Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:47 - ಕನ್ನಡ ಸಮಕಾಲಿಕ ಅನುವಾದ

47 ಆರೋನನು, ಮೋಶೆಯು ಹೇಳಿದ ಹಾಗೆ ಅದನ್ನು ತೆಗೆದುಕೊಂಡು, ಜನಸಮೂಹದ ಮಧ್ಯಕ್ಕೆ ಓಡಿಬಂದನು. ಆಗ ವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಅವನು ಧೂಪವನ್ನು ಇಟ್ಟು, ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಮೋಶೆ ಹೇಳಿದಂತೆಯೇ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮುದಾಯದವರ ಬಳಿಗೆ ಓಡಿಬಂದಾಗ ಆ ಘೋರವ್ಯಾಧಿ ಜನರಲ್ಲಿ ಹರಡಿಕೊಳ್ಳುತ್ತಲಿತ್ತು. ಅವನು ಧೂಪಹಾಕಿ ಆ ಜನರ ಪರವಾಗಿ ದೋಷಪರಿಹಾರ ಮಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿ ಆ ಜನರಲ್ಲಿ ಹರಡಿಕೊಳ್ಳುತ್ತಾ ಇತ್ತು. ಆದದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿಹೋದಾಗ, ಘೋರವ್ಯಾಧಿ ಆ ಜನರಲ್ಲಿ ಹರಡಿಕೊಳ್ಳುತ್ತಾ ಇತ್ತು. ಆದ್ದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:47
9 ತಿಳಿವುಗಳ ಹೋಲಿಕೆ  

ಕೆಟ್ಟದ್ದಕ್ಕೆ ಸೋಲಬೇಡಿರಿ, ಕೆಟ್ಟದ್ದನ್ನು ಒಳ್ಳೆಯದರಿಂದ ಜಯಿಸಿರಿ.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.


ತಮ್ಮ ಕ್ರಿಯೆಗಳಿಂದ ದೇವರನ್ನು ಅಸಂತೋಷಪಡಿಸಿದರು. ಆದ್ದರಿಂದ ವ್ಯಾಧಿಯು ಅವರಲ್ಲಿ ಹಬ್ಬಿತು.


ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು.


ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡದ್ದರಿಂದ ವ್ಯಾಧಿಯು ಶಮನವಾಯಿತು.


ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು