Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೋವ ದೇವರು ಮೋಶೆಗೆ, “ಆಕೆಯ ತಂದೆ ಅವಳ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗಿರುವುದಿಲ್ಲವೇ? ಹಾಗಾದರೆ ಆಕೆಯು ಏಳು ದಿವಸ ಪಾಳೆಯದ ಹೊರಗೆ ಇರಲಿ, ತರುವಾಯ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಸರ್ವೇಶ್ವರ, “ಅವಳ ತಂದೆ ಅವಳ ಮುಖದ ಮೇಲೆ ಉಗುಳಿದ್ದರೆ ಏಳು ದಿವಸ ಅವಳು ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೆ? ಅಂತೆಯೇ ಅವಳು ಏಳು ದಿವಸ ಪಾಳೆಯದಿಂದ ಹೊರಗಿರಲಿ. ಅನಂತರ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಯೆಹೋವನು - ತಂದೆ ಮುಖದ ಮೇಲೆ ಉಗುಳಿದರೆ ಆಕೆ ಹೇಗೂ ಏಳು ದಿವಸ ನಾಚಿಕೆಯಿಂದ ಮರೆಯಾಗುವದಿಲ್ಲವೇ; ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು; ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದಕ್ಕೆ ಯೆಹೋವನು, “ಆಕೆಯ ತಂದೆ ಮುಖದ ಮೇಲೆ ಉಗುಳಿದ್ದರೆ ಆಕೆ ಏಳು ದಿವಸ ನಾಚಿಕೆಯಿಂದ ಇರುತ್ತಿರಲಿಲ್ಲವೇ? ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು. ತರುವಾಯ ಆಕೆ ಪಾಳೆಯದೊಳಗೆ ಬರಬಹುದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:14
13 ತಿಳಿವುಗಳ ಹೋಲಿಕೆ  

ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು, ಕೆರವನ್ನು ಅವನ ಪಾದದಿಂದ ಬಿಡಿಸಿ, ಅವನ ಮುಖದಲ್ಲಿ ಉಗುಳಿ ಉತ್ತರಕೊಟ್ಟು, “ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು,” ಎಂದು ಹೇಳಲಿ.


ಈಗ ನನ್ನನ್ನು ಕಂಡು ಅಸಹ್ಯಪಟ್ಟು, ನನ್ನಿಂದ ದೂರಸರಿಯುತ್ತಿದ್ದಾರೆ. ನನ್ನ ಮುಖದ ಮೇಲೆ ಉಗುಳಲೂ ಹಿಂಜರಿಯುವದಿಲ್ಲ.


ನಾನು ಹೊಡೆಯುವವರಿಗೆ ಬೆನ್ನನ್ನೂ, ಕೂದಲು ಕೀಳುವವರಿಗೆ ನನ್ನ ಗಡ್ಡವನ್ನೂ ಒಡ್ಡಿದೆನು. ನನ್ನ ಮುಖವನ್ನು ನಿಂದೆಗೂ, ಉಗುಳುವಿಕೆಗೂ ಮರೆಮಾಡಲಿಲ್ಲ.


ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ಆಮೇಲೆ ಅವರು ಯೇಸುವಿನ ಮುಖದ ಮೇಲೆ ಉಗುಳಿ ಅವರನ್ನು ಗುದ್ದಿದರು. ಬೇರೆ ಕೆಲವರು ಅವರ ಕೆನ್ನೆಗೆ ಹೊಡೆದು,


“ದೇವರು ನನ್ನನ್ನು ಜನರ ಕಟ್ಟುಗಾದೆಗೆ ಆಸ್ಪದ ಮಾಡಿದ್ದಾರೆ; ನನ್ನನ್ನು ಕಾಣುವವರು ನನ್ನ ಮುಖಕ್ಕೆ ಉಗುಳುವಂತೆ ಮಾಡಿದ್ದಾರೆ.


“ಶುದ್ಧವಾಗುವುದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ, ತನ್ನ ಎಲ್ಲಾ ಕೂದಲನ್ನು ಬೋಳಿಸಿಕೊಂಡು, ತಾನು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು. ತರುವಾಯ ಅವನು ಪಾಳೆಯದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳವರೆಗೆ ಕಾಯಬೇಕು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಯೆಹೋವ ದೇವರು ಅರಸನನ್ನು ಮರಣದ ದಿವಸದವರೆಗೂ ಕುಷ್ಠರೋಗದಿಂದ ಬಾಧಿಸಿದ್ದರಿಂದ, ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.


ಅವನ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು, ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದು, ಅಲ್ಲಿನ ಕೂದಲು ಬೆಳ್ಳಗಾಗದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಪ್ರತ್ಯೇಕವಾಗಿ ಇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು