Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:22 - ಕನ್ನಡ ಸಮಕಾಲಿಕ ಅನುವಾದ

22 ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರು ಬೆಟ್ಟವನ್ನು ಹತ್ತಿ ನೆಗೆಬನ್ನು ದಾಟಿ, ಹೆಬ್ರೋನಿಗೆ ಬಂದರು. ಅಲ್ಲಿ ‘ಅನಕಿಮ್’ ವಂಶಸ್ಥರಾದ ಅಹೀಮನ್, ಶೇಷೈ, ತಲ್ಮೈ ಎಂಬವರು ಇದ್ದರು. (ಹೆಬ್ರೋನ್ ಪಟ್ಟಣ ಈಜಿಪ್ಟ್ ದೇಶದಲ್ಲಿರುವ ಚೋಮ್ ಪಟ್ಟಣಕ್ಕಿಂತ ಏಳು ವರ್ಷ ಮೊದಲೆ ಕಟ್ಟಲ್ಪಟ್ಟಿತ್ತು)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು ಬೆಟ್ಟವನ್ನು ಹತ್ತಿ ಕಾನಾನ್‍ದೇಶದ ದಕ್ಷಿಣಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷ ಮುಂಚೆ ಕಟ್ಟಲ್ಪಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:22
21 ತಿಳಿವುಗಳ ಹೋಲಿಕೆ  

ಈಜಿಪ್ಟಿನಲ್ಲಿ ಆದ ಸೂಚಕಕಾರ್ಯಗಳನ್ನೂ, ಚೋವನ್ ಬಯಲಿನಲ್ಲಿ ನಡೆಸಿದ ಅದ್ಭುತಗಳನ್ನು ಮಾಡಿದ ದಿವಸವನ್ನೂ ಅವರು ಜ್ಞಾಪಕ ಮಾಡಿಕೊಳ್ಳಲಿಲ್ಲ.


ದೇವರು ಪಿತೃಗಳ ಮುಂದೆ ಈಜಿಪ್ಟ್ ದೇಶದಲ್ಲಿ, ಚೋವನ್ ಬೈಲಿನಲ್ಲಿ ಅದ್ಭುತಗಳನ್ನು ಮಾಡಿದರು.


ಚೋವನ್ ಪಟ್ಟಣದ ಅಧಿಪತಿಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿದೆ. ನೀವು ಫರೋಹನನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ಶಿಷ್ಯನೆಂದು ಹೇಳುವುದು ಹೇಗೆ”?


ಏಕೆಂದರೆ ಅವನ ಪ್ರಧಾನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿಗಳು ಹಾನೇಸಿಗೆ ಬಂದಿದ್ದಾರೆ.


ಯೆಹೂದ ಗೋತ್ರದವರು ಪೂರ್ವದಲ್ಲಿ ಕಿರ್ಯತ್ ಅರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಸೋಲಿಸಿದರು.


ಚೋವನಿನ ಶ್ರೇಷ್ಠರು ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಈಜಿಪ್ಟಿನ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ. ಅದನ್ನು ತಪ್ಪು ದಾರಿಗೆಳೆದಿದ್ದಾರೆ.


ದಾವೀದನು ಹೆಬ್ರೋನಿನಲ್ಲಿ ಯೆಹೂದ ಗೋತ್ರದವರ ಮೇಲೆ ಅರಸನಾಗಿದ್ದ ಕಾಲವು ಏಳು ವರ್ಷ ಆರು ತಿಂಗಳು.


ಇದಾದ ಮೇಲೆ ದಾವೀದನು ಯೆಹೋವ ದೇವರನ್ನು, “ಯೆಹೂದದ ಪಟ್ಟಣಗಳಲ್ಲಿ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಿದನು. ಯೆಹೋವ ದೇವರು ಅವನಿಗೆ, “ಹೋಗು,” ಎಂದರು. ಅದಕ್ಕವನು, “ನಾನು ಎಲ್ಲಿಗೆ ಹೋಗಲಿ?” ಎಂದನು. ಅದಕ್ಕೆ ದೇವರು, “ಹೆಬ್ರೋನಿಗೆ,” ಎಂದರು.


ಹೀಗೆಯೇ ಯಾಜಕನಾದ ಆರೋನನ ವಂಶದವರಿಗೆ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಕೊಟ್ಟರು. ಲಿಬ್ನಾವನ್ನೂ


ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಮಹಾಶರೀರವುಳ್ಳ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳ ಹಾಗೆ ಇದ್ದೆವು. ಅವರ ದೃಷ್ಟಿಗೂ ನಾವು ಹಾಗೆಯೇ ಕಾಣಿಸಿದೆವು,” ಎಂದರು.


ಮೋಶೆ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ನೆಗೆವ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ,


ಅವಳು ಕಾನಾನ್ ದೇಶದಲ್ಲಿರುವ ಹೆಬ್ರೋನಿನಲ್ಲಿ ಅಂದರೆ ಕಿರ್ಯತ್ ಅರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡಿದನು.


ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.


ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು. ಪಟ್ಟಣಗಳು ಭದ್ರವಾಗಿಯೂ, ಬಹಳ ದೊಡ್ಡದಾಗಿಯೂ ಇವೆ. ಅನಾಕನ ಮಕ್ಕಳನ್ನು ನಾವು ಅಲ್ಲಿ ಕಂಡೆವು.


ಆ ನಾಡಿನ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ. “ಅನಾಕ್ಯರ ಮುಂದೆ ಯಾರು ನಿಲ್ಲುವರು?” ಎಂಬ ಮಾತನ್ನು ಅವರ ಬಗ್ಗೆ ಕೇಳಿದ್ದೀರಿ.


ಅನಂತರ ಯೆಹೋಶುವನು ಸಮಸ್ತ ಇಸ್ರಾಯೇಲರ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟುಹೋಗಿ, ಅದರ ಮೇಲೆ ಯುದ್ಧಮಾಡಿದನು.


ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳದವರಿಗೂ ಬಹುಮಾನಗಳನ್ನು ಕಳುಹಿಸಿಕೊಟ್ಟನು.


ಆಗ ಮುನ್ನೂರು ಬೆಳ್ಳಿ ನಾಣ್ಯದ ತೂಕದ ಕಂಚು ಈಟಿಯುಳ್ಳ, ಹೊಸ ಖಡ್ಗವನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ರೆಫಾಯನ ಮಕ್ಕಳಲ್ಲಿ ಇಷ್ಬೀಬೆನೋಬನು ದಾವೀದನನ್ನು ಕೊಲ್ಲಬೇಕೆಂದಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು