Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:14 - ಕನ್ನಡ ಸಮಕಾಲಿಕ ಅನುವಾದ

14 ಅಷ್ಟುಮಾತ್ರವಲ್ಲದೆ, ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತೆಗೆದುಕೊಂಡು ಬರಲಿಲ್ಲ. ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ನಮಗೆ ಸ್ವಾಧೀನಕ್ಕೆ ಕೊಡಲಿಲ್ಲ. ಈ ಮನುಷ್ಯರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಷ್ಟುಮಾತ್ರವಲ್ಲ, ಹಾಲೂಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲೇಯಿಲ್ಲ; ಹೊಲ ಹಾಗು ದ್ರಾಕ್ಷೆತೋಟಗಳನ್ನು ನಮ್ಮ ಸ್ವಾಧೀನಕ್ಕೆ ಕೊಟ್ಟೂ ಇಲ್ಲ. ಈ ಜನರ ಕಣ್ಣಿಗೆ ಮಣ್ಣುಹಾಕಬೇಕೆಂದಿರುವೆಯಾ? ನಾವು ಬರುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಷ್ಟು ಮಾತ್ರವೇ ಅಲ್ಲ, ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲವಲ್ಲಾ; ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವದಿಲ್ಲ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾವು ನಿನ್ನನ್ನು ಯಾಕೆ ಹಿಂಬಾಲಿಸಬೇಕು? ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಕರೆದುಕೊಂಡು ಬರಲಿಲ್ಲ. ನೀನು ನಮ್ಮ ಸ್ವಂತಕ್ಕೆ ಹೊಲಗಳನ್ನಾಗಲಿ ದ್ರಾಕ್ಷೇತೋಟಗಳನ್ನಾಗಲಿ ಕೊಡಲಿಲ್ಲ! ನೀನು ಈ ಜನರಿಗೆ ಇದೇ ರೀತಿ ಮೋಸಮಾಡಬೇಕೆಂದಿರುವೆಯೋ? ನಾವು ಬರುವುದಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:14
12 ತಿಳಿವುಗಳ ಹೋಲಿಕೆ  

ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಅಮ್ಮೋನ್ಯನಾದ ನಾಹಾಷನು ಅವರಿಗೆ, “ಇಸ್ರಾಯೇಲರಿಗೆ ಅವಮಾನಪಡಿಸುವುದಕ್ಕಾಗಿ ನಿಮ್ಮೆಲ್ಲರ ಬಲಗಣ್ಣುಗಳನ್ನು ಕಿತ್ತು ಹಾಕುವ ಒಂದೇ ನಿಬಂಧನೆಯಿಂದ, ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ,” ಎಂದನು.


ಆದರೆ ಫಿಲಿಷ್ಟಿಯರು ಅವನನ್ನು ಹಿಡಿದು, ಅವನ ಕಣ್ಣುಗಳನ್ನು ಕಿತ್ತು, ಅವನನ್ನು ಗಾಜಕ್ಕೆ ಒಯ್ದು ಎರಡು ಕಂಚಿನ ಸಂಕೋಲೆಗಳನ್ನು ಹಾಕಿದರು. ಸೆರೆಮನೆಯಲ್ಲಿ ಅವನನ್ನು ಬೀಸುವುದಕ್ಕೆ ಹಚ್ಚಿದರು.


ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವುದಕ್ಕೆ ಏಕೆ ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಕರಕೊಂಡು ಬಂದಿರಿ. ಈ ಸ್ಥಳದಲ್ಲಿ ಧಾನ್ಯವಾದರೂ ಅಂಜೂರವಾದರೂ ದ್ರಾಕ್ಷಿ ತೋಟವಾದರೂ ದಾಳಿಂಬೆ ಹಣ್ಣಾದರೂ ಇಲ್ಲ. ಕುಡಿಯುವುದಕ್ಕೆ ನೀರು ಸಹ ಇಲ್ಲ,” ಎಂದರು.


ಆದರೆ ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು, ಅದನ್ನು ಬೀಳುಬಿಡಬೇಕು. ಆಗ ನಿಮ್ಮ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ. ಅವರು ಬಿಟ್ಟದ್ದನ್ನು ಕಾಡುಮೃಗಗಳು ತಿನ್ನಲಿ. ನಿಮ್ಮ ದ್ರಾಕ್ಷಿತೋಟದ, ಓಲಿವ್ ಮರಗಳ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು.


“ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ, ದ್ರಾಕ್ಷಿ ತೋಟವನ್ನೂ ಮೇಯಿಸಿದರೆ, ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ, ದ್ರಾಕ್ಷಿ ತೋಟದಲ್ಲಿನ ಉತ್ತಮವಾದದ್ದನ್ನೂ ಈಡು ಕೊಡಬೇಕು.


ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


“ಆರು ವರ್ಷ ನಿಮ್ಮ ಭೂಮಿಗೆ ಬೀಜ ಹಾಕಿ, ಅದರ ಬೆಳೆಯನ್ನು ಕೂಡಿಸಬೇಕು.


ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ. ಅದರ ಫಲವು ಇವೇ.


ಯೆಹೋವ ದೇವರು ನಮ್ಮನ್ನು ಇಷ್ಟಪಟ್ಟರೆ ಹಾಲೂ ಜೇನೂ ಹರಿಯುವ ದೇಶವಾಗಿರುವ ಆ ದೇಶಕ್ಕೆ ನಮ್ಮನ್ನು ಬರಮಾಡಿ, ಅದನ್ನು ನಮಗೆ ಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು