Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:19 - ಕನ್ನಡ ಸಮಕಾಲಿಕ ಅನುವಾದ

19 ನಿಮ್ಮ ಪ್ರೀತಿಯು ದೊಡ್ಡದಾಗಿರುವ ಪ್ರಕಾರವೂ ನೀವು ಈಜಿಪ್ಟಿನಿಂದ ಇಲ್ಲಿಯವರೆಗೆ ಈ ಜನರ ಪಾಪಗಳನ್ನು ಮನ್ನಿಸಿದ ಪ್ರಕಾರ ಈಗಲೂ ಈ ಜನರ ಪಾಪವನ್ನು ಮನ್ನಿಸಿರಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾವು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ದಿನದಿಂದ ಇಂದಿನವರೆಗೆ ಈ ಜನರ ಪಾಪಗಳನ್ನು ಕ್ಷಮಿಸಿದ್ದೀರಿ. ಅದೇ ಪ್ರಕಾರ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾವು ಐಗುಪ್ತದೇಶದಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷವಿುಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷವಿುಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾವು ಈಜಿಪ್ಟಿನಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:19
23 ತಿಳಿವುಗಳ ಹೋಲಿಕೆ  

ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.


ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ.


ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,


ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು.


ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ.


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.


ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.


ಕರ್ತದೇವರೇ ಕೇಳಿರಿ! ಕರ್ತದೇವರೇ ಕ್ಷಮಿಸಿರಿ! ಕರ್ತದೇವರೇ ಲಾಲಿಸಿರಿ ಮತ್ತು ಕಾರ್ಯವನ್ನು ಸಾಧಿಸಿರಿ! ನನ್ನ ದೇವರೇ, ನಿಮ್ಮ ನಿಮಿತ್ತವಾಗಿ ತಡಮಾಡಬೇಡಿರಿ. ಏಕೆಂದರೆ ನಿಮ್ಮ ಪಟ್ಟಣವೂ ನಿಮ್ಮ ಜನರೂ ನಿಮ್ಮ ಹೆಸರನ್ನು ಧರಿಸಿದ್ದಾರೆ.”


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ.


ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು.


“ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. ಅರಸನ ಜಯಧ್ವನಿಯು ಅವರಲ್ಲಿ ಉಂಟು.


ನಿಮ್ಮ ಜನರ ಅಕ್ರಮವನ್ನು ಪರಿಹರಿಸಿದ್ದೀರಿ. ಅವರ ಪಾಪವನ್ನೆಲ್ಲಾ ಮುಚ್ಚಿದ್ದೀರಿ.


ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ.


ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು, “ಸಾರ್ವಭೌಮ ಯೆಹೋವ ದೇವರೇ, ಲಾಲಿಸು, ನನ್ನನ್ನು ಮನ್ನಿಸು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ,” ಎಂದು ವಿಜ್ಞಾಪಿಸಿಕೊಂಡೆನು.


ಆಗ ನಾನು, “ಸಾರ್ವಭೌಮ ಯೆಹೋವ ದೇವರೇ, ನಿಲ್ಲಿಸಿಬಿಡಿರಿ,” ಎಂದು ಬೇಡಿಕೊಳ್ಳುತ್ತೇನೆ. “ಯಾಕೋಬನು ಹೇಗೆ ಬದುಕುಳಿಯುತ್ತಾನೆ? ಅವನು ತುಂಬಾ ಚಿಕ್ಕವನು,” ಎಂದು ಮೊರೆಯಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು