Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:30 - ಕನ್ನಡ ಸಮಕಾಲಿಕ ಅನುವಾದ

30 ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಬೇರೆ ಯಾರೂ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:30
12 ತಿಳಿವುಗಳ ಹೋಲಿಕೆ  

ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.


ಆದರೆ ದೇಶವನ್ನು ಪರೀಕ್ಷಿಸುವುದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ಉಳಿದರು.


ಅದಕ್ಕೆ ಅಬ್ರಾಮನು ಸೊದೋಮಿನ ಅರಸನಿಗೆ, “ಭೂಮಿ ಆಕಾಶವನ್ನು ಸ್ವಾಧೀನ ಪಡಿಸಿಕೊಂಡಿರುವ ಮಹೋನ್ನತ ದೇವರಾಗಿರುವ ಯೆಹೋವ ದೇವರ ಕಡೆಗೆ ನನ್ನ ಕೈ ಎತ್ತಿ ಪ್ರಮಾಣ ಮಾಡುತ್ತೇನೆ.


ಯೆಹೋವ ದೇವರನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸಿದ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಬೇರಾರೂ ನೋಡುವುದಿಲ್ಲ.


ಯುಗಯುಗಾಂತರಕ್ಕೂ ಜೀವಿಸುವವರೂ ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿದವರ ಮೇಲೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಇನ್ನು ಆಲಸ್ಯವಾಗುವುದಿಲ್ಲ!


ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು.


ಯೆಹೂದ ಗೋತ್ರದ ಯೆಫುನ್ನೆಯ ಮಗ ಕಾಲೇಬನು,


ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ಬೇರೆ ಆತ್ಮವಿದ್ದುದರಿಂದಲೂ, ಅವನು ಹೃದಯಪೂರ್ವಕವಾಗಿ ನನ್ನನ್ನು ಹಿಂಬಾಲಿಸಿದ್ದುದರಿಂದಲೂ ಅವನು ಸಂಚರಿಸಿ ಬಂದ ಆ ದೇಶಕ್ಕೆ ಅವನನ್ನು ಸೇರಿಸುವೆನು. ಅವನ ಸಂತಾನವು ಅದನ್ನು ಸ್ವಾಧೀನಪಡಿಸಿಕೊಳ್ಳುವುದು.


ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು.


ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.


ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,’ ” ಎಂದು ನಾನು ಅಸಂತೋಷದಿಂದ ಆಣೆ ಇಟ್ಟುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು