Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:43 - ಕನ್ನಡ ಸಮಕಾಲಿಕ ಅನುವಾದ

43 ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿರುವುದರಿಂದ ನೀವು ಅವರ ಖಡ್ಗಕ್ಕೆ ತುತ್ತಾಗುವಿರಿ. ನೀವು ಯೆಹೋವ ದೇವರ ಕಡೆಯಿಂದ ತಿರುಗಿದ ಕಾರಣ, ಆತನು ನಿಮ್ಮ ಸಂಗಡ ಇರುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅಲ್ಲಿ ಅಮಾಲೇಕ್ಯರು ಹಾಗೂ ಕಾನಾನ್ಯರು ನಿಮಗೆ ಎದುರಾಗುವರು; ನೀವು ಅವರ ಕತ್ತಿಗೆ ತುತ್ತಾಗುವಿರಿ. ನೀವು ಸರ್ವೇಶ್ವರನ ಮಾತನ್ನು ಅನುಸರಿಸದೆ ಪ್ರತಿಭಟಿಸಿದ್ದೀರಿ. ಕತ್ತಿಗೆ ತುತ್ತಾಗುವಿರಿ. ಈ ಕಾರಣ ಅವರು ನಿಮ್ಮೊಂದಿಗೆ ಇರುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅಲ್ಲಿ ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಸತ್ತೀರಿ; ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಅಮಾಲೇಕ್ಯರೂ ಕಾನಾನ್ಯರೂ ನಿಮ್ಮನ್ನು ಎದುರಿಸಲು ಅಲ್ಲಿರುವುದರಿಂದ ನೀವು ಅವರ ಖಡ್ಗದಿಂದ ಸಾಯುವಿರಿ. ನೀವು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:43
14 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ಅಮಾಲೇಕ್ಯರೂ, ಕಾನಾನ್ಯರೂ ತಗ್ಗಿನಲ್ಲಿ ವಾಸ ಮಾಡುತ್ತಿರುವುದರಿಂದ ನಾಳೆ ನೀವು ತಿರುಗಿಕೊಂಡು, ಕೆಂಪುಸಮುದ್ರದ ಮಾರ್ಗವಾಗಿ ಮರುಭೂಮಿಗೆ ಹೊರಡಿರಿ,” ಎಂದರು.


ಅಮಾಲೇಕ್ಯರು ದೇಶದ ನೆಗೆವನಲ್ಲಿ ವಾಸವಾಗಿದ್ದಾರೆ. ಹಿತ್ತಿಯರೂ ಯೆಬೂಸಿಯರೂ ಅಮೋರಿಯರೂ ಪರ್ವತಗಳಲ್ಲಿಯೂ; ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸವಾಗಿದ್ದಾರೆ,” ಎಂದರು.


ಅವರು ತಮ್ಮ ಮಕ್ಕಳನ್ನು ಬೆಳೆಸಿದ್ದರೂ, ಅವರ ಮಕ್ಕಳಲ್ಲಿ ಯಾರೂ ಉಳಿಯದ ಹಾಗೆ ನಾನು ಅವರನ್ನು ಮಕ್ಕಳಿಲ್ಲದವರನ್ನಾಗಿ ಮಾಡುವೆನು. ನಾನು ಅವರನ್ನು ಬಿಟ್ಟು ಹೋಗುವಾಗ ಅವರಿಗೆ ಕಷ್ಟ!


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಅವಳು, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು, “ಮೊದಲಿನಂತೆಯೇ ನಾನು ಹೊರಗೆ ಹೋಗಿ ಬಿಡುಗಡೆಯಾಗುವೆನು,” ಎಂದುಕೊಂಡನು. ಆದರೆ ಯೆಹೋವ ದೇವರು ತನ್ನನ್ನು ಬಿಟ್ಟು ಹೋಗಿದ್ದಾರೆಂದು ಅವನು ಅರಿಯಲಿಲ್ಲ.


ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.


ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.


ಯೆಹೋವ ದೇವರು ನಿಮ್ಮ ಸಂಗಡ ಇಲ್ಲ ಅದಕ್ಕಾಗಿ ನಿಮ್ಮ ಶತ್ರುಗಳು ನಿಮ್ಮನ್ನು ಪರಾಜಯಗೊಳಿಸದಂತೆ ಏರಿ ಹೋಗಬೇಡಿರಿ.


ಆದರೆ ಅವರು ಹಟಮಾಡಿ, ಬೆಟ್ಟದ ತುದಿಯ ಮೇಲೆ ಏರಿಹೋದರು. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.


ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನು ತೋರಿಸಿದ್ದಾರೆ. ಅದರಿಂದ ಅವರು ನಾಶನಕ್ಕೆ ಪಾತ್ರರಾದರು. ನೀವು ಶಾಪಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ, ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವುದಿಲ್ಲ.


ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,


ವೈರಿಯ ಮುಂದೆ ನಾವು ಓಡಿಹೋಗುವಂತೆ ಮಾಡಿದ್ದೀರಿ. ನಮ್ಮ ವೈರಿಗಳು ನಮ್ಮ ಸೊತ್ತನ್ನು ಕೊಳ್ಳೆ ಹೊಡೆಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು