Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:32 - ಕನ್ನಡ ಸಮಕಾಲಿಕ ಅನುವಾದ

32 ಭೂಮಿಯು ತನ್ನ ಬಾಯಿತೆರೆದು, ಅವರನ್ನೂ, ಅವರ ಮನೆಗಳನ್ನೂ, ಕೋರಹನಿಗೆ ಸಂಬಂಧಪಟ್ಟ ಸಕಲ ಜನರನ್ನೂ, ಅವರಿಗಿದ್ದದ್ದನ್ನೆಲ್ಲಾ ನುಂಗಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಭೂಮಿ ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸೇರಿದ ವ್ಯಕ್ತಿಗಳೆಲ್ಲರನ್ನೂ ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಭೂವಿುಯು ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಭೂಮಿಯೇ ಬಾಯಿತೆರೆದು ಅವರನ್ನು ನುಂಗಿಬಿಟ್ಟಿತೊ ಎಂಬಂತೆ, ಅವರ ಕುಟುಂಬಗಳವರನ್ನು ಕೋರಹನ ಎಲ್ಲಾ ಹಿಂಬಾಲಕರನ್ನು ಮತ್ತು ಅವರ ಆಸ್ತಿಯೆಲ್ಲವನ್ನು ನುಂಗಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:32
21 ತಿಳಿವುಗಳ ಹೋಲಿಕೆ  

ಆದರೂ ಕೋರಹನ ಮಕ್ಕಳು ಸಾಯಲಿಲ್ಲ.


ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಿತು. ಅದು ಬಾಯಿತೆರೆದು, ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತು.


ಆಗ ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ, ಅಬೀರಾಮನ ಗುಂಪನ್ನು ಮುಚ್ಚಿಬಿಟ್ಟಿತು.


ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ವೈಭವ, ಸಮೂಹ, ಕೋಲಾಹಲ, ಉಲ್ಲಾಸಪಡುವುದು ಇವೆಲ್ಲವೂ ಅದರಲ್ಲಿ ಬೀಳುವುವು.


ಕೊಹಾತನ ಪುತ್ರರು: ಅವನ ಮಗ ಅಮ್ಮೀನಾದಾಬ್, ಅವನ ಮಗ ಕೋರಹ, ಅವನ ಮಗ ಅಸ್ಸೀರ್,


ನನ್ನನ್ನು ರಕ್ಷಿಸುವ ದೇವರಾದ ಯೆಹೋವ ದೇವರೇ, ಹಗಲಿರುಳು ನಿಮ್ಮ ಮುಂದೆ ಮೊರೆಯಿಡುತ್ತೇನೆ.


ಯೆಹೋವ ದೇವರೇ, ನಿಮ್ಮ ದೇಶವನ್ನು ನೀವು ದಯೆ ತೋರಿಸಿದ್ದೀರಿ. ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರಮಾಡಿದ್ದೀರಿ.


ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ!


ಅವನು ತಹತನ ಮಗನು, ಅವನು ಅಸ್ಸೀರನ ಮಗನು, ಅವನು ಎಬ್ಯಾಸಾಫನ ಮಗನು, ಅವನು ಕೋರಹನ ಮಗನು,


ರೂಬೇನನ ಮಗ ಎಲೀಯಾಬನ ಪುತ್ರರಾಗಿರುವ ದಾತಾನ್, ಅಬೀರಾಮರು ದಂಗೆಯೆದ್ದಾಗ, ಭೂಮಿಯು ಬಾಯಿತೆರೆದು ಅವರ ಮನೆಗಳನ್ನೂ, ಅವರಿಗಿದ್ದ ಎಲ್ಲಾ ಆಸ್ತಿಯನ್ನೂ, ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲಾ ಪಶುಪ್ರಾಣಿಗಳನ್ನೂ, ಸಮಸ್ತ ಇಸ್ರಾಯೇಲರ ಮಧ್ಯದಲ್ಲಿ ಹೇಗೆ ನುಂಗುವಂತೆ ದೇವರು ಮಾಡಿದರೆಂಬುದನ್ನೂ ಜ್ಞಾಪಕಮಾಡಿಕೊಳ್ಳಿರಿ.


“ನಮ್ಮ ತಂದೆಯು ಮರುಭೂಮಿಯಲ್ಲಿ ಸತ್ತನು. ಅವನು ಕೋರಹನ ಗುಂಪಿನಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ, ತನ್ನ ಪಾಪದಲ್ಲಿಯೇ ಸತ್ತನು. ಅವನಿಗೆ ಪುತ್ರರು ಇರಲಿಲ್ಲ.


ಆದರೆ ಯೆಹೋವ ದೇವರು ಹೊಸದನ್ನು ಮಾಡಿ, ಭೂಮಿಯು ತನ್ನ ಬಾಯಿತೆರೆದು, ಇವರನ್ನೂ, ಇವರಿಗಿರುವ ಎಲ್ಲದನ್ನೂ ನುಂಗಿ, ಇವರು ತೀವ್ರವಾಗಿ ಪಾತಾಳಕ್ಕೆ ಇಳಿಯುವಂತೆ ಮಾಡಿ, ಈ ಮನುಷ್ಯರು ಯೆಹೋವ ದೇವರನ್ನು ರೇಗಿಸಿದ್ದಾರೆಂದು ನೀವು ತಿಳಿದುಕೊಳ್ಳುವಿರಿ,” ಎಂದನು.


ಒಬ್ಬೊಬ್ಬನು ತನ್ನ ತನ್ನ ಧೂಪ ಪಾತ್ರೆಯನ್ನು ತೆಗೆದುಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ, ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ಧೂಪ ಪಾತ್ರೆಗಳಾದ ನಿಮ್ಮ ಧೂಪ ಪಾತ್ರೆಗಳನ್ನು ಯೆಹೋವ ದೇವರ ಎದುರಿಗೆ ತನ್ನಿರಿ. ನೀನೂ, ಆರೋನನೂ, ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತೆಗೆದುಕೊಂಡು ಬನ್ನಿರಿ,” ಎಂದನು.


ನೀನು ಈಗ ಶಾಪಗ್ರಸ್ತನಾಗಿದ್ದಿ. ನೀನು ಸುರಿಸಿದ ನಿನ್ನ ತಮ್ಮನ ರಕ್ತವನ್ನು ಸ್ವೀಕರಿಸಲು ಬಾಯಿತೆರೆದಿರುವ ಭೂಮಿಯಿಂದ ತಿರಸ್ಕಾರವಾಗಿದ್ದಿ.


ಅವನು ಹೇಳ ಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ, ಅವರ ಕೆಳಗಿರುವ ನೆಲವು ಸೀಳಿ


ಅವರು ತಮಗೆ ಸಂಬಂಧಪಟ್ಟವುಗಳೆಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು. ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.


ಕೋರಹನ ನಿಮಿತ್ತ ಸತ್ತು ಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕು ಸಾವಿರ ಏಳು ನೂರು ಮಂದಿಯಾಗಿದ್ದರು.


ಭೂಮಿಯು ತನ್ನ ಬಾಯಿಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು. ಹಾಗೆಯೇ ಆ ಗುಂಪಿನವರಲ್ಲಿ ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು. ಹೀಗೆ ಇಸ್ರಾಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು. ಅವರು ದೃಷ್ಟಾಂತವಾದರು.


ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.”


ಭೂಮಿಯು ಬಿರುಕುಬಿಟ್ಟಿದೆ, ಬಿರಿದು ಬಿರಿದಿದೆ, ಭೂಮಿಯು ಕದಲಿಹೋಗಿದೆ.


“ನೀವು ಲೇವಿಯರೊಳಗಿಂದ ಕೊಹಾತ್ಯರ ಗೋತ್ರದ ಕಟುಂಬಗಳು ನಾಶವಾಗಿ ಹೋಗದಂತೆ ನೋಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು