Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:25 - ಕನ್ನಡ ಸಮಕಾಲಿಕ ಅನುವಾದ

25 ಯಾಜಕನು ಇಸ್ರಾಯೇಲರ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತ ಮಾಡಬೇಕು. ಏಕೆಂದರೆ ಅದು ತಿಳಿಯದೆ ಮಾಡಲಾಗಿತ್ತು. ಆದರೂ ಅವರು ಯೆಹೋವ ದೇವರಿಗೆ ದಹನಬಲಿಯಾಗಿ ತಮ್ಮ ಸಮರ್ಪಣೆಯನ್ನೂ, ತಮ್ಮ ತಪ್ಪಿಗೋಸ್ಕರ ಪಾಪ ಪರಿಹಾರಕ ಬಲಿಯನ್ನೂ ಯೆಹೋವ ದೇವರ ಮುಂದೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ಯಾಜಕನು ಇಸ್ರಯೇಲರ ಸರ್ವಸಮೂಹದವರ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆ ದೊರಕುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದರ ಪರಿಹಾರಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿಯನ್ನೂ ದೋಷಪರಿಹಾರಕಬಲಿಯನ್ನೂ ಅರ್ಪಿಸಿದ್ದರಿಂದ ಕ್ಷಮೆ ಲಭಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯಾಜಕನು ಇಸ್ರಾಯೇಲ್ಯರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದನ್ನು ಪರಿಹರಿಸುವದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನೂ ದೋಷಪರಿಹಾರಕಯಜ್ಞವನ್ನೂ ಮಾಡಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಈ ರೀತಿಯಲ್ಲಿ ಇಸ್ರೇಲರ ಇಡೀ ಸಮುದಾಯದವರ ಕ್ಷಮೆಗಾಗಿ ಯಾಜಕನು ಪ್ರಾಯಶ್ಚಿತ್ತ ಮಾಡುವನು. ಯಾಕೆಂದರೆ ಅದು ತಿಳಿಯದೆ ಮಾಡಿದ ತಪ್ಪಾಗಿತ್ತು ಮತ್ತು ಆ ತಪ್ಪಿಗಾಗಿ ಅವರು ತಮ್ಮ ಅರ್ಪಣೆಯನ್ನು ಯೆಹೋವನಿಗೆ ಕಾಣಿಕೆಯಾಗಿ ತಂದರು ಮತ್ತು ಯೆಹೋವನ ಎದುರಿನಲ್ಲಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:25
13 ತಿಳಿವುಗಳ ಹೋಲಿಕೆ  

ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ


ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ಮೋಶೆಯ ನಿಯಮದ ಮೂಲಕವಾಗಿ ನೀತಿವಂತರೆಂದು ನಿರ್ಣಯಿಸಲಾಗದ ಎಲ್ಲಾ ಪಾಪಗಳಿಂದ ಬಿಡುಗಡೆಯಾಗಿ, ಯೇಸುವನ್ನು ನಂಬುವ ಪ್ರತಿಯೊಬ್ಬರೂ ಯೇಸುವಿನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರಾಗುವರು.


ಆಗ ಯೇಸು, “ತಂದೆಯೇ, ಇವರನ್ನು ಕ್ಷಮಿಸಿ, ತಾವು ಏನು ಮಾಡುತ್ತಿದ್ದಾರೆಂದು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಉಡುಪನ್ನು ಚೀಟುಹಾಕಿ, ಹಂಚಿಕೊಂಡರು.


ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು.


ಆಗ ಅವನ ಪಟ್ಟಣದ ಜನರೆಲ್ಲರೂ ಅವನು ಸಾಯುವಂತೆ ಅವನ ಮೇಲೆ ಕಲ್ಲೆಸೆಯಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಇಸ್ರಾಯೇಲರಲ್ಲಿ ಇದನ್ನು ಕೇಳಿ ಭಯಪಡುವರು.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು?


ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು