Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:16 - ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಮೋಶೆಗೆ, “ಜನರ ನಾಯಕರೆಂದೂ, ಹಿರಿಯರೆಂದೂ, ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂತಹ ಇಸ್ರಾಯೇಲರ ಹಿರಿಯರೊಳಗಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ, ಅವರನ್ನು ದೇವದರ್ಶನದ ಗುಡಾರದ ಕಡೆಗೆ ಕರೆದುಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಸರ್ವೇಶ್ವರ ಮೋಶೆಗೆ ಹೇಳಿದುದು: “ಇಸ್ರಯೇಲರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನನಗೆ ತಿಳಿದಿರುವ ಎಪ್ಪತ್ತು ಮಂದಿಯನ್ನು ಕೂಟವಾಗಿ ಕರೆಸಿ ದೇವದರ್ಶನದ ಗುಡಾರದ ಬಳಿಗೆ ಕರೆದುಕೊಂಡು ಬಾ. ಅವರು ಅಲ್ಲೇ ನಿನ್ನೊಡನೆ ನಿಂತಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ಇಸ್ರಾಯೇಲ್ಯರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನೀನು ತಿಳುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡ ಕರಿಸಿ ದೇವದರ್ಶನದ ಗುಡಾರದ ಬಾಗಲಿಗೆ ಕರತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಲ್ಲಿ ಹಿರಿಯರೆಂದೂ ಅಧಿಕಾರಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನಗುಡಾರದ ಬಾಗಿಲಿಗೆ ಕರೆದುತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:16
14 ತಿಳಿವುಗಳ ಹೋಲಿಕೆ  

ತರುವಾಯ ಯೆಹೋವ ದೇವರು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಮತ್ತು ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಈ ಬೆಟ್ಟವನ್ನು ಹತ್ತಿ ಯೆಹೋವ ದೇವರಾದ ನನ್ನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.


ಆಗ ಮೋಶೆ, ಆರೋನ್, ನಾದಾಬ್, ಅಬೀಹೂ ಮತ್ತು ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಮೇಲಕ್ಕೆ ಹೋದರು.


ಯೆಹೋವ ದೇವರು ನಿಮ್ಮ ಗೋತ್ರಗಳ ಪ್ರಕಾರ ಕೊಡುವ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ನ್ಯಾಯಾಧಿಪತಿಗಳನ್ನೂ, ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು. ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಜ್ಞಾನಿಗಳನ್ನು ಕರೆಯಿಸಿ, ಒಂದೊಂದು ಗೋತ್ರದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದೆನು.


ಅವರಲ್ಲದೆ ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಪುತ್ರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಈಜಿಪ್ಟಿಗೆ ಹೋದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.


ಆ ಎಪ್ಪತ್ತೆರಡು ಮಂದಿ ಸಂತೋಷದಿಂದ ಹಿಂತಿರುಗಿ, “ಕರ್ತದೇವರೇ, ನಿಮ್ಮ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು,” ಎಂದರು.


ಇವುಗಳಾದ ಮೇಲೆ ಕರ್ತದೇವರು ಬೇರೆ ಎಪ್ಪತ್ತೆರಡು ಮಂದಿಯನ್ನು ಸಹ ನೇಮಿಸಿ ತಾವೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತಮಗೆ ಮುಂದಾಗಿ ಕಳುಹಿಸಿದರು.


ಇಸ್ರಾಯೇಲಿನ ಮನೆತನದವರಲ್ಲಿ ಎಪ್ಪತ್ತು ಮಂದಿ ಹಿರಿಯರೂ, ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿದ್ದರು. ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾರತಿ ಇತ್ತು. ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.


ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲಿನ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು.


ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ, ನಿಮ್ಮ ಅಧಿಕಾರಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ಆಗ ಈ ಮಾತುಗಳನ್ನು ಅವರು ಕೇಳುವ ಹಾಗೆ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.


ಮೋಶೆಯು ಇಸ್ರಾಯೇಲರಲ್ಲಿ ಇರುವ ಸಮರ್ಥರನ್ನು ಆರಿಸಿಕೊಂಡು, ಅವರನ್ನು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ, ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದನು.


ಆಗ ಮೋಶೆ ಹೋಗಿ ಯೆಹೋವ ದೇವರ ಮಾತುಗಳನ್ನು ಜನರಿಗೆ ಹೇಳಿ, ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ, ಗುಡಾರದ ಸುತ್ತಲೂ ನಿಲ್ಲಿಸಿದನು.


ಯೆಹೋವ ದೇವರು ನನಗೆ ಹೀಗೆಂದನು: “ಹೋಗಿ, ಕುಂಬಾರನ ಮಣ್ಣಿನ ಮಡಕೆಯನ್ನು ತೆಗೆದುಕೊಂಡು, ಜನರ ಹಿರಿಯರಿಂದಲೂ, ಯಾಜಕರ ಹಿರಿಯರಿಂದಲೂ ಕೆಲವರನ್ನು ಕರೆದುಕೊಂಡು,


ಮೋಶೆಯು ಎದ್ದು ದಾತಾನ್, ಅಬೀರಾಮರ ಬಳಿಗೆ ಹೋದನು. ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು