Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:24 - ಕನ್ನಡ ಸಮಕಾಲಿಕ ಅನುವಾದ

24 ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ, ಸಭೆಯು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು ಕ್ರಮದ ಪ್ರಕಾರ ಅದರ ಧಾನ್ಯ ಸಮರ್ಪಣೆಯನ್ನೂ, ಪಾನದ ಸಮರ್ಪಣೆಯನ್ನೂ, ಪಾಪ ಪರಿಹಾರಕ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಅವರೆಲ್ಲರು ಒಟ್ಟಿಗೆ ಸೇರಿ ಸರ್ವೇಶ್ವರನಿಗೆ ಸುಗಂಧ ಕಾಣಿಕೆಯಾಗಿ ಹಾಗೂ ದಹನಬಲಿಯಾಗಿ ಒಂದು ಹೋರಿಯನ್ನು ಅರ್ಪಿಸಬೇಕು; ನೈವೇದ್ಯವಾಗಿ ನಿಯಮಿತ ಧಾನ್ಯದ್ರವ್ಯಗಳನ್ನು ಹಾಗೂ ಪಾನದ್ರವ್ಯಗಳನ್ನೂ ಅರ್ಪಿಸಬೇಕು; ಅಲ್ಲದೆ ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರೆಲ್ಲರೂ ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ ನೈವೇದ್ಯವಾಗಿ ಅದಕ್ಕೆ ನೇವಿುತವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ದೋಷಪರಿಹಾರಕಯಜ್ಞವಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿರುದ್ದೇಶದಿಂದ ಮತ್ತು ಸಮುದಾಯಕ್ಕೆ ತಿಳಿಯದಂತೆ ಇದನ್ನು ಮಾಡಿದ್ದಾಗಿದ್ದರೆ, ಯೆಹೋವನಿಗೆ ಸುಗಂಧ ವಾಸನೆಯನ್ನು ಉಂಟುಮಾಡುವುದಕ್ಕಾಗಿ ಒಂದು ಎಳೆಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಬೇಕು ಮತ್ತು ಅದರೊಡನೆ ಧಾನ್ಯಾರ್ಪಣೆಯನ್ನೂ ಪಾನಾರ್ಪಣೆಯನ್ನೂ ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:24
14 ತಿಳಿವುಗಳ ಹೋಲಿಕೆ  

ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದುಬಂದರೆ, ಅವನು ಬಲಿಗಾಗಿ ಹೋತಗಳಲ್ಲಿ ಕಳಂಕರಹಿತವಾದ ಒಂದು ಹೋತವನ್ನು ತಂದು ಸಮರ್ಪಿಸಬೇಕು.


ಇದಲ್ಲದೆ ನಿತ್ಯ ದಹನಬಲಿಯ ಹೊರತು, ಯೆಹೋವ ದೇವರಿಗೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು.


“ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.


ಸೆರೆಯಿಂದ ಮರಳಿ ಬಂದವರು ಇಸ್ರಾಯೇಲ್ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲರಿಗೋಸ್ಕರ ಹನ್ನೆರಡು ಹೋರಿಗಳನ್ನೂ, ತೊಂಬತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ದೋಷಪರಿಹಾರಕ್ಕಾಗಿ ಹನ್ನೆರಡು ಹೋತಗಳನ್ನೂ ಅರ್ಪಿಸಿದರು. ಇವೆಲ್ಲಾ ಯೆಹೋವ ದೇವರಿಗೆ ದಹನಬಲಿಯಾಗಿತ್ತು.


ದೇವರ ಆಲಯದ ಪ್ರತಿಷ್ಠಾಪನೆಗೋಸ್ಕರ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ, ನಾನೂರು ಕುರಿಮರಿಗಳನ್ನೂ, ಇಸ್ರಾಯೇಲ್ ಕುಲ ಗೋತ್ರಗಳ ಲೆಕ್ಕದ ಪ್ರಕಾರ, ಸಮಸ್ತ ಇಸ್ರಾಯೇಲರ ದೋಷಪರಿಹಾರ ಬಲಿಗಾಗಿ ಹನ್ನೆರಡು ಮೇಕೆಯ ಹೋತಗಳನ್ನೂ ಅರ್ಪಿಸಿದರು.


“ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:


“ ‘ಒಬ್ಬ ಅಧಿಪತಿಯು ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,


ಅಲ್ಲದೆ ಅವನು ಹಿಂಡಿನೊಳಗಿಂದ ಕಳಂಕರಹಿತವಾದ ಒಂದು ಟಗರನ್ನು ನಿನ್ನ ಅಂದಾಜಿಗನುಸಾರ ಪ್ರಾಯಶ್ಚಿತ್ತ ಬಲಿಗಾಗಿ, ಯಾಜಕನ ಬಳಿಗೆ ತರಬೇಕು. ಯಾಜಕನು, ಅಜ್ಞಾನದಿಂದ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ, ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನಿಗೆ ಕ್ಷಮೆ ದೊರಕುವುದು.


ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು, ನಿಮ್ಮ ಸಂತತಿಗಳವರೆಗೂ ಯೆಹೋವ ದೇವರು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ,


ಆಗ ಇಸ್ರಾಯೇಲರ ಸಮಸ್ತ ಸಮೂಹದವರಿಗೂ, ಅವರೊಳಗೆ ಪರಕೀಯನಾಗಿ ಪ್ರವಾಸಿಯಾಗಿರುವವನಿಗೂ ಅದು ಕ್ಷಮಾಪಣೆಯಾಗುವುದು. ಏಕೆಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.


ತರುವಾಯ ಹೋತವನ್ನು ಪಾಪ ಪರಿಹಾರದ ಬಲಿಯಾಗಿಯೂ ಮತ್ತು ಸಮಾಧಾನ ಬಲಿಯಾಗಿ ಒಂದು ವರ್ಷದ ಎರಡು ಕುರಿಮರಿಗಳನ್ನು ಬಲಿಯಾಗಿ ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು