀವು ಉತ್ಸವಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ನಿಮ್ಮನ್ನು ಗಮನಿಸಬೇಕೆಂದು ಆ ತುತ್ತೂರಿ ಧ್ವನಿಗಳು ನಿಮ್ಮ ದೇವರಿಗೆ ನೆನಪನ್ನುಂಟುಮಾಡುತ್ತವೆ. ನೀವು ಇದನ್ನು ಮಾಡಬೇಕೆಂದು ನಾನು ಆಜ್ಞಾಪಿಸುತ್ತೇನೆ. ನಿಮ್ಮ ದೇವರಾದ ಯೆಹೋವನು ನಾನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:10
34 ತಿಳಿವುಗಳ ಹೋಲಿಕೆ  

ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು.


ತುತೂರಿಗಳನ್ನು ಹಿಡಿಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗ ಜಕ್ಕೂರನ ಮಗ, ಮೀಕಾಯನ ಮಗ, ಮತ್ತನ್ಯನ ಮಗ, ಶೆಮಾಯನ ಮಗ, ಯೋನಾತಾನನ ಮಗ ಜೆಕರ್ಯನೂ,


ಕಟ್ಟುವವರು ಯೆಹೋವ ದೇವರ ಮಂದಿರಕ್ಕೆ ಅಸ್ತಿವಾರ ಹಾಕಿದಾಗ ಇಸ್ರಾಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಯೆಹೋವ ದೇವರನ್ನು ಸ್ತುತಿಸುವುದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವರಾಗಿ ತುತೂರಿಗಳನ್ನೂದುವ ಯಾಜಕರನ್ನೂ, ತಾಳಗಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಸಿದ್ಧಪಡಿಸಿದರು.


ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ತನಕ ಹಾಡುಗಾರರು ಹಾಡಿದರು. ತುತೂರಿ ಊದುವವರು ಊದಿದರು.


ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿದ್ದರು.


ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರವಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ಜನರನ್ನು ಎಚ್ಚರಿಸುವಂತೆ ತುತೂರಿಗಳನ್ನು ಆರ್ಭಟವಾಗಿ ಊದಬೇಕು. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನೆನಪು ಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ಬಿಡಿಸುವನು.


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.


ನಿಮ್ಮ ಉತ್ಸಾಹ ಧ್ವನಿಯನ್ನು ಕೇಳಿದ ಜನರು ಧನ್ಯರು. ಯೆಹೋವ ದೇವರೇ, ನಿಮ್ಮ ಸನ್ನಿಧಿಯ ಬೆಳಕಿನಲ್ಲಿ ನಡೆಯುವವರು ಧನ್ಯರು.


ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.


ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು.


ಹೀಗೆ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಆರ್ಭಟದಿಂದಲೂ, ಕೊಂಬಿನ ಶಬ್ದದಿಂದಲೂ, ತುತೂರಿಗಳಿಂದಲೂ, ತಾಳಗಳಿಂದಲೂ ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಾ ತೆಗೆದುಕೊಂಡು ಬಂದರು.


ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೆಯೇಲ್, ಅಮಾಸೈಯೂ, ಜೆಕರ್ಯನೂ, ಬೆನಾಯನೂ, ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು. ಓಬೇದ್ ಏದೋಮನೂ, ಯೆಹೀಯನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.


ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.


“ ‘ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ನೀವು ಮಾಡಬಾರದು. ಅದು ನಿಮಗೆ ತುತೂರಿಗಳನ್ನು ಊದುವ ದಿವಸವಾಗಿರುವುದು.


“ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು.


“ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲರ ಹೆಸರುಗಳನ್ನು ಯಾವಾಗಲೂ ಯೆಹೋವ ದೇವರ ಮುಂದೆ ಜ್ಞಾಪಕ ಮಾಡುವುದಕ್ಕಾಗಿ ನ್ಯಾಯದ ಎದೆಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ, ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ.


ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಕೆಲಸಕ್ಕಾಗಿ ಪ್ರತ್ಯೇಕಿಸಬೇಕು. ಇದೇ ಯೆಹೋವ ದೇವರ ಮುಂದೆ ಇಸ್ರಾಯೇಲರಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಯಶ್ಚಿತ್ತಕ್ಕಾಗಿಯೂ ಇರುವುದು,” ಎಂದರು.


“ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,


ದಾವೀದನು ಯೋನಾತಾನನಿಗೆ, “ನಾಳೆ ಅಮಾವಾಸ್ಯೆ, ಆದ್ದರಿಂದ ನಾನು ಅರಸನ ಸಂಗಡ ಪಂಕ್ತಿಯಲ್ಲಿ ಊಟ ಮಾಡಲೇ ಬೇಕಾಗಿರುವುದು. ನಾನು ಮೂರನೆಯ ದಿವಸದ ಸಾಯಂಕಾಲದವರೆಗೆ ಹೊಲದಲ್ಲಿ ಬಚ್ಚಿಟ್ಟುಕೊಂಡಿರಲು, ನನ್ನನ್ನು ಹೋಗಗೊಡಿಸು.


ಅದಕ್ಕೆ ಅವನು, “ಇದು ಅಮಾವಾಸ್ಯೆ ಅಲ್ಲ, ಸಬ್ಬತ್ ದಿನವೂ ಅಲ್ಲ. ನೀನು ಏಕೆ ಈ ಹೊತ್ತು ಅವನ ಬಳಿಗೆ ಹೋಗುತ್ತೀ?” ಎಂದನು. ಅದಕ್ಕವಳು, “ಅಡ್ಡಿಯೇನಿಲ್ಲ,” ಎಂದಳು.


ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು.


ಏಕೆಂದರೆ ಇದು ಇಸ್ರಾಯೇಲಿಗೆ ಕಟ್ಟಳೆ. ಯಾಕೋಬನ ದೇವರ ನ್ಯಾಯ ಪ್ರಮಾಣವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು