Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:29 - ಕನ್ನಡ ಸಮಕಾಲಿಕ ಅನುವಾದ

29 ಮೋಶೆ ತನ್ನ ಮಾವನಾಗಿದ್ದ ಮಿದ್ಯಾನನಾದ ರೆಯೂವೇಲನ ಮಗ ಹೊಬಾಬನಿಗೆ, “ಯೆಹೋವ ದೇವರು ನಮಗೆ ಕೊಡುತ್ತೇನೆಂದು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ. ನಮ್ಮ ಸಂಗಡ ನೀನೂ ಬಾ, ನಾವು ನಿನಗೆ ಒಳ್ಳೆಯದನ್ನು ಮಾಡುವೆವು. ಏಕೆಂದರೆ ಯೆಹೋವ ದೇವರು ಇಸ್ರಾಯೇಲರನ್ನು ಕುರಿತು ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮೋಶೆ ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗ ಹೋಬಾಬನಿಗೆ, “ಸರ್ವೇಶ್ವರ ನಮಗೆ ಕೊಡುವುದಾಗಿ ವಾಗ್ದಾನ ಮಾಡಿದ ನಾಡಿಗೆ ನಾವು ಪ್ರಯಾಣ ಮಾಡುತ್ತಿದ್ದೇವೆ. ಇಸ್ರಯೇಲರಿಗೆ ಒಳಿತನ್ನೇ ಮಾಡುವುದಾಗಿ ಸರ್ವೇಶ್ವರ ಸ್ವಾಮಿಯೇ ಹೇಳಿದ್ದಾರೆ. ಆದ್ದರಿಂದ ನೀನೂ ನಮ್ಮ ಸಂಗಡ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೋಶೆ ತನ್ನ ಮಾವನಾಗಿದ್ದ ವಿುದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ - ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲ್ಯರಿಗೆ ಮೇಲನ್ನುಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದದರಿಂದ ನೀನು ನಮ್ಮ ಜೊತೆಯಲ್ಲಿ ಬಾ; ನವ್ಮಿುಂದ ನಿನಗೂ ಮೇಲುಂಟಾಗುವದೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕೆಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:29
31 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ಮೋಶೆಯ ಅಳಿಯನಾದ ಹೊಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರನು ಕೇನ್ಯರನ್ನು ಬಿಟ್ಟು, ತನ್ನನ್ನು ಪ್ರತ್ಯೇಕಿಸಿ, ಕೆದೆಷಿನ ಬಳಿಯಲ್ಲಿರುವ ಚಾನನ್ನೀಮ್ ಎಂಬ ಊರಲ್ಲಿ ಅಲ್ಲೋನ್ ಮರದ ಬಳಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.


ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಹುಡುಗಿಯರು ತಮ್ಮ ತಂದೆ ರೆಯೂವೇಲನ ಬಳಿಗೆ ಬಂದಾಗ, ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿರಿ?” ಎಂದನು.


‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡುವೆನು ಮತ್ತು ನಿನ್ನ ಸಂತತಿಯನ್ನು ಎಣಿಸುವುದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು,’ ಎಂದು ನನಗೆ ಹೇಳಿದ್ದೀರಲ್ಲಾ?” ಎಂದನು.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ.


ದೇವರು ಅವನಿಗೆ ಇಲ್ಲಿ ಕಾಲಿಡುವಷ್ಟು ಸ್ಥಳವನ್ನಾಗಲಿ, ಯಾವುದೇ ಬಾಧ್ಯಸ್ತಿಕೆಯನ್ನಾಗಲಿ ಕೊಡಲಿಲ್ಲ. ಆದರೆ ಅಬ್ರಹಾಮನಿಗೆ ಆ ಸಮಯದಲ್ಲಿ ಮಕ್ಕಳಿಲ್ಲದಿದ್ದರೂ ಅವನೂ ಅವನ ನಂತರ ಅವನ ಸಂತತಿಯವರೂ ದೇಶವನ್ನು ಹೊಂದುವರೆಂದು ದೇವರು ಅವನಿಗೆ ವಾಗ್ದಾನ ಮಾಡಿದರು.


ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.


ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.


ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ; ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.


ಕೇನ್ಯರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ, ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ, ನೀವು ಅವರ ಮಧ್ಯದಲ್ಲಿಂದ ಹೊರಟು ಹೋಗಿರಿ,” ಎಂದು ಹೇಳಿದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.


ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು, ಯೆಹೂದ ಗೋತ್ರದವರ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೆಹೂದದ ಗೋತ್ರದವರ ಮರುಭೂಮಿಗೆ ಬಂದು, ಅಲ್ಲಿನ ಜನರ ಸಂಗಡ ವಾಸವಾಗಿದ್ದರು.


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ತರುವಾಯ ಮೋಶೆಯು ತನ್ನ ಮಾವ ಇತ್ರೋವನಿಗೆ ಸಾಗಕಳುಹಿಸಿದಾಗ, ಅವನು ಸ್ವದೇಶಕ್ಕೆ ಹೊರಟುಹೋದನು.


ದೇವರು ಮೋಶೆಗೂ, ತಮ್ಮ ಜನರಾದ ಇಸ್ರಾಯೇಲರಿಗೂ ಮಾಡಿದವುಗಳೆಲ್ಲವನ್ನೂ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದದ್ದನ್ನೂ, ಮಿದ್ಯಾನಿನ ಯಾಜಕನೂ, ಮೋಶೆಯ ಮಾವನೂ ಆಗಿದ್ದ ಇತ್ರೋವನಿಗೆ ಮುಟ್ಟಿತು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.


ಮೋಶೆಯ ಮಾವ ಇತ್ರೋವನು ದಹನಬಲಿಯನ್ನೂ, ಯಜ್ಞಗಳನ್ನೂ ದೇವರಿಗಾಗಿ ತೆಗೆದುಕೊಂಡು ಬಂದನು. ಆರೋನನೂ, ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನವನ್ನು ಮಾಡುವುದಕ್ಕೆ ಬಂದರು.


ಈ ಪ್ರಕಾರ ಇಸ್ರಾಯೇಲರು ತಮ್ಮ ಗೋತ್ರಗಳ ಪ್ರಕಾರ ಪ್ರಯಾಣವಾಗಿ ಹೊರಟರು.


ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ.


ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳು ಸ್ವಾಧೀನ ಮಾಡಿಕೊಂಡ ದೇಶಕ್ಕೆ ನಿಮ್ಮನ್ನು ತರುವರು. ನೀವು ಅದನ್ನು ಸ್ವಾಧೀನಮಾಡಿಕೊಳ್ಳುವಿರಿ. ದೇವರು ನಿಮ್ಮ ಪಿತೃಗಳಿಗಿಂತಲೂ ನಿಮ್ಮನ್ನು ಸಮೃದ್ಧಿಗೊಳಿಸಿ ಹೆಚ್ಚಿಸುವರು.


ಬನ್ನಿರಿ, ಯೆಹೋವ ದೇವರಿಗೆ ಉತ್ಸಾಹ ಗೀತೆಯನ್ನು ಹಾಡೋಣ; ನಮ್ಮ ರಕ್ಷಣೆಯ ಬಂಡೆಯಾಗಿರುವ ದೇವರಿಗೆ ಜಯಧ್ವನಿ ಮಾಡೋಣ.


ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವುದಕ್ಕೆ ಸಮ್ಮತಿಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರಳನ್ನು ಮದುವೆ ಮಾಡಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು