Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:46 - ಕನ್ನಡ ಸಮಕಾಲಿಕ ಅನುವಾದ

46 ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಯಿತು; ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಮೋಶೆಯು ಆರೋನನಿಗೆ, “ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಗಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಕೆಯಿಂದ ತೆಗೆದ ಕೆಂಡಗಳನ್ನು ಇಟ್ಟು ಧೂಪಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:46
23 ತಿಳಿವುಗಳ ಹೋಲಿಕೆ  

ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.”


ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.


ತಮ್ಮ ಕ್ರಿಯೆಗಳಿಂದ ದೇವರನ್ನು ಅಸಂತೋಷಪಡಿಸಿದರು. ಆದ್ದರಿಂದ ವ್ಯಾಧಿಯು ಅವರಲ್ಲಿ ಹಬ್ಬಿತು.


ಚೆರೂಯಳ ಮಗ ಯೋವಾಬನು ಎಣಿಸಲು ಆರಂಭಿಸಿದನು. ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ಕೋಪಾಗ್ನಿಯು ಬಂದದ್ದರಿಂದ, ಅವನು ಪೂರ್ತಿಗೊಳಿಸಲಿಲ್ಲ. ಆ ಲೆಕ್ಕವು ಅರಸನಾದ ದಾವೀದನ ಇತಿಹಾಸಗಳ ಪುಸ್ತಕದಲ್ಲಿ ಲಿಖಿತವಾಗಲಿಲ್ಲ.


“ಇಸ್ರಾಯೇಲರ ಮೇಲೆ ಇನ್ನು ಮುಂದೆ ಎಂದಿಗೂ ನನ್ನ ಕೋಪಾಗ್ನಿಯು ಬಾರದ ಹಾಗೆ ಪರಿಶುದ್ಧ ಸ್ಥಳವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು.


ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ, ಅದನ್ನು ಅಗಿಯುವುದಕ್ಕಿಂತ ಮುಂಚೆ ಯೆಹೋವ ದೇವರು ಜನರನ್ನು ಘೋರ ವ್ಯಾಧಿಯಿಂದ ಸಾಯಿಸಿದನು.


ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ.


ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನೀವು ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಲ್ಲಿಯೂ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದಿರಿ.


ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.


ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”


ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ, ಇಸ್ರಾಯೇಲಿನವನನ್ನೂ ಆ ಮಹಿಳೆಯನ್ನೂ ಒಂದೇ ಬಾರಿಗೆ ಇಬ್ಬರ ಹೊಟ್ಟೆಯನ್ನು ತಿವಿದನು. ಹೀಗೆ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.


ಅವರ ಮುಂದೆ ವ್ಯಾಧಿಯು ಹೋಯಿತು. ವ್ಯಾಧಿಯು ಅವನ ಹೆಜ್ಜೆಗಳನ್ನು ಅನುಸರಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು