Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:29 - ಕನ್ನಡ ಸಮಕಾಲಿಕ ಅನುವಾದ

29 ಅಮಾಲೇಕ್ಯರು ದೇಶದ ನೆಗೆವನಲ್ಲಿ ವಾಸವಾಗಿದ್ದಾರೆ. ಹಿತ್ತಿಯರೂ ಯೆಬೂಸಿಯರೂ ಅಮೋರಿಯರೂ ಪರ್ವತಗಳಲ್ಲಿಯೂ; ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸವಾಗಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದಕ್ಷಿಣ ಪ್ರಾಂತದಲ್ಲಿ ಅಮಾಲೇಕ್ಯರು, ಮಲೆನಾಡಿನಲ್ಲಿ ಹಿತ್ತಿಯರು ಯೆಬೂಸಿಯರು ಹಾಗು ಅಮೋರಿಯರು ಮತ್ತು ಸಮುದ್ರ ತೀರದಲ್ಲಿ ಹಾಗೂ ಜೋರ್ಡನ್ ನದಿಯ ಪರಿಸರದಲ್ಲಿ ಕಾನಾನ್ಯರು ವಾಸವಾಗಿದ್ದಾರೆ,” ಎಂದು ವರದಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರೂ ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಇವರೂ ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:29
27 ತಿಳಿವುಗಳ ಹೋಲಿಕೆ  

ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿರುವುದರಿಂದ ನೀವು ಅವರ ಖಡ್ಗಕ್ಕೆ ತುತ್ತಾಗುವಿರಿ. ನೀವು ಯೆಹೋವ ದೇವರ ಕಡೆಯಿಂದ ತಿರುಗಿದ ಕಾರಣ, ಆತನು ನಿಮ್ಮ ಸಂಗಡ ಇರುವುದಿಲ್ಲ,” ಎಂದನು.


ಇಸ್ರಾಯೇಲರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು,


ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಟೈರಿನವರು, ಫಿಲಿಷ್ಟಿಯರು,


ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಅವನು ಸೈನ್ಯವನ್ನು ಕೂಡಿಸಿಕೊಂಡು, ಅಮಾಲೇಕ್ಯರನ್ನು ಸಂಹರಿಸಿದನು. ಇಸ್ರಾಯೇಲನ್ನು ಸುಲಿದುಕೊಳ್ಳುವವರ ಸಮಸ್ತರ ಕೈಗೂ ತಪ್ಪಿಸಿದನು.


ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, ಆದರೆ ಅವನು ಕೊನೆಗೆ ನಾಶವಾಗುವನು.”


ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ, ಕಾನಾನ್ಯರೂ ಇಳಿದು, ಅವರನ್ನು ಹೊಡೆದು, ಹೊರ್ಮಾದವರೆಗೆ ಅಟ್ಟಿಬಿಟ್ಟರು.


ಅಮಾಲೇಕ್ಯರೂ, ಕಾನಾನ್ಯರೂ ತಗ್ಗಿನಲ್ಲಿ ವಾಸ ಮಾಡುತ್ತಿರುವುದರಿಂದ ನಾಳೆ ನೀವು ತಿರುಗಿಕೊಂಡು, ಕೆಂಪುಸಮುದ್ರದ ಮಾರ್ಗವಾಗಿ ಮರುಭೂಮಿಗೆ ಹೊರಡಿರಿ,” ಎಂದರು.


ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಅವರು ಹಿಂದಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು, ಅಮಾಲೇಕ್ಯರ ಎಲ್ಲಾ ಬಯಲನ್ನು ಹಜಜೋನ್ ತಾಮಾರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.


ಮೋಶೆ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ನೆಗೆವ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ,


ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.


ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.


ಯೊರ್ದನ್ ನದಿಯ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದುರಾದ ಮೆಡಿಟೆರಿಯನ್ ಸಮುದ್ರದ ಸಮಸ್ತ ಪ್ರಾಂತಗಳಲ್ಲಿಯೂ ಇರುವ ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಅರಸರು ಇದನ್ನು ಕೇಳಿದರು.


ಹಾಗೆಯೇ ಅಮೋರಿಯರ ಐದು ಮಂದಿ ಅರಸರಾದ, ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಒಟ್ಟುಸೇರಿದರು. ಇವರೂ ಇವರ ಸೈನ್ಯವೂ ಹೊರಟುಹೋಗಿ ಗಿಬ್ಯೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿದರು.


ಆಗ ಗಿಬ್ಯೋನಿನ ಜನರು, “ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿಬಂದಿದ್ದಾರೆ. ನಿನ್ನ ಸೇವಕರರಾದ ನಮ್ಮನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು, ನಮ್ಮನ್ನು ಕಾಪಾಡು! ನಮಗೆ ಸಹಾಯಮಾಡು,” ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.


ಫಿಲಿಷ್ಟಿಯರು ಇಸ್ರಾಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲ್ಗೊಂಡು ಗತ್ ಊರಿನವರೆಗೂ ಇರುವ ಪಟ್ಟಣಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರಿಂದ ತಿರುಗಿ ತೆಗೆದುಕೊಂಡರು. ಅವುಗಳ ಮೇರೆಗಳನ್ನು ಇಸ್ರಾಯೇಲರು ಫಿಲಿಷ್ಟಿಯರ ಕೈಯಿಂದ ಬಿಡಿಸಿಕೊಂಡರು. ಇಸ್ರಾಯೇಲಿಗೂ, ಅಮೋರಿಯರಿಗೂ ಮಧ್ಯೆ ಸಮಾಧಾನ ಉಂಟಾಗಿತ್ತು.


ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಹಿತ್ತಿಯರನ್ನೂ, ಅಮೋರಿಯರನ್ನೂ, ಕಾನಾನ್ಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಪೂರ್ಣವಾಗಿ ದಂಡಿಸಬೇಕು.


ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.


ಇಸ್ರಾಯೇಲರು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು,


ದಾವೀದನೂ, ಅವನ ಜನರೂ ಶೂರಿಗೆ ಹೋಗುವ ಮೇರೆಯಿಂದ ಈಜಿಪ್ಟಿನವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.


ಅವನ ಹೃದಯವು ನಿಮ್ಮ ಮುಂದೆ ಪ್ರಾಮಾಣಿಕವಾದದ್ದೆಂದೂ ಗುರುತಿಸಿದಿರಿ. ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಯೆಬೂಸಿಯರೂ, ಗಿರ್ಗಾಷಿಯರೂ ಇವರ ದೇಶವನ್ನು, ಅಬ್ರಾಮನ ಸಂತಾನಕ್ಕೆ ಕೊಡುವಂತೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿರಿ. ನೀತಿವಂತರಾದ ನೀವು ನಿಮ್ಮ ವಾಗ್ದಾನವನ್ನು ಈಡೇರಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು